ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಧ್ಯ ಪ್ರಾಚ್ಯ ಸಂಘರ್ಷ, ತೈಲ ಬಿಕ್ಕಟ್ಟು; ಸಂಜೆ 5 ಗಂಟೆಗೆ ಸರ್ವ ಪಕ್ಷ ಸಭೆ ಕರೆದ ಸರ್ಕಾರ

All-party meeting: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪ್ರಾರಂಭವಾದ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಸರ್ಕಾರ ಇಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ವರದಿಗಳ ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ

ಸಂಗ್ರಹ ಚಿತ್ರ

ನವದೆಹಲಿ: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪ್ರಾರಂಭವಾದ ಪಶ್ಚಿಮ ಏಷ್ಯಾ ಸಂಘರ್ಷದ (West Asia conflict) ಕುರಿತು ಸರ್ಕಾರ ಇಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ವರದಿಗಳ (All-party meeting) ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಕ್ಷದ ನಾಯಕರಿಗೆ ಪರಿಸ್ಥಿತಿಯನ್ನು ತಿಳಿಸುವ ನಿರೀಕ್ಷೆಯಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸರ್ಕಾರದ ನಿಲುವನ್ನು ಪ್ರಸ್ತುತಪಡಿಸಬೇಕು ಎಂದು ಆಗ್ರಹ ಮಾಡಿ ಕೆಲವೇ ದಿನದಲ್ಲಿ ಈ ಸಭೆ ನಡೆಯಲಿದೆ.

ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಇತರ ಹಲವಾರು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರ ಇಂದು ಕರೆದಿರುವ ಸರ್ವಪಕ್ಷ ಸಭೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ ಗೈರು ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟು; ಭಾರತದ ಮೇಲೆ ಬೀರುತ್ತಿರುವ ಪರಿಣಾಮದ ಕುರಿತು ಮೋದಿ ಹೇಳಿದ್ದೇನು?

ದಶಕಗಳಿಂದ ಇರಾನ್ ಭಾರತದ ಸ್ನೇಹಿತ ಎಂದು ಬಣ್ಣಿಸಿರುವ ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್, ಭಾರತವು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಅತ್ಯುತ್ತಮವಾಗಿಲ್ಲ ಎಂದು ಸೂಚಿಸಿದ್ದಾರೆ. "ದಶಕಗಳಿಂದ ನಮ್ಮ ಸ್ನೇಹಿತನಾಗಿರುವ ಇರಾನ್ ಬಗ್ಗೆ ಸರ್ಕಾರ ವರ್ತಿಸಿದ ರೀತಿ ಮತ್ತು ಇರಾನ್ ಅನ್ನು ನಡೆಸಿಕೊಂಡ ರೀತಿ, ದೇಶವು ಇಂದು ಎಲ್‌ಪಿಜಿ ಸಮಸ್ಯೆಯೊಂದಿಗೆ ಸೆಣಸಾಡುತ್ತಿರಲಿಲ್ಲ ಎಂದು ಕಿಡಿ ಕಾರಿದರು. ರ್ವಪಕ್ಷ ಸಭೆ ನಡೆಸುವುದು ಒಳ್ಳೆಯದು. ಸರ್ಕಾರವು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ, ಅವರ ಮನಸ್ಸಿನಲ್ಲಿ ಏನಿದೆ ಮತ್ತು ಅವರು ಹೊಂದಿರುವ ಹೊಸ ಸ್ವರೂಪದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹೇಗೆ ಕಾರ್ಯಗತಗೊಳಿಸಲು ಉದ್ದೇಶಿಸಿದ್ದಾರೆ ಎಂಬುದನ್ನು ವಿವರಿಸಲಿ" ಎಂದು ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಹೇಳಿದ್ದಾರೆ.

Vishakha Bhat Heggar

View all posts by this author