ಲಖನೌ, ಜೂ.20: ಉತ್ತರ ಪ್ರದೇಶದಲ್ಲಿ (Uttar Pradesh) ಆಗಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಆಗಮನಕ್ಕೆ ಕೆಲವೇ ನಿಮಿಷಗಳ ಮೊದಲು ರಾಮ್ ಕಥಾ ಪಾರ್ಕ್ನಲ್ಲಿರುವ ಹೆಲಿಪ್ಯಾಡ್ ಬಳಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಮುಖ್ಯಮಂತ್ರಿ ಆಗಮನಕ್ಕಾಗಿ ಗೊತ್ತುಪಡಿಸಿದ ಹೆಲಿಪ್ಯಾಡ್ ಬಳಿ ಬೆಂಕಿ ಉಂಟಾಯಿತು. ಇದರ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹೆಲಿಪ್ಯಾಡ್ ಬಳಿ ಉಂಟಾದ ಅಗ್ನಿಯ ರುದ್ರನರ್ತನ ಶೀಘ್ರದಲ್ಲೇ ಸಮೀಪದ ಸರಯು ಅತಿಥಿ ಗೃಹದತ್ತ ಹರಡಿತು. ಅಗ್ನಿಯನ್ನು ನಿಯಂತ್ರಣಕ್ಕೆ ತರುವ ಮೊದಲು ಸುಮಾರು 15 ಮೀಟರ್ ಪ್ರದೇಶದ ಮೇಲೆ ಪರಿಣಾಮ ಬೀರಿತು. ಅಗ್ನಿಶಾಮಕ ದಳದ ತಂಡಗಳು ಬಂದು ಬೆಂಕಿಯನ್ನು ನಂದಿಸುವ ಮೊದಲು ಸ್ಥಳದಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.
ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಜೀವಹಾನಿ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಯೋಧ್ಯಾ ವೃತ್ತ ಅಧಿಕಾರಿ ಅಶುತೋಷ್ ತಿವಾರಿ ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವಾದ ಸಂದರ್ಭಗಳು ಮತ್ತು ಸುರಕ್ಷತೆ ಹಾಗೂ ಭದ್ರತಾ ವ್ಯವಸ್ಥೆಗಳಲ್ಲಿನ ಯಾವುದೇ ಲೋಪಗಳು ಘಟನೆಗೆ ಕಾರಣವಾಗಿವೆಯೇ ಎಂದು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
MP Train Tragedy: ಕಣ್ಣೆದುರೇ ಪತ್ನಿ-ಮಗನ ಮೇಲೆ ರೈಲು ಹರಿದರೂ ಏನು ಮಾಡಲಾಗದ ಅಸಾಹಯಕ ವ್ಯಕ್ತಿಯ ಕಣ್ಣೀರ ಕಥೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ (ಜೂ.19) ಹಲವಾರು ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಯೋಧ್ಯೆಗೆ ಭೇಟಿ ನೀಡಿದರು.
ಮೈಸೂರಿನ ಪಬ್ನಲ್ಲಿ ಬೆಂಕಿ ಅವಘಡ
ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದ ದುರ್ಘಟನೆ ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಡೆನ್ ಪಬ್ನಲ್ಲಿ ಸಂಭವಿಸಿತ್ತು. ಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದರು. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಯಿತು.
ಅವಘಡದಲ್ಲಿ ಡಾರ್ಜಿಲಿಂಗ್ ಮೂಲದ ಸಾಹಿನ್ (26) ಮತ್ತು ನೇಪಾಳ ಮೂಲದ ಪ್ರಕಾಶ್ (24) ಎಂಬ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಬ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ನಡೆದಿದೆ ಎಂದು ತಿಳಿದುಬಂದಿದೆ.