ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್
National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯದ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ .
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ -
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಸೋನಿಯಾ ಗಾಂಧಿ , ರಾಹುಲ್ ಗಾಂಧಿ (Rahul Gandhi) ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ . ಆದಾಗ್ಯೂ, ಕೇಂದ್ರ ಸಂಸ್ಥೆಯು ಈ ವಿಷಯದಲ್ಲಿ ತನ್ನ ತನಿಖೆಯನ್ನು ಮುಂದುವರಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿಯ (ಎಫ್ಐಆರ್) ಪ್ರತಿಯನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರಿಗೆ ನೀಡಲು ಅರ್ಹರಲ್ಲ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು, ಜಾರಿ ನಿರ್ದೇಶನಾಲಯ ಸಲ್ಲಿಸಿದ ದೂರು, ತನಿಖಾ ವರದಿಯ ಆಧಾರದ ಮೇಲೆ ಇಲ್ಲದೆ, ಖಾಸಗಿ ದೂರಿನ ಮೇಲೆ ಆಧರಿತವಾಗಿರುವುದರಿಂದ ಅದು ಸ್ವೀಕಾರಾರ್ಹವಲ್ಲ ಎಂದು ಅಭಿಪ್ರಾಯಪಟ್ಟರು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಸಲ್ಲಿಸಲಾದ ಈ ದೂರು ನ್ಯಾಯಾಲಯದಲ್ಲಿ ಮುಂದುವರಿಯಲು ಅರ್ಹತೆ ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ದೂರು ವಿಚಾರಣೆಗೆ ಅರ್ಹವಲ್ಲ ಏಕೆಂದರೆ ಈ ಪ್ರಕರಣವು ಖಾಸಗಿ ದೂರನ್ನು ಆಧರಿಸಿದೆಯೇ ಹೊರತು ಪ್ರಥಮ ಮಾಹಿತಿ ವರದಿ (ಎಫ್ಐಆರ್) ಅಲ್ಲ ಎಂದು ಹೇಳಿದೆ. ಗಾಂಧಿ ಕುಟುಂಬದವರಲ್ಲದೆ, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಮತ್ತು ಸುನಿಲ್ ಭಂಡಾರಿ ಅವರನ್ನೂ ಜಾರಿ ನಿರ್ದೇಶನಾಲಯ (ಇಡಿ) ಆರೋಪಿಗಳನ್ನಾಗಿ ಮಾಡಿತ್ತು.
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
1938 ರಲ್ಲಿ ಜವಾಹರಲಾಲ್ ನೆಹರು ಮತ್ತು ಇತರರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್, ಎಜೆಎಲ್ ಒಡೆತನದ ಮತ್ತು ಪ್ರಕಟಿಸಿದ ಪತ್ರಿಕೆಯಾಗಿತ್ತು. ಕಾಂಗ್ರೆಸ್ ಪಕ್ಷದ ಮುಖವಾಣಿ ಎಂದು ಪರಿಗಣಿಸಲಾದ ಈ ಪತ್ರಿಕೆ 2008 ರಲ್ಲಿ 90.21 ಕೋಟಿ ರೂ. ಸಾಲದೊಂದಿಗೆ ಹಿನ್ನಡೆ ಅನುಭವಿಸಿತ್ತು. 2010ರಲ್ಲಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವೆ 88 ನಿಮಿಷಗಳ ಮಾತುಕತೆ: ಸಭೆಯಲ್ಲಿ ಚರ್ಚೆಯಾಗಿದ್ದೇನು?
ನವೆಂಬರ್ 2012 ರಲ್ಲಿ ಸ್ವಾಮಿ ಅವರು ಗಾಂಧಿ ಕುಟುಂಬ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಎಜೆಎಲ್ ಅನ್ನು ಮೋಸದಿಂದ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಿದರು. ಕೇಂದ್ರ ಸರ್ಕಾರವು ತನ್ನ ಪತ್ರಿಕಾ ಕಾರ್ಯಾಚರಣೆಯನ್ನು ನಡೆಸಲು ಮಾತ್ರ ನೀಡಿದ್ದ ಈ ಆಸ್ತಿಗಳನ್ನು ಎಜೆಎಲ್ ವಾಣಿಜ್ಯ ಉದ್ದೇಶಗಳಿಗಾಗಿ ಬಳಸುತ್ತಿದೆ ಎಂಬ ಆರೋಪಗಳೂ ಇವೆ.