ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅತ್ತ ವಿಪಕ್ಷಗಳ ಪ್ರತಿಭಟನೆ: ಇತ್ತ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ; ಎನ್‌ಡಿಎಗೆ ಸಿಗುತ್ತಾ ಎನ್‌ಸಿಪಿ ಬೆಂಬಲ?

Buzz Over NCP Support To NDA: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹಾಗೂ ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಳೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಎನ್​ಡಿಎ ಜತೆ ಎನ್​ಸಿಪಿ ವಿಲೀನವಾಗಲಿದೆ ಎನ್ನುವ ಅಂತೆ ಕಂತೆ ಹರಿದಾಡುತ್ತಿರುವ ಹೊತ್ತಿನಲ್ಲೇ ಈ ಭೇಟಿ ನಡೆದಿರುವುದು ರಾಜಕೀಯವಾಗಿ ಭಾರಿ ಕುತೂಹಲ ಮೂಡಿಸಿದೆ.

ಪ್ರಧಾನಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ

ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ -

Priyanka P
Priyanka P Jul 22, 2026 3:49 PM

ನವದೆಹಲಿ, ಜು. 22: ಸಂಸತ್ತಿನ ಹೊರಗೆ ವಿರೋಧ ಪಕ್ಷದ ಸಂಸದರು ಸರ್ಕಾರದ ವಿರುದ್ಧ ಪ್ರತಿಭಟನೆ (MPs protest) ನಡೆಸಿ ಘೋಷಣೆಗಳನ್ನು ಕೂಗುತ್ತಿದ್ದಾಗ ಪ್ರಧಾನಿ ಕಚೇರಿಯಲ್ಲಿ ನಡೆದ ಸಭೆ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ (Sharad Pawar) ಹಾಗೂ ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಳೆ (Supriya Sule) ಬುಧವಾರ (ಜುಲೈ 22) ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರನ್ನು ಭೇಟಿಯಾದರು. ಎನ್​ಡಿಎ ಜತೆ ಎನ್​ಸಿಪಿ ವಿಲೀನವಾಗಲಿದೆ ಎನ್ನುವ ಅಂತೆ ಕಂತೆ ಹರಿದಾಡುತ್ತಿರುವ ಹೊತ್ತಿನಲ್ಲೇ ಈ ಮಾತುಕತೆ ನಡೆದಿರುವುದು ಕುತೂಹಲ ಮೂಡಿಸಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರದಲ್ಲಿ ಶರದ್ ಪವಾರ್ ಮತ್ತು ಪ್ರಧಾನ ಮಂತ್ರಿ ಮೋದಿ ಮಾತನಾಡುತ್ತ ಆತ್ಮೀಯವಾಗಿ ನಗುತ್ತಿರುವುದು ಕಂಡುಬಂದಿದೆ. ಮತ್ತೊಂದು ಚಿತ್ರದಲ್ಲಿ ಪ್ರಧಾನಿ ಮೋದಿ ಬಾಗಿಲಲ್ಲಿ ನಿಂತು ಎನ್‌ಸಿಪಿ ನಾಯಕರನ್ನು ಬರಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಸಭೆಯಲ್ಲಿ ಶರದ್ ಪವಾರ್ ದೇಶದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ನೀರಾವರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪಟ್ಟಿ ಮಾಡಿದ ಜ್ಞಾಪಕ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದರು.

ಕೇಂದ್ರ ಸರ್ಕಾರವು ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಮತ್ತೆ ತರಲು ಯೋಜಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಸರ್ಕಾರವು ಶೇ. 50ರಷ್ಟು ಸೀಟು ಹೆಚ್ಚಳದ ಬಗ್ಗೆ ಲಿಖಿತ ಭರವಸೆ ನೀಡಿದರೆ, ಮಸೂದೆಯನ್ನು ಬೆಂಬಲಿಸಬಹುದು ಎಂದು ಎನ್‌ಸಿಪಿ ಈ ಹಿಂದೆ ಹೇಳಿತ್ತು.

ಇಲ್ಲಿದೆ ಪೋಸ್ಟ್:



ಶರದ್ ಪವಾರ್ ಅವರ ಪಕ್ಷದ ಒಂದು ಬಣವು ಎನ್‌ಡಿಎ ಜತೆ ವಿಲೀನಗೊಳ್ಳಲು ಒತ್ತಾಯಿಸುತ್ತಿದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ. ಆದರೆ, ಶರದ್ ಪವಾರ್ ಬಣವು ಎನ್‌ಡಿಎ ಜತೆ ಅಧಿಕೃತವಾಗಿ ಮೈತ್ರಿ ಮಾಡಿಕೊಳ್ಳಬೇಕಾದರೆ, ಎನ್‌ಸಿಪಿಯ ಎರಡು ಪ್ರತಿಸ್ಪರ್ಧಿ ಬಣಗಳು ಮತ್ತೆ ಒಂದಾಗಬೇಕಾಗುತ್ತದೆ ಎಂಬುದನ್ನು ಬಿಜೆಪಿಯ ಸ್ಪಷ್ಟಪಡಿಸಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಸೀಮಾ ನಿರ್ಣಯ ಮಸೂದೆಗೆ ಶರದ್ ಪವಾರ್ ಬಣದ ಬೆಂಬಲ?

ಮಹಾರಾಷ್ಟ್ರದಲ್ಲಿ ರಾಜಕೀಯ ಪುನರ್ಮಿಲನದ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಎನ್‌ಸಿಪಿಯ ಎರಡೂ ಬಣಗಳ ನಾಯಕರು ಮತ್ತು ಆಡಳಿತ ಪಕ್ಷದ ಪ್ರಮುಖ ವ್ಯಕ್ತಿಗಳ ನಡುವಿನ ಸಭೆಗಳು ಇದಕ್ಕೆ ಕಾರಣ. ಬಿಜೆಪಿಯೊಳಗಿನ ಮೂಲಗಳ ಪ್ರಕಾರ, ಎರಡೂ ಬಣಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡು ವಿಲೀನಗೊಂಡ ನಂತರವೇ ಎನ್‌ಸಿಪಿಯನ್ನು ಎನ್‌ಡಿಎ ಜತೆ ವಿಲೀನಕ್ಕೆ ಪರಿಗಣಿಸಲಾಗುವುದು ಎಂಬುದು ಪಕ್ಷದ ನಿಲುವು. ಶರದ್ ಪವಾರ್ ಅಥವಾ ಅವರ ಪ್ರಮುಖ ಸಹಚರರನ್ನು ವೈಯಕ್ತಿಕ ಆಧಾರದ ಮೇಲೆ ಮೈತ್ರಿಕೂಟಕ್ಕೆ ಸೇರಿಸುವ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ ಎಂದು ಮೂಲಗಳು ತಿಳಿಸಿವೆ.