ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

79th Independence Day: ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ನಿರ್ಮಿಸಲಿದೆ; ಪ್ರಧಾನಿಯಿಂದ ಮಹತ್ವದ ಘೋಷಣೆ

ಧ್ವಜಾರೋಹಣ ನೆರವೇರಿಸಿ ಕೆಂಪು ಕೋಟೆಯಲ್ಲಿ ಮಾತನಾಡಿದ ಮೋದಿ, ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳು ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುತ್ತಿವೆ. ನಮ್ಮ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಕುರಿತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಯನ್ನು ಶ್ಲಾಘಿಸಿದರು.

ನವದೆಹಲಿ: ಧ್ವಜಾರೋಹಣ ನೆರವೇರಿಸಿ ಕೆಂಪು ಕೋಟೆಯಲ್ಲಿ ಮಾತನಾಡಿದ ಮೋದಿ, ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳು ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುತ್ತಿವೆ. ನಮ್ಮ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶ ಕೇಂದ್ರದಿಂದ ಹಿಂತಿರುಗಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಮಹತ್ವದ ಘೋಷಣೆಯನ್ನು ಮಾಡಿದ ಪ್ರಧಾನಿ, ಭಾರತವು ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ಅಭಿವೃದ್ಧಿಪಡಿಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಆತ್ಮನಿರ್ಭರ ಭಾರತ್ ತತ್ವಗಳ ಆಧಾರದ ಮೇಲೆ ನಾವು ಗಗನಯಾನ ಮಿಷನ್‌ಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಸ್ವಂತ ಪ್ರಯತ್ನಗಳ ಮೂಲಕ ನಮ್ಮದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವತ್ತ ನಾವು ಕೆಲಸ ಮಾಡುತ್ತಿದ್ದೇವೆ. ಇತ್ತೀಚೆಗೆ ನಾವು ಹಲವಾರು ಬಾಹ್ಯಾಕಾಶ ಸುಧಾರಣೆಗಳನ್ನು ನೋಡಿದ್ದೇವೆ. 300 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಬಾಹ್ಯಾಕಾಶ ವಲಯದಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಘೋಷಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಈ ಸ್ಟಾರ್ಟ್‌ಅಪ್‌ಗಳಲ್ಲಿ ಸಾವಿರಾರು ಜನರು ಈ ಕೆಲಸಕ್ಕೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ. ಇದು ಭಾರತೀಯರ ಶಕ್ತಿ" ಎಂದು ಶ್ಲಾಘಿಸಿದರು. 2047 ರ ವೇಳೆಗೆ ವಿಕ್ಷಿತ್ ಭಾರತ್ ಗುರಿಯನ್ನು ಪುನರುಚ್ಚರಿಸಿದ ಪ್ರಧಾನಿ, ಬಾಹ್ಯಾಕಾಶ ಕಾರ್ಯಕ್ರಮವು ಪ್ರಮುಖ ಪಾತ್ರ ವಹಿಸುವ ಕ್ಷೇತ್ರಗಳಲ್ಲಿನ ಪ್ರಮುಖ ಪ್ರಗತಿಯನ್ನು ಎತ್ತಿ ತೋರಿಸಿದರು.



ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯರಾದ ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಜುಲೈ 15 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 20 ದಿನಗಳ ವಾಸ್ತವ್ಯದಿಂದ ಹಿಂದಿರುಗಿದರು. ಅವರ ಪ್ರಯಾಣವು NASA, SpaceX, ISRO ಮತ್ತು Axiom Space ಒಳಗೊಂಡ ಖಾಸಗಿ ಬಾಹ್ಯಾಕಾಶ ಹಾರಾಟದ ಸಹಯೋಗವಾದ Axiom Mission 4 ರ ಭಾಗವಾಗಿತ್ತು.

ಈ ಸುದ್ದಿಯನ್ನೂ ಓದಿ: 79th Independence Day: ದೀಪಾವಳಿಗೆ ಸರ್ಕಾರದ ವತಿಯಿಂದ ಬಿಗ್‌ ಗಿಫ್ಟ್‌; ಜಿಎಸ್‌ಟಿ ಕುರಿತು ಮೋದಿ ಹೇಳಿದ್ದೇನು?

ಮುಂಬರುವ ದಿನಗಳಲ್ಲಿ ಭಾರತ, 20,000 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ರೂಪಿಸಿ, ಮೂರು ಗಗನಯಾತ್ರಿಗಳನ್ನು ಭೂಮಿಯ ಕೆಳ ಕಕ್ಷೆಗೆ ಕಳುಹಿಸಿ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಗುರಿಯನ್ನು ಹೊಂದಿದೆ.