ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಫೋನ್‌ಗೂ ಸಿಕ್ತಿಲ್ಲ, ಸಂಸದರು ಮಾತುಕತೆಗೂ ಬರ್ತಿಲ್ಲ; ಉದ್ಧವ್‌ ಠಾಕ್ರೆ ಶಿವಸೇನೆಯಲ್ಲಿ ಬಿರುಕು?

ಉದ್ಧವ್‌ ಠಾಕ್ರೆ ನೇತೃತ್ವದ (Shiv Sena) ಶಿವಸೇನೆ (ಯುಬಿಟಿ) ಬಣದಲ್ಲಿ ಬಿರುಕು ಮೂಡಿದೆ. ಪಕ್ಷದ ಕೆಲವು ಲೋಕಸಭಾ ಸಂಸದರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ, ಅವರ ಫೋನ್‌ಗಳು ಸ್ವಿಚ್ ಆಫ್ ಆಗಿವೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: ಉದ್ಧವ್‌ ಠಾಕ್ರೆ ( Uddhav Thackeray) ನೇತೃತ್ವದ (Shiv Sena) ಶಿವಸೇನೆ (ಯುಬಿಟಿ) ಬಣದಲ್ಲಿ ಬಿರುಕು ಮೂಡಿದೆ. ಪಕ್ಷದ ಕೆಲವು ಲೋಕಸಭಾ ಸಂಸದರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ, ಅವರ ಫೋನ್‌ಗಳು ಸ್ವಿಚ್ ಆಫ್ ಆಗಿವೆ ಎಂದು ಮೂಲಗಳು ತಿಳಿಸಿವೆ. ಉದ್ಧವ್ ಠಾಕ್ರೆ ಮತ್ತು ಪಕ್ಷದ ಇತರ ಹಿರಿಯ ನಾಯಕರು ಸಂಸದರ ಮನವೊಲಿಸಲು ವೈಯಕ್ತಿಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ, ಉದ್ಧವ್ ಠಾಕ್ರೆ ಬಣದ ಸಂಸದರು ನಾಳೆ ಮುಂಜಾನೆ ಶ್ರೀಕಾಂತ್ ಶಿಂಧೆ ಅವರ ದೆಹಲಿ ನಿವಾಸದಲ್ಲಿ ಸಭೆ ಸೇರಲಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಶ್ರೀಕಾಂತ್ ಶಿಂಧೆ ಸಭೆಯಲ್ಲಿ ಉಪಸ್ಥಿತರಿರುವ ಸಾಧ್ಯತೆಯಿದೆ. ಸಭೆಯ ನಂತರ, ಈ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಂಸದರು ಮೊದಲು ಲೋಕಸಭೆಯೊಳಗೆ ಪ್ರತ್ಯೇಕ ಬಣವನ್ನು ರಚಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಾರೆ, ನಂತರ ಈ ಬಣವನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್ ಪಾಟೀಲ್ ಅಷ್ಟಿಕರ್, ಓಂರಾಜೆ ನಿಂಬಾಳ್ಕರ್, ಭೌಸಾಹೇಬ್ ವಾಕಚೌರೆ ಮತ್ತು ಸಂಜಯ್ ಜಾಧವ್ ಹಾಗೂ ರಾಜಭಾವು ವಾಜೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿಚಾರಣೆ

ಈ ಕುರಿತು ಮಾತನಾಡಿದ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್, ಭಿನ್ನಮತೀಯರು ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಸೇರಲು ನಿರ್ಧರಿಸಿದರೆ ಅವರನ್ನು ಸ್ವಾಗತಿಸಲಾಗುವುದು ಮತ್ತು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಸೇನಾ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಆದರ್ಶಗಳನ್ನು ನಂಬಿದರೆ ಮತ್ತು ಏಕನಾಥ್ ಶಿಂಧೆ ಅವರ ನಾಯಕತ್ವವನ್ನು ನಂಬಲು ಸಿದ್ಧರಿದ್ದರೆ, ಶಿವಸೇನೆಯ ಬಾಗಿಲುಗಳು ಅವರಿಗೆ ತೆರೆದಿರುತ್ತವೆ ಎಂದು ಅವರು ಹೇಳಿದರು. ಶಿವಸೇನೆಯ ಸಂಸ್ಥಾಪನಾ ದಿನವಾದ ಜೂನ್ 19 ಕ್ಕೆ ಮುಂಚಿತವಾಗಿ ಪಕ್ಷಾಂತರ ಸಂಭವಿಸಬಹುದು ಎಂದು ಹೇಳಲಾಗುತ್ತಿದೆ.

Vishakha Bhat Heggar

View all posts by this author