ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

“ವಿದ್ಯಾರ್ಥಿಗಳ ಕಳವಳಗಳನ್ನು ಸರ್ಕಾರ ಆಲಿಸಿದೆ”: ಪ್ರತಿಭಟನಾನಿರತರು ಶಾಂತಿ ಕಾಪಾಡುವಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮನವಿ

Jharkhand CM Hemant Soren: ವಿದ್ಯಾರ್ಥಿಗಳ ಕಳವಳಗಳನ್ನು ಆಲಿಸಲಾಗಿದೆ. ಸರ್ಕಾರವು ಅವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರತಿಭಟನಾನಿರತರಿಗೆ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸದಂತೆ ಪರೀಕ್ಷಾ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ನಿವಾರಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರತಿಭಟನಾನಿರತರು ಶಾಂತಿ ಕಾಪಾಡುವಂತೆ ಜಾರ್ಖಂಡ್ ಸಿಎಂ ಮನವಿ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (ಸಂಗ್ರಹ ಚಿತ್ರ) -

Priyanka P
Priyanka P Aug 11, 2026 2:50 PM

ರಾಂಚಿ, ಆ. 11: ವಿಧಾನಸಭಾ ಘೇರಾವ್ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರು ಲಾಠಿಚಾರ್ಜ್‌ ನಡೆಸಿದ ನಂತರ (students protest) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಕಳವಳಗಳನ್ನು ಸರ್ಕಾರ ಆಲಿಸಿದೆ. ಸರ್ಕಾರವು ಅವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಭರವಸೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಅವರು, ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಶಾಂತಿಯುತವಾಗಿ ಗಮನಕ್ಕೆ ತಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಅವರ ಧ್ವನಿಯನ್ನು ಗೌರವಿಸುವುದು ಸರ್ಕಾರದ ಜವಾಬ್ದಾರಿ. ಹಿರಿಯ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಅವರ ಕಳವಳಗಳನ್ನು ಅತ್ಯಂತ ಗಂಭೀರವಾಗಿ ಮತ್ತು ಸೂಕ್ಷ್ಮವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂಬುದಾಗಿ ಸೊರೆನ್ ಬರೆದುಕೊಂಡಿದ್ದಾರೆ.

ಭವಿಷ್ಯದಲ್ಲಿ ವಿದ್ಯಾರ್ಥಿಗಳು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸದಂತೆ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ನಿವಾರಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ. “ನೀವು ನಿಮ್ಮ ಬೇಡಿಕೆಗಳಿಗಾಗಿ ಶಾಂತಿಯುತ ರೀತಿಯಲ್ಲಿ ಧ್ವನಿ ಎತ್ತಿದ್ದೀರಿ. ಪ್ರಜಾಪ್ರಭುತ್ವದಲ್ಲಿ, ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ನಿಮ್ಮ ಹಕ್ಕು. ನಿಮ್ಮ ಧ್ವನಿಯನ್ನು ಗೌರವಿಸುವುದು ಸರ್ಕಾರದ ಜವಾಬ್ದಾರಿ. ಸರ್ಕಾರವು ನಿಮ್ಮ ಮಾತನ್ನು ಕೇಳಿದೆ. ನಮ್ಮ ಹಿರಿಯ ಸಚಿವರು ನಿಮ್ಮೊಂದಿಗೆ ನಿರಂತರ ಸಂವಾದ ನಡೆಸುತ್ತಿದ್ದಾರೆ. ನಿಮ್ಮ ಬೇಡಿಕೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇಲ್ಲಿದೆ ಪೋಸ್ಟ್:



ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ, ತಂತ್ರಜ್ಞಾನ ಆಧಾರಿತ, ಸುರಕ್ಷಿತ ಮತ್ತು ಹೊಣೆಗಾರಿಕೆಯುತವಾಗಿಸಲು ಸರ್ಕಾರ ಬಯಸಿದೆ. ಈ ಬದಲಾವಣೆಗಳನ್ನು ತರಲು ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧ ಎಂದ ಕೇಂದ್ರ ಸರ್ಕಾರ

ದೀರ್ಘಕಾಲದ ವಿವಾದಗಳಿಗಿಂತ ಪರಿಹಾರಗಳ ಮೂಲಕ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂಬುದಕ್ಕೆ ಜಾರ್ಖಂಡ್ ಒಂದು ಉದಾಹರಣೆಯಾಗಬೇಕೆಂದು ತಮ್ಮ ಸರ್ಕಾರ ಬಯಸಿದೆ ಎಂಬ ಆಶಯವನ್ನು ಸೊರೆನ್ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಕೆಲವರು ವಿದ್ಯಾರ್ಥಿ ಚಳವಳಿಯನ್ನು ಅಡ್ಡಿಪಡಿಸಲು ಮತ್ತು ರಾಜಕೀಯ ಲಾಭಕ್ಕಾಗಿ ಪ್ರತಿಭಟನಾಕಾರರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಸೊರೆನ್ ಆರೋಪಿಸಿದ್ದಾರೆ.

ಅಂತಹ ಯಾವುದೇ ರಾಜಕೀಯ ನಿರೂಪಣೆಗಳ ಬಲೆಗೆ ಬೀಳದಂತೆ ವಿದ್ಯಾರ್ಥಿಗಳಿಗೆ ಅವರು ಮನವಿ ಮಾಡಿದರು. ʼʼವಿದ್ಯಾರ್ಥಿಗಳು ಜಾರ್ಖಂಡ್‌ನ ಭವಿಷ್ಯ. ಅವರ ಕಳವಳಗಳನ್ನು ಆಲಿಸುವುದು ಸರ್ಕಾರದ ಜವಾಬ್ದಾರಿ. ಈ ಸಮಸ್ಯೆಯನ್ನು ಮಾತುಕತೆ ಮತ್ತು ನಂಬಿಕೆಯ ಮೂಲಕ ಒಟ್ಟಾಗಿ ಪರಿಹರಿಸೋಣʼʼ ಎಂದು ಸಿಎಂ ಒತ್ತಿ ಹೇಳಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ. ಆದರೆ ನಡೆಯುತ್ತಿರುವ ಪ್ರತಿಭಟನೆಯ ನಡುವೆ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.