ಜಮ್ಮು-ಕಾಶ್ಮೀರದಿಂದ ಪಾಕ್, ಪಿಒಕೆಗೆ ವಲಸೆ ಹೋದ 300ಕ್ಕೂ ಹೆಚ್ಚು ಜನರ ಮೇಲೆ ನಿಗಾ
Migration to Pakistan and POK: ಜಮ್ಮು-ಕಾಶ್ಮೀರದಿಂದ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ವಲಸೆ ಹೋದ 300ಕ್ಕೂ ಹೆಚ್ಚು ಜನರ ಮೇಲೆ ಭದ್ರತಾ ಸಂಸ್ಥೆಗಳು ಕಠಿಣ ನಿಗಾ ವಹಿಸಿವೆ. ಪೂಂಚ್ ಮತ್ತು ರಾಜೌರಿ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮಾದಕ ವಸ್ತು–ಭಯೋತ್ಪಾದನಾ ಚಟುವಟಿಕೆಗಳಲ್ಲಿ ಅವರು ತೊಡಗಿದ್ದಾರೆ ಎಂಬ ಆರೋಪವಿರುವುದರಿಂದ ಅವರ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಸಂಗ್ರಹ ಚಿತ್ರ -
ಶ್ರೀನಗರ, ಜ. 5: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ರಾಜೌರಿ ಗಡಿ ಜಿಲ್ಲೆಗಳಲ್ಲಿ ಮಾದಕ ದ್ರವ್ಯ-ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಪಾಕಿಸ್ತಾನ (Pakistan) ಅಥವಾ ಪಾಕ್ ಆಕ್ರಮಿತ ಕಾಶ್ಮೀರಕ್ಕೆ (POK) ವಲಸೆ ಹೋದ 300ಕ್ಕೂ ಹೆಚ್ಚು ಜನರು ಈಗ ಭದ್ರತಾ ಸಂಸ್ಥೆಗಳ ನಿಗಾದಲ್ಲಿದ್ದಾರೆ. ಗಡಿಯ ಇನ್ನೊಂದು ಬದಿಯಿಂದ ಕಾರ್ಯನಿರ್ವಹಿಸುತ್ತಿರುವ ಅವರು, ಭಯೋತ್ಪಾದಕ ಮಾರ್ಗದರ್ಶಕರಾಗಿ ಬದಲಾಗಿದ್ದಾರೆ ಮತ್ತು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಗುಪ್ತಚರ ಮಾಹಿತಿಯ ಪ್ರಕಾರ, ಪಾಕಿಸ್ತಾನ ಮೂಲದ ಈ ಭಯೋತ್ಪಾದಕ ನಿರ್ವಾಹಕರು ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಿಂದ ಸ್ಥಳೀಯ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಆಮಿಷವೊಡ್ಡುತ್ತಿದ್ದಾರೆ. ಅವರು ಯುವಕರನ್ನು ಭಯೋತ್ಪಾದನೆಗೆ ಸೇರಲು, ಆಮಿಷವೊಡ್ಡಲು ಸಾಮಾಜಿಕ ಮಾಧ್ಯಮ ಮತ್ತು ಇತರ ವಿಧಾನಗಳನ್ನು ಬಳಸುತ್ತಿದ್ದಾರೆ. ಅವರನ್ನು ಸಂಪರ್ಕಿಸಲು ಮತ್ತು ನೇಮಕ ಮಾಡಿಕೊಳ್ಳಲು ಈಗಾಗಲೇ ಕೆಲವು ಪ್ರಯತ್ನಗಳು ನಡೆದಿವೆ ಎಂದು ತಿಳಿದುಬಂದಿದೆ.
ದೆಹಲಿಯ ಕೆಂಪು ಕೋಟೆ ಸ್ಫೋಟ ಪ್ರಕರಣ; ಪಾಕಿಸ್ತಾನಿ ಹ್ಯಾಂಡ್ಲರ್ಗಳನ್ನು ಉಗ್ರರು ಸಂಪರ್ಕಿಸಿದ್ದು ಹೇಗೆ?
ಅಕ್ರಮವಾಗಿ ಪಾಕಿಸ್ತಾನ ಅಥವಾ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ತೆರಳಿದವರು ಬಹುತೇಕರು ಪೂಂಚ್ ಜಿಲ್ಲೆಯ ಸುರಂಕೋಟೆ, ಮೆಂಧಾರ್, ಮಾನ್ಸಿ ಗುರ್ಸಾಯಿ ಮತ್ತು ಸಾವ್ಜಿಯನ್ ಪ್ರದೇಶಗಳವರಾಗಿದ್ದಾರೆ. ಭದ್ರತಾ ಸಂಸ್ಥೆಗಳು ಈ ವ್ಯಕ್ತಿಗಳ ಸಮಗ್ರ ಪಟ್ಟಿ ತಯಾರಿಸಿಕೊಂಡಿದ್ದು, ಅವರ ಮೇಲೆ ಕಠಿಣ ಕ್ರಮಗಳನ್ನು ಆರಂಭಿಸಿವೆ. ಇದರಲ್ಲಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ವಶಕ್ಕೆ ಪಡೆದುಕೊಳ್ಳುವುದು ಸೇರಿದೆ.
ಇತ್ತೀಚಿನ ಕ್ರಮವೊಂದರಲ್ಲಿ ಪೂಂಚ್ ಪೊಲೀಸರು ಪಾಕಿಸ್ತಾನ ಮೂಲದ ಭಯೋತ್ಪಾದಕ ನಿರ್ವಾಹಕ ಗುರ್ಸಾಯಿ ಪ್ರದೇಶದ ಸುಲ್ತಾನ್ ಅಲಿಯಾಸ್ ರಫೀಕ್ ನಾಯ್ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದಾರೆ.
ಪೂಂಚ್ನ ಮೆಂಧರ್ನ ನಾರ್ ಗ್ರಾಮದಲ್ಲಿ ಕೃಷಿ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ರಫೀಕ್ ವಿರುದ್ಧ ಹಲವಾರು ಗಂಭೀರ ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಈತ ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರಗಳ ಕಳ್ಳ ಸಾಗಣೆ, ತರಬೇತಿ ಪಡೆದ ಭಯೋತ್ಪಾದಕರ ಒಳನುಸುಳುವಿಕೆಗೆ ಅನುಕೂಲ ಮಾಡಿಕೊಡುವುದು ಮತ್ತು ಪೂಂಚ್-ರಾಜೌರಿ ವಲಯದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಪುನರುಜ್ಜೀವನಗೊಳಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ.
ಕಾರ್ಯಾಚರಣೆಯನ್ನು ಮುಂದುವರಿಸಿರುವ ಪೊಲೀಸರು, ಪೂಂಚ್ ಜಿಲ್ಲೆಯ ಮಂಡಿ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ನಿರ್ವಾಹಕ ಜಮಾಲ್ ಲೋನ್ ಅಲಿಯಾಸ್ ಜಮಾಲಾಗೆ ಸೇರಿದ 6 ಕನಾಲ್ಗಳು ಮತ್ತು 13 ಮಾರ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ತೆಗೆದುಕೊಳ್ಳಲಾದ ಈ ಕ್ರಮವು ಭಯೋತ್ಪಾದಕ ಜಾಲಗಳನ್ನು ನಾಶಮಾಡುವ ಮತ್ತು ರಾಷ್ಟ್ರವಿರೋಧಿ ಶಕ್ತಿಗಳಿಂದ ಅವರ ಸಂಪನ್ಮೂಲಗಳನ್ನು ಕಸಿದುಕೊಳ್ಳುವ ಕಾರ್ಯತಂತ್ರದ ಭಾಗವಾಗಿದೆ. ಘೋಷಿತ ಅಪರಾಧಿ ಜಮಾಲ್ ಲೋನ್, ಪಿಒಕೆಗೆ ಪರಾರಿಯಾಗಿದ್ದು, ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ.
ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿರುವುದು ಇದೇ ಮೊದಲಲ್ಲ. 90ರ ದಶಕದ ಉತ್ತರಾರ್ಧದಲ್ಲಿ, ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಿಂದ ಅನೇಕ ಜನರು ಉತ್ತಮ ಆರ್ಥಿಕ ಅವಕಾಶಗಳನ್ನು ಹುಡುಕುತ್ತ ಪಿಒಕೆಗೆ ವಲಸೆ ಗೀ. ಈ ವ್ಯಕ್ತಿಗಳನ್ನು ಹೆಚ್ಚಾಗಿ ಭಯೋತ್ಪಾದಕ ಮಾರ್ಗದರ್ಶಕರಾಗಿ ಬಳಸಲಾಗುತ್ತಿತ್ತು. ಮಾದಕವಸ್ತು ಕಳ್ಳ ಸಾಗಣೆಯಲ್ಲಿ ಭಾಗಿಯಾಗಿದ್ದರು ಮತ್ತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಒತ್ತಾಯಿಸಲಾಗುತ್ತಿತ್ತು.