Bhupesh Baghel: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ದಾಳಿ ನಡೆಸಿದೆ.

ಭೂಪೇಶ್ ಬಘೇಲ್

ರಾಯ್ಪುರ್: ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೇಲ್ (Bhupesh Baghel) ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ದಾಳಿ ನಡೆಸಿದೆ. ದುರ್ಗ್ ಜಿಲ್ಲೆಯ ಭಿಲಾಯಿ ನಗರದಲ್ಲಿರುವ ಅವರ ಮನೆ ಸೇರಿದಂತೆ ಬಾಘೇಲ್ಗಳಿಗೆ ಸಂಬಂಧಿಸಿದ ಕನಿಷ್ಠ 14 ಸ್ಥಳಗಳಲ್ಲಿ ED ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ಸಮಯದಲ್ಲಿ, ಹಲವಾರು ನಿರ್ಣಾಯಕ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆದ ನಂತರ ಭೂಪೇಶ್ ಬಘೇಲ್ ಟ್ವೀಟ್ ಮಾಡಿದ್ದು, ಏಳು ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಸುಳ್ಳು ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಹೀಗಿರುವಾಗ, ಇಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ನಿವಾಸಕ್ಕೆ ಇಂದು ಬೆಳಿಗ್ಗೆ ಪ್ರವೇಶಿಸಿದ್ದಾರೆ. ಈ ಪಿತೂರಿಯ ಮೂಲಕ ಯಾರಾದರೂ ಪಂಜಾಬ್ನಲ್ಲಿ ಕಾಂಗ್ರೆಸ್ ಅನ್ನು ತಡೆಯಲು ಪ್ರಯತ್ನಿಸುತ್ತಿದ್ದರೆ, ಅದು ತಪ್ಪು ತಿಳುವಳಿಕೆ’’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
सात वर्षों से चले आ रहे झूठे केस को जब अदालत में बर्खास्त कर दिया गया तो आज ED के मेहमानों ने पूर्व मुख्यमंत्री, कांग्रेस महासचिव भूपेश बघेल के भिलाई निवास में आज सुबह प्रवेश किया है.
— Bhupesh Baghel (@bhupeshbaghel) March 10, 2025
अगर इस षड्यंत्र से कोई पंजाब में कांग्रेस को रोकने का प्रयास कर रहा है, तो यह गलतफहमी है.
-…
ಈ ಸುದ್ದಿಯನ್ನೂ ಓದಿ: ED Raid: ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಗೆ ಇಡಿ ದಾಳಿ, ಬೋರ್ವೆಲ್ ಹಗರಣ ತನಿಖೆ
ಛತ್ತೀಸ್ಗಢ ಮದ್ಯ ಹಗರಣದಿಂದ ರಾಜ್ಯ ಖಜಾನೆಗೆ ಭಾರಿ ನಷ್ಟ ಉಂಟಾಗಿದೆ. ಸುಮಾರು 2,100 ಕೋಟಿ ರೂ.ಗಳಿಗೂ ಹೆಚ್ಚು ಹಣ ನಷ್ಟವಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಛತ್ತೀಸ್ಗಢ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ. 2 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹಗರಣದ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಐಎಎಸ್ ಅಧಿಕಾರಿ ಅನಿಲ್ ತುತೇಜಾ, ಅಬಕಾರಿ ಇಲಾಖೆ ಎಂಡಿ ಎಪಿ ತ್ರಿಪಾಠಿ ಮತ್ತು ಉದ್ಯಮಿ ಅನ್ವರ್ ಧೇಬರ್ ಅವರ ಮೂಲಕ ಆಗಿನ ಭೂಪೇಶ್ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿತ್ತು ಇಡಿ ಹೇಳಿದೆ.