ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Operation Sindoor: ಪಾಕಿಸ್ತಾನಿಂದ ನಾಗರಿಕ ಪ್ರದೇಶದ ಮೇಲೆ ಶೆಲ್‌ ದಾಳಿ; ಆಡಳಿತಾಧಿಕಾರಿ ಬಲಿ, ಹಲವರಿಗೆ ಗಾಯ

ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಘರ್ಷಣೆ ಜೋರಾಗಿದೆ. ಶುಕ್ರವಾರ ರಾತ್ರಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಿಯಂತ್ರಣ ರೇಖೆಯ ಉದ್ದಕ್ಕೂ ಶೆಲ್ ದಾಳಿಯನ್ನು ನಡೆಸಿದೆ. ಪರಿಣಾಮ ರಜೌರಿಯಲ್ಲಿ ಆಡಳಿತ ಸೇವಾ ಅಧಿಕಾರಿ ರಾಜ್ ಕುಮಾರ್ ತಪ್ಪಾ ಸೇರಿದಂತೆ ಸ್ಥಳೀಯರು ಮೃತಪಟ್ಟಿದ್ದಾರೆ.

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ (Operation Sindoor) ಘರ್ಷಣೆ ಜೋರಾಗಿದೆ. ಶುಕ್ರವಾರ ರಾತ್ರಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಿಯಂತ್ರಣ ರೇಖೆಯ ಉದ್ದಕ್ಕೂ ಶೆಲ್ ದಾಳಿಯನ್ನು ನಡೆಸಿದೆ. ಪರಿಣಾಮ ರಜೌರಿಯಲ್ಲಿ(Rajouri) ಆಡಳಿತ ಸೇವಾ ಅಧಿಕಾರಿ ರಾಜ್ ಕುಮಾರ್ ತಪ್ಪಾ ಸೇರಿದಂತೆ ಸ್ಥಳೀಯರು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಅವರ ನಿವಾಸದ ಮೇಲೆ ಶೆಲ್ ಬಿದ್ದಿದ್ದು, ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧಿಕಾರಿಯ ಸಾವಿಗೆ ದುಖಃ ವ್ಯಕ್ತಪಡಿಸಿದ್ದಾರೆ.

ಹತ್ಯೆಗೀಡಾದ ಅಧಿಕಾರಿ ರಾಜ್ ಕುಮಾರ್ ತಪ್ಪಾ ನಿನ್ನೆ ತಮ್ಮೊಂದಿಗೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಎಂದು ಅಬ್ದುಲ್ಲಾ ಹೇಳಿದರು. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು. ಇಂದು ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದಾಗ ಅಧಿಕಾರಿಯ ನಿವಾಸಕ್ಕೆ ಗುಂಡು ಹಾರಿಸಲಾಯಿತು. ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಮುಖ್ಯಮಂತ್ರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.



ಮೂಲಗಳ ಪ್ರಕಾರ, ರಾಜೌರಿಯಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ, ಇದರಲ್ಲಿ ಮೆಂಧರ್ ಮತ್ತು ಆರ್‌ಎಸ್ ಪುರದ ಒಬ್ಬರು ಸೇರಿದ್ದಾರೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಪಾಕಿಸ್ತಾನವು ರಾಜೌರಿಯಲ್ಲಿ ವಸತಿ ಪ್ರದೇಶಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಅಂಗಡಿಗಳು ಮತ್ತು ಮನೆಗಳ ಜೊತೆಗೆ ಧಾರ್ಮಿಕ ಸ್ಥಳಗಳಿಗೆ ಹಾನಿ ಮಾಡಲು ಪ್ರಯತ್ನಿಸಿದೆ ಎಂದು ಸ್ಥಳೀಯ ಜನರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: ಕಾಶ್ಮೀರದ ಉರಿಯಲ್ಲಿ ಪಾಕ್‌ ಶೆಲ್‌ ದಾಳಿ, ಮಹಿಳೆ ಸಾವು

ಶನಿವಾರ ಬೆಳಿಗ್ಗೆ ಪಾಕಿಸ್ತಾನದ ವಿರುದ್ಧ ಭಾರತ ಪ್ರತೀಕಾರ ತೀರಿಸಿಕೊಂಡಿತು ಮತ್ತು ಇಸ್ಲಾಮಾಬಾದ್, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ದಾಳಿಗಳನ್ನು ನಡೆಸಿದೆ. ಪಾಕಿಸ್ತಾನದ ಮೂರು ವಾಯುಪಡೆಯ ನೆಲೆಗಳ ಮೇಲೆ ಸ್ಪೋಟಕಗಳನ್ನು ಬಳಸಿ ದಾಳಿಗಳನ್ನು ನಡೆಸಲಾಯಿತು. ಪಾಕಿಸ್ತಾನದ ವಿವಿಧ ಭಾಗಗಳಲ್ಲಿ ಹಲವಾರು ಸ್ಫೋಟಗಳು ಸಂಭವಿಸಿವೆ - ರಾವಲ್ಪಿಂಡಿಯಲ್ಲಿ ಎರಡು ಮತ್ತು ಲಾಹೋರ್ ಮತ್ತು ಇಸ್ಲಾಮಾಬಾದ್‌ನಲ್ಲಿ ತಲಾ ಒಂದು.

Vishakha Bhat Heggar

View all posts by this author