ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸೋಮನಾಥ ದೇವಾಲಯ ಪುನರ್ನಿರ್ಮಾಣದ 75ನೇ ವರ್ಷಾಚರಣೆ: ಭವ್ಯ ರೋಡ್ ಶೋ ಮೂಲಕ ಪ್ರಧಾನಿ ಮೋದಿ ಎಂಟ್ರಿ

ಗುಜರಾತ್‌ನ ಸೋಮನಾಥ ದೇವಾಲಯ ಪುನರ್ನಿರ್ಮಾಣಗೊಂಡು 75 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಸೋಮನಾಥ ಅಮೃತ ಮಹೋತ್ಸವ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ ನಡೆಸಿದರು. ಸಾವಿರಾರು ಜನರ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧ್ವಜ ಪೂಜೆ ನೆರವೇರಿಸಿದರು. ದೇವಾಲಯದ ಶಿಖರದ ಮೇಲೆ ಪುಷ್ಪವೃಷ್ಟಿ ನಡೆಸಿ ಧಾರ್ಮಿಕ ಸಂಭ್ರಮ ಹೆಚ್ಚಿಸಲಾಯಿತು.

ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಗಾಂಧಿನಗರ, ಮೇ 11: ಗುಜರಾತ್‌ನ ಪವಿತ್ರ ಯಾತ್ರಾ ಸ್ಥಳವಾದ ಸೋಮನಾಥ ದೇವಾಲಯ (Somanath Temple) ಪುನರ್ನಿರ್ಮಾಣಗೊಂಡು 75 ವರ್ಷಗಳು ಪೂರೈಸಿದ ಐತಿಹಾಸಿಕ ಸಂದರ್ಭದ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಸೋಮನಾಥ ಅಮೃತ ಮಹೋತ್ಸವ (Somnath Amrut Mahotsav)ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಭವ್ಯ ರೋಡ್ ಶೋ ನಡೆಸಿದರು.

ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ ಸೋಮನಾಥ ದೇವಾಲಯವು ಭಾರತದ ಅಚಲ ಶ್ರದ್ಧೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತ. 1951ರಲ್ಲಿ ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಪುನರ್ನಿರ್ಮಿತ ದೇವಾಲಯವನ್ನು ಉದ್ಘಾಟಿಸಿದ್ದರು. ಈ ಮಹತ್ವದ ಘಟನೆಯ ಅಮೃತ ಮಹೋತ್ಸವವನ್ನು ಆಚರಿಸಲು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಧಾನಿ ಮೋದಿ ಅವರ ಎಕ್ಸ್‌ ಪೋಸ್ಟ್‌:



ಜನಸಾಗರದ ನಡುವೆ ರೋಡ್ ಶೋ

ಸೋಮನಾಥ ದೇವಾಲಯದ ಸಮೀಪವಿರುವ ಹೆಲಿಪ್ಯಾಡ್‌ನಿಂದ ವೀರ ಹಮೀರ್‌ಜಿ ಸರ್ಕಲ್‌ವರೆಗೆ ಸುಮಾರು 1.5 ಕಿಲೋ ಮೀಟರ್ ದೂರದವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಜನರು ಧ್ವಜಗಳನ್ನು ಬೀಸುತ್ತ, ಘೋಷಣೆಗಳನ್ನು ಕೂಗುತ್ತ ಪ್ರಧಾನಿ ಅವರನ್ನು ಸ್ವಾಗತಿಸಿದರು. ಪಶ್ಚಿಮ ಬಂಗಾಳ ಸೇರಿ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಕಲಾವಿದರು ರಸ್ತೆಯ ಉದ್ದಕ್ಕೂ ನಿಗದಿತ ಸ್ಥಳಗಳಲ್ಲಿ ಸಾಂಪ್ರದಾಯಿಕ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಸಾಂಸ್ಕೃತಿಕ ಮೆರುಗು ನೀಡಿದರು. ಭಾನುವಾರ ರಾತ್ರಿ ಜಾಮ್‌ನಗರಕ್ಕೆ ಆಗಮಿಸಿದ್ದ ಪ್ರಧಾನಿಗಳು, ಅಲ್ಲಿ ವಾಸ್ತವ್ಯ ಹೂಡಿ ಸೋಮವಾರ ಬೆಳಗ್ಗೆ ಸೋಮನಾಥಕ್ಕೆ ಭೇಟಿ ನೀಡಿದರು.

ಸೋಮನಾಥ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಿಖರ ಕುಂಭಾಭಿಷೇಕ

ಧಾರ್ಮಿಕ ವಿಧಿವಿಧಾನಗಳು ಮತ್ತು ಪೂಜೆ

ರೋಡ್ ಶೋ ನಂತರ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಸೋಮನಾಥ ಮಹಾದೇವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಅಭಿಷೇಕ', 'ಧ್ವಜ ಪೂಜೆ' ಮತ್ತು 'ಮಹಾ ಪೂಜೆ' ಎಂಬ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ನೆರವೇರಿಸಿದರು. ಧಾರ್ಮಿಕ ಸಮಾರಂಭದ ಸಮಯದಲ್ಲಿ ಹೆಲಿಕಾಪ್ಟರ್ ಮೂಲಕ ದೇವಾಲಯದ ಶಿಖರದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು, ಇದು ಭಕ್ತರ ಕಣ್ಮನ ಸೆಳೆಯಿತು.

ಸಾಂಸ್ಕೃತಿಕ ಪುನರುತ್ಥಾನದ ಸಂಕೇತ

ಸೋಮನಾಥ ದೇವಾಲಯವು ಕೇವಲ ಒಂದು ಧಾರ್ಮಿಕ ಕೇಂದ್ರವಲ್ಲ, ಇದು ಭಾರತದ ಪುನರುತ್ಥಾನದ ಕಥೆಯನ್ನು ಸಾರುವ ಶಕ್ತಿ ಕೇಂದ್ರ. ಹಲವು ಬಾರಿ ದಾಳಿಗೊಳಗಾದರೂ ಫೀನಿಕ್ಸ್ ಹಕ್ಕಿಯಂತೆ ಮತ್ತೆ ಎದ್ದು ನಿಂತ ಈ ದೇವಾಲಯದ 75ನೇ ವರ್ಷದ ಸಂಭ್ರಮವು ದೇಶದ ಸಾಂಸ್ಕೃತಿಕ ಹೆಮ್ಮೆಯನ್ನು ಎತ್ತಿ ಹಿಡಿಯುತ್ತದೆ ಎಂದು ಮೋದಿ ಬಣ್ಣಿಸಿದ್ದಾರೆ. ಧಾರ್ಮಿಕ ವಿಧಿ ವಿಧಾನಗಳ ನಂತರ ಪ್ರಧಾನಿ ಮೋದಿ ಸದ್ಭಾವನಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಅಮೃತ ಮಹೋತ್ಸವವು ಭಾರತದ ಪ್ರಾಚೀನ ಪರಂಪರೆಯನ್ನು ಗೌರವಿಸುವ ಮತ್ತು ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ಸಾರುವ ಒಂದು ಮಹತ್ವದ ಹೆಜ್ಜೆ ಎನಿಸಿಕೊಂಡಿದೆ.