ನವದೆಹಲಿ: ಈ ಬಾರಿ ನಡೆಯಲಿರುವ ಪಶ್ಚಿಮ ಬಂಗಾಳದ (west bengal) ವಿಧಾನ ಸಭಾ ಚುನಾವಣೆಯಲ್ಲಿ (Assembly election) ಕಾಂಗ್ರೆಸ್ (Congress) ಏಕಾಂಗಿಯಾಗಿ ಸ್ಪರ್ಧಿಸಲಿದೆ. ಇಲ್ಲಿನ 294 ಸ್ಥಾನಗಳಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ. ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress National President Mallikarjun Kharge) ಅವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working Committee) ಸಭೆಯಲ್ಲಿ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗ (CPI(M)-led Left Front) ಅಥವಾ ತೃಣಮೂಲ ಕಾಂಗ್ರೆಸ್ (Trinamool Congress) ಜೊತೆ ಮೈತ್ರಿ ಮಾಡಿಕೊಳ್ಳದೇ ಇರಲು ಕಾಂಗ್ರೆಸ್ ನಿರ್ಧಾರ ಮಾಡಿದೆ.
ಮುಂದಿನ ಮಾರ್ಚ್- ಏಪ್ರಿಲ್ ನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗ ಅಥವಾ ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧಿಕೃತವಾಗಿ ತಿಳಿಸಿದೆ.
SBI CBO Recruitment 2026: ಪದವೀಧರರಿಗೆ ಗುಡ್ನ್ಯೂಸ್; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್ಬಿಐ
ಪಶ್ಚಿಮ ಬಂಗಾಳದ ಪಕ್ಷದ ಪ್ರತಿನಿಧಿಗಳಾಗಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುವಾಂಕರ್ ಸರ್ಕಾರ್, ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಐದು ಬಾರಿ ಲೋಕಸಭಾ ಸದಸ್ಯರಾಗಿರುವ ಅಧೀರ್ ರಂಜನ್ ಚೌಧರಿ ಮತ್ತು ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಲೋಕಸಭಾ ಸದಸ್ಯ ಇಶಾ ಖಾನ್ ಚೌಧರಿ ನೇತೃತ್ವದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳದ ಪಕ್ಷದ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ತಿಳಿಸಿದರು.
ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಅಥವಾ ಸೀಟು ಹಂಚಿಕೆ ಕುರಿತು ಈ ಹಿಂದಿನ ಅನುಭವಗಳು ಪಕ್ಷದ ಕಾರ್ಯಕರ್ತರನ್ನು ದುರ್ಬಲಗೊಳಿಸಿವೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲರೊಂದಿಗಿನ ಚರ್ಚಿಸಿದ ಬಳಿಕ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಿದ್ಧತೆಗಳು ಪ್ರಾರಂಭವಾಗುತ್ತವೆ ಎಂದು ತಿಳಿಸಿದರು.
ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇನ್ನು ಹಲವರು ಉಪಸ್ಥಿತರಿದ್ದರು.
ಸಿಪಿಐ(ಎಂ) ನೇತೃತ್ವದ ಎಡರಂಗದೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದ ಅಧೀರ್ ರಂಜನ್ ಚೌಧರಿ ಸಭೆಯ ಬಳಿಕ ಮಾತನಾಡಿ, ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ 2016ರಿಂದ ಎಡರಂಗ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯಲ್ಲಿ ಸಿಪಿಐ(ಎಂ) ಮಾಜಿ ಪ್ರಧಾನ ಕಾರ್ಯದರ್ಶಿ ದಿವಂಗತ ಸೀತಾರಾಮ್ ಯೆಚೂರಿ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಐದು ಬಾರಿ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಪ್ರಮುಖ ಪಾತ್ರವಹಿಸಿದ್ದರು. ಯೆಚೂರಿಯವರ ನಿಧನದ ಬಳಿಕ ಸಿಪಿಐ(ಎಂ)ನಲ್ಲಿ ಕಾಂಗ್ರೆಸ್ ಜೊತೆ ಸೇರಲು ಧ್ವನಿ ಎತ್ತುವ ಒಬ್ಬ ರಾಷ್ಟ್ರೀಯ ನಾಯಕನೂ ಇಲ್ಲ. ಹೀಗಾಗಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.