ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kamal Hasaan: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಟ ಕಮಲ್ ಹಾಸನ್

ನಟ ಹಾಗೂ ರಾಜಕಾರಣಿ ಕಮಲ್‌ ಹಾಸನ್‌ (Kamal Hasaan) ಅವರು ಭಾಷಾ ವಿವಾದದ ಬಳಿಕ ಇದೀಗ ರಾಜ್ಯಸಭೆಗೆ ಹೆಜ್ಜೆ ಇಟ್ಟಿದ್ದಾರೆ. ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದೆ.

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಟ ಕಮಲ್ ಹಾಸನ್

Profile Vishakha Bhat Jun 7, 2025 8:51 AM

ಚೆನ್ನೈ: ನಟ ಹಾಗೂ ರಾಜಕಾರಣಿ ಕಮಲ್‌ ಹಾಸನ್‌ (Kamal Hasaan) ಅವರು ಭಾಷಾ ವಿವಾದದ ಬಳಿಕ ಇದೀಗ ರಾಜ್ಯಸಭೆಗೆ ಹೆಜ್ಜೆ ಇಟ್ಟಿದ್ದಾರೆ. ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದೆ. ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ.

ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ. ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದರು. ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು.2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಮುಂಬರುವ ರಾಜ್ಯಸಭಾ ಚುನಾವಣೆಗೆ ಡಿಎಂಕೆ ತನ್ನ ಅಭ್ಯರ್ಥಿಗಳನ್ನು ಔಪಚಾರಿಕವಾಗಿ ಘೋಷಿಸಿದೆ. ಹಿರಿಯ ವಕೀಲ ಪಿ ವಿಲ್ಸನ್, ಕವಿ ಮತ್ತು ಬರಹಗಾರ್ತಿ ಸಲ್ಮಾ ಮತ್ತು ಮಾಜಿ ಸಚಿವ ಎಸ್.ಆರ್. ಶಿವಲಿಂಗಂ ಸೇರಿದಂತೆ ಮೂವರು ಇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ತಮಿಳುನಾಡಿನ ಆರು ರಾಜ್ಯಸಭಾ ಸದಸ್ಯರು ಜುಲೈ 24, 2025 ರಂದು ನಿವೃತ್ತರಾಗಲಿದ್ದಾರೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಜೂನ್ 9 ರವರೆಗೆ ನಡೆಯಲಿದೆ. ಮರುದಿನ ಪರಿಶೀಲನೆ ನಡೆಯಲಿದೆ. ನಂತರ ಜೂನ್ 19 ರಂದು ಮತದಾನ ನಡೆದು ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Thug Life Movie: ಕಮಲ್‌ ಹಾಸನ್‌ ನಟನೆಯ ʻಥಗ್‌ ಲೈಫ್‌ʼ ಫ್ಲಾಪ್‌? ಮಣಿರತ್ನಂ ಮ್ಯಾಜಿಕ್‌ ಮಾಯ ಆಗಿದ್ಯಾ?

ಕಮಲ್‌ ಹಾಸನ್‌ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಸಚಿವ ಇ.ವಿ. ವೇಲು, ಸಂಸದರಾದ ಟಿ.ಆರ್. ಬಾಲು, ಕನ್ನಿಮೋಳಿ, ತಮಿಳುನಾಡು ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಸೆಲ್ವಪೆರುಂಥಗೈ, ಸಿಪಿಐ (ಮಾರ್ಕ್ಸಿಸ್ಟ್) ರಾಜ್ಯ ಕಾರ್ಯದರ್ಶಿ ಶಣ್ಮುಗಂ, ಮನಿತಾನೇಯ ಮಕ್ಕಳ್ ಕಚ್ಚಿಯ ಅಧ್ಯಕ್ಷ ಜವಾಹಿರುಲಾಲ್ ಹಾಗೂ ವಿಡುದಲೈ ಸಿರುತೈ ಕಚ್ಚಿ ನಾಯಕ ತಿರುಮಾವಲವನ್ ಮೊದಲಾದವರು ಉಪಸ್ಥಿತರಿದ್ದರು.