ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಎಫ್‌ಐಆರ್ ದಾಖಲು: ಏನಿದು ಪ್ರಕರಣ?

FIR Against Mamata Banerjee: ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ನಡೆದ ವಿದ್ಯಾರ್ಥಿ ವಿಭಾಗದ ಸಂಸ್ಥಾಪನಾ ದಿನದ ರ‍್ಯಾಲಿಯ ಸಂದರ್ಭದಲ್ಲಿ ಕೋಲ್ಕತಾ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್

ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ) -

Priyanka P
Priyanka P Aug 29, 2026 7:16 PM

ಕೋಲ್ಕತಾ, ಆ. 29: ರ‍್ಯಾಲಿ ಸಂದರ್ಭದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕಾಗಿ ಟಿಎಂಸಿ ನಾಯಕಿ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೋಲ್ಕತಾದಲ್ಲಿ ನಡೆದ ವಿದ್ಯಾರ್ಥಿ ವಿಭಾಗದ ಸಂಸ್ಥಾಪನಾ ದಿನದ ರ‍್ಯಾಲಿಯ ಸಂದರ್ಭದಲ್ಲಿ ಕೋಲ್ಕತಾ ಹೈಕೋರ್ಟ್ (Calcutta High Court) ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಛತ್ರ ಪರಿಷತ್ (ಟಿಎಂಸಿಪಿ ಮಮತಾ ಬ್ಯಾನರ್ಜಿ ಬಣ) ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ದೃಢಪಡಿಸಿವೆ. ಆಗಸ್ಟ್ 28ರಂದು ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ, ಟಿಎಂಸಿಪಿ ಸಂಘಟಕರೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಮತ್ತು ಕಾರ್ಯಕ್ರಮದ ಅವಧಿಯಲ್ಲಿ ಬೆಂಬಲಿಗರನ್ನು ಪ್ರಚೋದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿಯಲ್ಲಿ ಆಗಸ್ಟ್ 28ರಂದು ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಬ್-ಇನ್ಸ್‌ಪೆಕ್ಟರ್ ಅಪು ಬೈದ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಕ್ಯಾಥೆಡ್ರಲ್ ರಸ್ತೆಯ ಒಂದು ಪಾರ್ಶ್ವದಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ಟಿಎಂಸಿ ಕಾರ್ಯಕರ್ತರು ಮತ್ತು ಬೆಂಬಲಿಗರು ಇನ್ನೊಂದು ಪಾರ್ಶ್ವವನ್ನು ಆಕ್ರಮಿಸಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿಗೆ ತುಸು ರಿಲೀಫ್‌; ಘರ್ ವಾಪಸಿ ಘೋಷಿಸಿದ ತೃಣಮೂಲ ಕಾಂಗ್ರೆಸ್‌ನ ಬಂಡಾಯ ಶಾಸಕ

ಪ್ರತಿಭಟನಾ ನಿರತರು ಬ್ಯಾರಿಕೇಡ್‌ಗಳನ್ನು ತಳ್ಳಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾದ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ಇದರಿಂದಾಗಿ ಕ್ಯಾಥೆಡ್ರಲ್ ರಸ್ತೆಯಲ್ಲಿ ಅವ್ಯವಸ್ಥೆ ಉಂಟಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಹೈಕೋರ್ಟ್ ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚಿನ ಸಮಯದವರೆಗೆ ಕಾರ್ಯಕ್ರಮ ಮುಂದುವರಿದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಟಿಎಂಸಿಪಿ ಸಂಸ್ಥಾಪನಾ ದಿನಾಚರಣೆಗಾಗಿ ಕ್ಯಾಥೆಡ್ರಲ್ ರಸ್ತೆಯಲ್ಲಿ ನೂರಾರು ಟಿಎಂಸಿ ಕಾರ್ಯಕರ್ತರು ಜಮಾಯಿಸಿದರು. ಅಲ್ಲಿ ಮಮತಾ ಬ್ಯಾನರ್ಜಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅದಾಗ್ಯೂ ಎಫ್‌ಐಆರ್‌ನಲ್ಲಿರುವ ಆರೋಪಗಳು ನ್ಯಾಯಾಲಯದಲ್ಲಿ ಇನ್ನೂ ದೃಢಪಟ್ಟಿಲ್ಲ.

ಗೂಂಡಾಗಳು ದಾಳಿ ಮಾಡಿದ್ದಾರೆಂದು ಮಮತಾ ಬ್ಯಾನರ್ಜಿ ಆರೋಪ

ತಮ್ಮ ಕಾರಿನ ಮೇಲೆ ಗೂಂಡಾಗಳು ದೊಡ್ಡ ದೊಡ್ಡ ಕಲ್ಲುಗಳಿಂದ ದಾಳಿ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇತ್ತೀಚೆಗೆ ಆರೋಪಿಸಿದ್ದರು. ಉತ್ತರ 24 ಪರಗಣ ಜಿಲ್ಲೆಯ ಹಲಿಸಹಾರ್‌ನಲ್ಲಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಪಕ್ಷದ ಮೃತ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಲು ಹೋದಾಗ ಈ ಘಟನೆ ನಡೆದಿದೆ ಎಂದು ಬ್ಯಾನರ್ಜಿ ಹೇಳಿದ್ದರು.