ನವದೆಹಲಿ: ಪಶ್ಚಿಮ ಬಂಗಾಳ ಚುನಾವಣಾ ದಿನಾಂಕಗಳನ್ನು ಘೋಷಿಸಿದ ಬಳಿಕ ಚುನಾವಣಾ ಆಯೋಗವು ಮಮತಾ ಬ್ಯಾನರ್ಜಿ (Election Commission) ನೇತೃತ್ವದ ಸರ್ಕಾರದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಸೇರಿದಂತೆ ರಾಜ್ಯದ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಲು ಆದೇಶಿಸಿದೆ. ಭಾನುವಾರ ರಾತ್ರಿ ರಾಜ್ಯ ಸರ್ಕಾರಕ್ಕೆ ಕಳುಹಿಸಲಾದ ಪತ್ರದಲ್ಲಿ, ಚುನಾವಣಾ ಆಯೋಗವು 1993 ರ ಬ್ಯಾಚ್ನ ಐಎಎಸ್ ಅಧಿಕಾರಿ ದುಷ್ಯಂತ್ ನರಿಯಾಲ ಅವರನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿತು ಮತ್ತು ನಂದಿನಿ ಚಕ್ರವರ್ತಿಯನ್ನು ಚುನಾವಣಾ ಸಂಬಂಧಿತ ಕಾರ್ಯಯೋಜನೆಗಳಿಂದ ಹೊರಗಿಡಲಾಗುವುದು ಎಂದು ಹೇಳಿದೆ.
ರಾಜ್ಯ ಪೊಲೀಸ್ ಆಯುಕ್ತ ಪೀಯುಷ್ ಪಾಂಡೆ ಅವರನ್ನು ಸಿದ್ಧ್ ನಾಥ್ ಗುಪ್ತಾ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ಸುಪ್ರತಿಮ್ ಸರ್ಕಾರ್ ಅವರನ್ನು ಅಜಯ್ ಕುಮಾರ್ ನಂದ್ ಅವರ ಸ್ಥಾನದಲ್ಲಿ ನೇಮಿಸಲಾಗಿದೆ. ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿ ಜಗದೀಶ್ ಪ್ರಸಾದ್ ಮೀನಾ ಅವರನ್ನು ಕೂಡ ಚುನಾವಣಾ ಆಯೋಗ ವಜಾಗೊಳಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳನ್ನು ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಯಾವುದೇ ಚುನಾವಣೆಗೆ ಸಂಬಂಧಿಸಿದ ಹುದ್ದೆಗಳಲ್ಲಿ ನಿಯೋಜಿಸಲಾಗುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಸುಜೀತ್ ಕೆಆರ್ ಮಿಶ್ರಾ ಸಹಿ ಮಾಡಿದ ಸಂವಹನದಲ್ಲಿ ತಿಳಿಸಲಾಗಿದೆ. ಚುನಾವಣಾ ಆಯೋಗದ ಈ ಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಸೋಮವಾರ ಸಂಜೆ 4 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. ಚುನಾವಣಾ ಆಯೋಗದ ನಿರ್ಧಾರದ ಬಳಿಕ ತೃಣ ಮೂಲ ಕಾಂಗ್ರೆಸ್ ಇಂದು ರಾಜ್ಯಸಭೆಯಿಂದ ಒಂದು ದಿನದ ಸಭಾತ್ಯಾಗ ನಡೆಸಿತು.
ಚುನಾವಣೆ ಗೆಲ್ಲಲು ಪ್ರತಿಸ್ಪರ್ಧಿ ಬಿಜೆಪಿ "ಸರ್ಕಾರಿ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ತೃಣಮೂಲ ಸಂಸದ ಶತಾಬ್ದಿ ರಾಯ್ ಆರೋಪಿಸಿದ್ದಾರೆ. ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಎಲ್ಲಾ ತಂತ್ರಗಳನ್ನು ಬಳಸುತ್ತಿದೆ. ಅದು ಸರ್ಕಾರಿ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಕಾರಣಕ್ಕಾಗಿ ಮುಖ್ಯ ಕಾರ್ಯದರ್ಶಿಯನ್ನು ತೆಗೆದುಹಾಕಲಾಯಿತು. ಸಾರ್ವಜನಿಕರು ತೃಣಮೂಲ ಪಕ್ಷದೊಂದಿಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಳೆದ ಬಾರಿಯ 8 ಹಂತಗಳ ಬದಲು 2 ಹಂತಗಳಲ್ಲಿ ಮತದಾನ: ಕಾರಣವೇನು?
ರಾಜ್ಯದ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅಧಿಕಾರಿಗಳನ್ನು ತೆಗೆದುಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ಚುನಾವಣಾ ಆಯೋಗವು ತನ್ನ ನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ತರಲಾಗುವುದು ಎಂದು ಹೇಳಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ಇಬ್ಬರು ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಸೇವೆಗೆ ಸೇರಿದ ವರದಿಯನ್ನು ನೀಡುವಂತೆ ಕೇಳಿದೆ.