ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dattatreya Hosabale: ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು: ಆರ್‌ಎಸ್‌ಎಸ್ ನಾಯಕ ಹೇಗೆ ಹೇಳಿದ್ಯಾಕೆ?

RSS leader Dattatreya Hosabale: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಅವರು ಮುಸ್ಲಿಂ ಸಮುದಾಯದವರು ಸೂರ್ಯ ನಮಸ್ಕಾರ ಮಾಡಬೇಕು ಮತ್ತು ನದಿಗಳನ್ನು ಪೂಜಿಸಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.

ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ (ಸಂಗ್ರಹ ಚಿತ್ರ)

ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ (Dattatreya Hosabale) ಹೇಳಿದರು. ಉತ್ತರ ಪ್ರದೇಶದ (Uttar Pradesh) ಸಂತ ಕಬೀರ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅವರು ಇದನ್ನು ಮಾಡಿದರೆ ಏನೂ ತಪ್ಪಾಗುವುದಿಲ್ಲ. ಮುಸ್ಲಿಂ ಸಹೋದರರು ಸೂರ್ಯ ನಮಸ್ಕಾರ ಮಾಡಿದರೆ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಇದರಿಂದ ಅವರು ಮಸೀದಿಗೆ ಹೋಗುವುದನ್ನು ತಡೆಯಲಾಗುವುದಿಲ್ಲ. ನಮ್ಮ ಹಿಂದೂ ಧರ್ಮ ಸರ್ವೋನ್ನತವಾಗಿದೆ. ಅದು ಎಲ್ಲರ ಹಿತವನ್ನು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

ಆರ್‌ಎಸ್ಎಸ್ ಸಿದ್ಧಾಂತ ಪರಿಣಾಮದಿಂದ ಸಿಜೆಐ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿ: ಪ್ರಿಯಾಂಕ್‌ ಖರ್ಗೆ

ಯೋಗಾಸನಗಳ ಅನುಕ್ರಮವಾದ ಸೂರ್ಯ ನಮಸ್ಕಾರ ಮಾಡುವುದರಿಂದ ವೈಜ್ಞಾನಿಕವಾಗಿಯೂ ಆರೋಗ್ಯಕ್ಕೆ ಬಹಳ ಉತ್ತಮ ಅಭ್ಯಾಸವಾಗಿದೆ ಎಂದು ಹೊಸಬಾಳೆ ವಿವರಿಸಿದರು. ಇದರಿಂದ ಮುಸ್ಲಿಮರಿಗೆ ಏನು ಹಾನಿಯಾಗುತ್ತದೆ? ಪ್ರಾರ್ಥನೆ ಮಾಡುವವರು ಪ್ರಾಣಾಯಾಮ ಮಾಡಿದರೆ ತಪ್ಪೇ? ಹಾಗಂತ ನಮಾಜ್ ಬಿಟ್ಟುಬಿಡಿ ಎಂದು ನಾವು ಹೇಳುವುದಿಲ್ಲ ಎಂದು ಹೇಳಿದರು.

ಭಾರತೀಯ ಜನತಾ ಪಕ್ಷದ ಶಾಸಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವ ಧರ್ಮವನ್ನು ಬೇಕಾದರೂ ಅನುಸರಿಸಲು ಜನರಿಗೆ ಸ್ವಾತಂತ್ರ್ಯವಿದೆ. ಆದರೆ, ಮಾನವ ಧರ್ಮಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು. ಇದೇ ವೇಳೆ ದೇಶ ವಿಭಜನೆಯ ಕುರಿತು ಗಂಭೀರವಾಗಿ ಉಲ್ಲೇಖಿಸಿದ ಹೊಸಬಾಳೆ, ಹಿಂದೂಗಳಿಗೆ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಹಿಂದೂ ತತ್ತ್ವಶಾಸ್ತ್ರವು ಎಲ್ಲ ಜೀವಿಗಳಿಗೂ ಮತ್ತು ಪ್ರಕೃತಿಯ ಕಡೆಗೆ ಅಹಿಂಸೆಯನ್ನು ಬೋಧಿಸುತ್ತದೆ ಎಂದು ಹೇಳಿದರು. ಜೊತೆಗೆ, ದೇವತೆಗಳ ಹೆಸರಿನಲ್ಲಿ ಮಕ್ಕಳಿಗೆ ಹೆಸರು ಇಡುವುದು ಭಾರತದ ವಿಶಿಷ್ಟ ಪರಂಪರೆಯಾಗಿದೆ ಎಂಬುದನ್ನೂ ಅವರು ಒತ್ತಿ ಹೇಳಿದರು.

ಹೊಸಬಾಳೆ ಅವರ ಹೇಳಿಕೆಗಳನ್ನು ಹಲವರು, ಹಿಂದೂ ಧರ್ಮದ ಆಚರಣೆಗಳನ್ನು ಪರಿಸರದ ಸಾಮಾನ್ಯ ಬುದ್ಧಿವಂತಿಕೆಯ ಮಾನದಂಡವಾಗಿ, ಸಂಸ್ಕೃತಿ ಮತ್ತು ಆರೋಗ್ಯ ಸಂಬಂಧಿತ ಅಭ್ಯಾಸಗಳಿಗೆ ಸಂಬಂಧಿಸಿದಂತೆ ಮರುವ್ಯಾಖ್ಯಾನಿಸುವ ಪ್ರಯತ್ನ ಎಂದು ಹೇಳಿದ್ದಾರೆ. ಹಿಂದೂ ಧರ್ಮ ಸರ್ವೋನ್ನತ ಎಂಬ ಹೇಳಿಕೆಯು ಎಲ್ಲರ ಹುಬ್ಬೇರಿಸಿತು. ಹಾಗೆಯೇ ಮಸೀದಿಗೆ ಹೋಗುವುದನ್ನು ತಡೆಯಲಾಗುವುದಿಲ್ಲ ಎಂಬ ಹೇಳಿಕೆಯೂ ಸಹ ಗಮನಸೆಳೆದಿದೆ.

ಸುಶ್ರುತನನ್ನು ಸ್ಮರಿಸದ ಮಧ್ಯಯುಗದ ಮುಸ್ಲಿಮರು

ಜೂನ್ ತಿಂಗಳಲ್ಲಿ ಹೊಸಬಾಳೆ, ಸಂವಿಧಾನದಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗೆ ಒತ್ತಾಯಿಸಿದರು. ತುರ್ತು ಪರಿಸ್ಥಿತಿಯ ಸಮಯದಲ್ಲಿ, ಇವುಗಳನ್ನು ಸೇರಿಸಲಾಯಿತು. ಮೂಲ ಪೀಠಿಕೆಯ ಭಾಗವಾಗಿರಲಿಲ್ಲ ಎಂದು ಅವರು ಹೇಳಿದರು.

ಇನ್ನು ಹೊಸಬಾಳೆ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು X ನಲ್ಲಿ ಟ್ವೀಟ್ ಮಾಡಿದ್ದಾರೆ. ಆರ್‌ಎಸ್‌ಎಸ್‌ನ ಮುಖವಾಡ ಮತ್ತೆ ಕಳಚಿದೆ. ಸಂವಿಧಾನವು ಸಮಾನತೆ, ಜಾತ್ಯತೀತತೆ ಮತ್ತು ನ್ಯಾಯದ ಬಗ್ಗೆ ಮಾತನಾಡುವುದರಿಂದ ಅವರನ್ನು ಕೆರಳಿಸುತ್ತದೆ. ಆರ್‌ಎಸ್‌ಎಸ್-ಬಿಜೆಪಿ ಮನುಸ್ಮೃತಿಯನ್ನು ಬಯಸುತ್ತದೆ ಎಂಬುದು ಅವರ ಮಾತುಗಳಿಂದ ತಿಳಿದುಬಂದಿದೆ ಎಂದು ಹೇಳಿದರು.