ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೇಲೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಹತ್ಯೆಗೆ ಯತ್ನ, ವಿಡಿಯೋ ನೋಡಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡು ಹಾರಿಸಲಾಗಿದ್ದು, ಅವರು ಸ್ವಲ್ಪದರಲ್ಲಿಯೇ ಬಚಾವ್‌ ಆಗಿದ್ದಾರೆ. ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಅಬ್ದುಲ್ಲಾ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೇಲೆ ಮದುವೆ ಮನೆಯಲ್ಲಿ ಗುಂಡಿನ ದಾಳಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 12, 2026 7:12 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ( Farooq Abdullah) ಅವರ ಮೇಲೆ ಗುಂಡು ಹಾರಿಸಲಾಗಿದ್ದು, ಅವರು ಸ್ವಲ್ಪದರಲ್ಲಿಯೇ ಬಚಾವ್‌ ಆಗಿದ್ದಾರೆ. ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಅಬ್ದುಲ್ಲಾ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಕುರಿತು ಇದೀಗ ಫಾರೂಕ್ ಅಬ್ದುಲ್ಲಾ, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಭದ್ರತೆಯ ಹೊರತಾಗಿಯೂ ದಾಳಿಕೋರ ಮಾಜಿ ಮುಖ್ಯಮಂತ್ರಿ ಬಳಿ ಹೇಗೆ ಬಂದ ಎಂದು ಅವರು ಪ್ರಶ್ನಿಸಿದರು. 88 ವರ್ಷದ ಅಬ್ದುಲ್ಲಾ ಅವರು "ಝಡ್-ಪ್ಲಸ್" ಭದ್ರತಾ ರಕ್ಷಕರಾಗಿದ್ದಾರೆ - ಇದು ದೇಶದಲ್ಲಿ ನಾಗರಿಕರಿಗೆ ನೀಡಲಾಗುವ ಅತ್ಯುನ್ನತ ಮಟ್ಟದ ರಕ್ಷಣೆಯಾಗಿದೆ - ಇದು ಅವರಿಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಕಮಾಂಡೋಗಳು ಮತ್ತು ಪೊಲೀಸರಿಂದ 24/7 ರಕ್ಷಣೆಯನ್ನು ನೀಡುತ್ತದೆ. ಲೋಡ್ ಮಾಡಿದ ಪಿಸ್ತೂಲ್ ಹೊಂದಿರುವ ವ್ಯಕ್ತಿ ಪಾಯಿಂಟ್ ಬ್ಲಾಂಕ್ ವ್ಯಾಪ್ತಿಯಲ್ಲಿ ಹೋಗಿ ಗುಂಡು ಹಾರಿಸಲು ಸಾಧ್ಯವಾಯಿತು ಎಂದು ಒಮರ್‌ ಟ್ವೀಟ್‌ ಮಾಡಿದ್ದಾರೆ.

ವಿಡಿಯೋ ನೋಡಿ



ಇನ್ನು ಆರೋಪಿಯನ್ನು ಕಮಲ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಕಳೆದ 20 ವರ್ಷಗಳಿಂದ "ಈ ಕ್ಷಣಕ್ಕಾಗಿ ಕಾಯುತ್ತಿದ್ದೆ" ಎಂದು ಜಮ್ವಾಲ್ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರಂಭಿಕ ವಿಚಾರಣೆಯ ನಂತರ, ಜಮ್ವಾಲ್ ತನ್ನ ಪರವಾನಗಿ ಪಡೆದ ಆಯುಧದಿಂದ ಒಂದು ಸುತ್ತು ಗುಂಡು ಹಾರಿಸಿದ್ದಾನೆ ಮತ್ತು ಅಬ್ದುಲ್ಲಾ ಗುರಿಯಾಗಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ಆರೋಪಿ ಕಮಲ್ ಸಿಂಗ್ ಫಾರೂಕ್ ಅಬ್ದುಲ್ಲಾ ಬಳಿಗೆ ಬಂದು ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅವನು ಗುಂಡು ಹಾರಿಸಿದ ತಕ್ಷಣ, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ತಡೆದು ವಶಕ್ಕೆ ಪಡೆದಿರುವುದು ಕಾಣಿಸುತ್ತದೆ. ಘಟನೆ ಬಳಿಕ ಫಾರೂಕ್ ಅಬ್ದುಲ್ಲಾ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಚೌಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ.