ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಮೂಡಿಸಿದ ಭರತ್ ತಿವಾರಿ ಎನ್‌ಕೌಂಟರ್ ಪ್ರಕರಣ: ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

Bharat Tiwari Encounter: ಬಿಹಾರದ ಭೋಜಪುರ ಜಿಲ್ಲೆಯಲ್ಲಿ ನಡೆದ ಭರತ್ ಭೂಷಣ್ ತಿವಾರಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಘಟನೆ ಬಿಹಾರದಲ್ಲಿ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಭರತ್ ತಿವಾರಿ ಎನ್‌ಕೌಂಟರ್‌ ಪ್ರಕರಣಕ್ಕೆ ಹೊಸ ತಿರುವು

ಭರತ್ ಭೂಷಣ್ ತಿವಾರಿ ಮತ್ತು ಘಟನೆ ನಡೆದ ಸ್ಥಳದಲ್ಲಿದ್ದ ಪೊಲೀಸರು -

Profile
Sushmitha Jain Jun 23, 2026 11:43 PM

ಪಾಟ್ನಾ, ಜೂ. 23: ಬಿಹಾರದ ಭೋಜಪುರ ಜಿಲ್ಲೆಯಲ್ಲಿ ನಡೆದ ಭರತ್ ಭೂಷಣ್ ತಿವಾರಿ ಎನ್‌ಕೌಂಟರ್ (Bharat Tiwari Encounter) ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್‌ ಸಿಬ್ಬಂದಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತನ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಸೋಮವಾರ ಶಾಹಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಎಸ್‌ಪಿ ಕಚೇರಿ ಪ್ರಕಟಣೆಯಲ್ಲಿ ಹೇಳಿದೆ. ಈ ಎಫ್‌ಐಆರ್‌ನಲ್ಲಿ ಅಂದಿನ ಜಗದೀಶ್‌ಪುರ ಎಸ್‌ಡಿಪಿಒ, ಶಾಹಪುರ ಎಸ್‌ಎಚ್‌ಒ ಮತ್ತು ಘಟನೆಗೆ ಸಂಬಂಧಿಸಿದ ಇತರ ಪೊಲೀಸ್ ಸಿಬ್ಬಂದಿಯ ಹೆಸರನ್ನು ಉಲ್ಲೇಖಿಸಲಾಗಿದೆ. ಶಾಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಲೌತಿ ಗ್ರಾಮದ ನಿವಾಸಿಯಾಗಿದ್ದ ಭರತ್ ತಿವಾರಿ ಜೂನ್ 17ರಂದು ನಡೆದ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದರು.

ಈ ಘಟನೆಯು ಬಿಹಾರದಲ್ಲಿ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಪೊಲೀಸರ ಅತಿಯಾದ ಬಲಪ್ರಯೋಗದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ಶನಿವಾರವಷ್ಟೇ (ಜೂನ್‌ 20) ರಾಜ್ಯ ಸರ್ಕಾರವು ಈ ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಸೋಮವಾರ ಭರತ್ ತಿವಾರಿ ಅವರ ಕುಟುಂಬಸ್ಥರು ಪಾಟ್ನಾದಲ್ಲಿ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿ ನ್ಯಾಯಕ್ಕಾಗಿ ಬೆಂಬಲ ಕೋರಿದ್ದಾರೆ. ಅಲ್ಲದೆ ಜೂನ್ 24ರಂದು ಈ ಘಟನೆಯ ಕುರಿತು ನಡೆಯಲಿರುವ ಪಂಚಾಯತ್ ಸಭೆಗೆ ಬರುವಂತೆ ವಿನಂತಿಸಿದ್ದು, ಪ್ರಶಾಂತ್ ಕಿಶೋರ್ ಅವರು ಕುಟುಂಬಕ್ಕೆ ಎಲ್ಲ ರೀತಿಯ ಬೆಂಬಲದ ಭರವಸೆ ನೀಡಿದ್ದಾರೆ.

ಮದುವೆಗಾಗಿ 17 ಕೋಟಿ ರುಪಾಯಿ ಕೊಟ್ಟು ಅರಮನೆ ಬುಕ್‌ ಮಾಡಿದವ ಹೆಣವಾದ! ಪ್ರೇಮಿಯೊಂದಿಗೆ ಸೇರಿ ಕೋಟೆಯಿಂದ ತಳ್ಳಿ ಕೊಂದ ಭಾವಿ ಪತ್ನಿ

ಪೊಲೀಸರು ಆರಂಭದಲ್ಲಿ ತಿವಾರಿ ಅವರನ್ನು ಮಾನಸಿಕ ಅಸ್ವಸ್ಥ ಎಂದು ಕರೆದಿದ್ದರು. ಆದರೆ, ಕುಟುಂಬಸ್ಥರು ಮತ್ತು ಸ್ಥಳೀಯರು ಆತನನ್ನು ಆಡಳಿತದ ಎದುರು ಸಾರ್ವಜನಿಕ ಸಮಸ್ಯೆಗಳನ್ನು ಎತ್ತಿಹಿಡಿಯುತ್ತಿದ್ದ ಒಬ್ಬ ಸಾಮಾಜಿಕ ಕಾರ್ಯಕರ್ತ ಎಂದು ಬಣ್ಣಿಸಿದ್ದಾರೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವೊಂದರಲ್ಲಿ ಎನ್‌ಕೌಂಟರ್‌ಗೂ ಮುನ್ನ ತಿವಾರಿ ತನ್ನ ಬಳಿಯಿದ್ದ ಆಯುಧವನ್ನು ಎಸೆದಿರುವುದು ಕಂಡುಬಂದಿದೆ ಎನ್ನಲಾಗಿದೆ (ಆದರೆ ಈ ವಿಡಿಯೊದ ಸತ್ಯಾಸತ್ಯತೆಯನ್ನು ಪಿಟಿಐ ಸ್ವತಂತ್ರವಾಗಿ ದೃಢೀಕರಿಸಿಲ್ಲ).

ಈ ವಿವಾದಾತ್ಮಕ ಘಟನೆಯು ಬಿಹಾರದ ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ಜವಾಬ್ದಾರಿಯ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ. ಪೊಲೀಸರು ಮಾತ್ರ, ತಿವಾರಿ ಮೊದಲು ತಮ್ಮ ಮೇಲೆ ನಿರಂತರವಾಗಿ ಗುಂಡಿನ ದಾಳಿ ನಡೆಸಿದ್ದರಿಂದ ತಾವೂ ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಬೇಕಾಯಿತು ಎಂದು ವಾದಿಸುತ್ತಿದ್ದಾರೆ.