ಜಮ್ಮು-ಕಾಶ್ಮೀರದ ಕುಪ್ವಾರಾದ ಎಲ್ಒಸಿ ಬಳಿ ಪಾಕಿಸ್ತಾನ ಪ್ರಜೆಯ ಅರೆಸ್ಟ್
Pakistani national arrest: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಸೇನೆಯ ಚಿನಾರ್ ಕಾರ್ಪ್ಸ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದರು.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಸೆರೆಸಿಕ್ಕ ಪಾಕಿಸ್ತಾನಿ ಪ್ರಜೆ ಬಂಧನ -
ಶ್ರೀನಗರ, ಜೂ. 13: ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ನಿಯಂತ್ರಣ ರೇಖೆ(LOC)ಯಲ್ಲಿ ಶಂಕಿತ ಒಳನುಸುಳುವಿಕೆಯ ಬಗ್ಗೆ ಭದ್ರತಾ ಸಂಸ್ಥೆಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಪಡೆದ ನಂತರ ಆಪರೇಷನ್ ಸಿಮ್ರಿ (Operation Simri) ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಆ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಭಾರತಕ್ಕೆ ನುಸುಳಿದ್ದಾನೆ. ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಸೇನೆಯ ಚಿನಾರ್ ಕಾರ್ಪ್ಸ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಸಿಬ್ಬಂದಿ ಆತನನ್ನು ಬಂಧಿಸಿದರು. ಜೂನ್ 12ರಂದು ಸಿಮ್ರಿ ಗ್ರಾಮದ ಬಳಿ ಒಳನುಗ್ಗಿದವನನ್ನು ಯಶಸ್ವಿಯಾಗಿ ವಶಕ್ಕೆ ಪಡೆಯಲಾಗಿದೆ. ಬಂಧಿತ ಪಾಕಿಸ್ತಾನಿ ಪ್ರಜೆಯನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ.
ಅಮರನಾಥ ಯಾತ್ರೆಗೆ ಬಿಗಿ ಭದ್ರತೆ
ಈ ವರ್ಷದ ಅಮರನಾಥ ಯಾತ್ರೆಗೆ ಮುನ್ನ ಈ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಯಾತ್ರೆಗೆ ಭದ್ರತಾ ವ್ಯವಸ್ಥೆಗಳು ಮತ್ತು ಕಾರ್ಯಾಚರಣೆಯ ಸಿದ್ಧತೆಯನ್ನು ನಿರ್ಣಯಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ (ಜೂ. 12) ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಜಮ್ಮು-ಕಾಶ್ಮೀರದ ಪ್ರಿಯತಮೆಯನ್ನು ಭೇಟಿಯಾಗಲು ಗಡಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಯುವಕ
ಪವಿತ್ರ ಯಾತ್ರೆ ಕೈಗೊಳ್ಳುವ ನಿರೀಕ್ಷೆಯಿರುವ ಲಕ್ಷಾಂತರ ಭಕ್ತರ ಸುರಕ್ಷತೆ ಮತ್ತು ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಸಾರಿಗೆ ಕಾರಿಡಾರ್ಗಳಾದ್ಯಂತ ಅಭೇದ್ಯ, ಬಹು-ಹಂತದ ಭದ್ರತಾ ಗ್ರಿಡ್ ಅನ್ನು ತಕ್ಷಣವೇ ಸ್ಥಾಪಿಸಲು ಗೃಹ ಸಚಿವರು ನಿರ್ದೇಶನ ನೀಡಿದರು.
ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರವಾಸಿ ತಾಣಗಳ ಭದ್ರತಾ ಜಾಲದ ಪರಿಶೀಲನೆಯೂ ನಡೆಯಿತು.
ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು. ಯಾತ್ರಿಕರು ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಭದ್ರತಾ ವ್ಯವಸ್ಥೆಗಳ ಸಮಗ್ರ ಅವಲೋಕನ ಸಭೆಯಲ್ಲಿ ಕೈಗೊಳ್ಳಲಾಯಿತು.
ಪಾಕಿಸ್ತಾನಕ್ಕೆ ಹನಿ ನೀರು ಬಿಡುವುದಿಲ್ಲ: ರಾಜನಾಥ್ ಸಿಂಗ್ ಎಚ್ಚರಿಕೆ
ಭಯೋತ್ಪಾದನೆಯನ್ನೇ ಉದ್ದೇಶ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಏಕೆ ಬೇಕು. ಭಾರತದ ಮೇಲೆ ದಾಳಿ ನಡೆಸುವ ಸಲುವಾಗಿ ಭಯೋತ್ಪಾದಕರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಕೊಡುವುದಿಲ್ಲ. ಶಾಂತಿಯ ಭಾಷೆಯನ್ನು ಅರ್ಥ ಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಭಾರತಕ್ಕೆ ಗೊತ್ತಿದೆ. ಇದನ್ನು ನಾವು ಆಪರೇಷನ್ ಸಿಂದೂರ್ ಮೂಲಕ ಅವರಿಗೆ ತೋರಿಸಿಕೊಟ್ಟಿದ್ದೇವೆ. ಆದರೂ ಅವರು ಬುದ್ಧಿ ಕಲಿತಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಮಾತುಗಳಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.
ಕಳೆದ ವರ್ಷ ಭಾರತೀಯ ಸೇನೆಯು ನಡೆಸಿರುವ ಆಪರೇಷನ್ ಸಿಂದೂರ್ ಶಾಂತಿ ಮತ್ತು ಸಾಮರಸ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಭಾರತಕ್ಕೆ ತಿಳಿದಿದೆ ಎಂಬುದನ್ನು ಜಗತ್ತಿಗೆ ತೋರಿಸಿದೆ ಎಂದು ಹೇಳಿದರು.