Nirmala Sitharaman: ತೆರಿಗೆ ಕಡಿತಗೊಳಿಸಲು ಪ್ರಧಾನಿ ಒಪ್ಪಿಕೊಂಡರು; ಅಧಿಕಾರಿಗಳ ಮನವೊಲಿಕೆಯೇ ಕಷ್ಟದ್ದಾಗಿತ್ತು ಎಂದ ವಿತ್ತ ಸಚಿವೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಬಜೆಟ್‌ನಲ್ಲಿ ಪರಿಚಯಿಸಲಾದ ತೆರಿಗೆ ಕಡಿತಗಳಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ, ಆದರೆ ತೆರಿಗೆ ಕಡಿತದ ಬಗ್ಗೆ ಅಧಿಕಾರಿಗಳನ್ನು ಮನವೊಲಿಸಲು ಸಾಕಷ್ಟು ಸಮಯ ಹಿಡಿಯಿತು ಎಂದು ಹೇಳಿದ್ದಾರೆ.

Nirmala Sitharaman
Profile Vishakha Bhat Feb 2, 2025 4:00 PM

ನವದೆಹಲಿ: ಫೆ. 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಸತ 8 ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್‌ (Union Budget) ಮಧ್ಯಮ ವರ್ಗದವರಿಗಾಗಿ ಎಂದು ಹೇಳಿರುವ ಅವರು ವಾರ್ಷಿಕ ₹ 12 ಲಕ್ಷ ಆದಾಯದವರೆಗೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಲಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಭಾನುವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವೆ ತೆರಿಗೆ ಕಡಿತದ ಕಲ್ಪನೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಜೆಟ್‌ನಲ್ಲಿ ಪರಿಚಯಿಸಲಾದ ತೆರಿಗೆ ಕಡಿತಗಳಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ, ಆದರೆ ತೆರಿಗೆ ಕಡಿತದ ಬಗ್ಗೆ ಅಧಿಕಾರಿಗಳನ್ನು ಮನವೊಲಿಸಲು ಸಾಕಷ್ಟು ಸಮಯ ಹಿಡಿಯಿತು ಎಂದು ಹೇಳಿದರು. ದೇಶದ ಬಡವರಿಗೆ, ಮಧ್ಯಮ ವರ್ಗದವರಿಗೋಸ್ಕರ ಪ್ರಧಾನಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

2025-26ರ ಬಜೆಟ್ ಕುರಿತು ನೀಡಿದ ತಮ್ಮ ಮೊದಲ ವೀಡಿಯೊ ಸಂದರ್ಶನದಲ್ಲಿ ನಿರ್ಮಲಾ ಸೀತಾರಾಮನ್, ತೆರಿಗೆ ಪರಿಹಾರ ಕ್ರಮಗಳ ಹಿಂದಿನ ತಾರ್ಕಿಕತೆಯನ್ನು ವಿವರಿಸಿದರು. ಕೆಲವು ಸಮಯದಿಂದ ಕೆಲಸದಲ್ಲಿರುವ ಎರಡು ವಿಷಯಗಳಿವೆ. ಒಂದು ನೇರ ತೆರಿಗೆ ಸರಳವಾಗಿರಬೇಕು ಮತ್ತು ಅನುಸರಣೆಗೆ ಸುಲಭವಾಗಿರಬೇಕು ಎಂಬ ಚಿಂತನೆ. ಆದಾಯ ತೆರಿಗೆ ಕಾಯ್ದೆಯ ಸಂಕೀರ್ಣ ರಚನೆಗೆ ಸರಳೀಕರಣದ ಅಗತ್ಯವಿದೆ ಎಂದು ಹೇಳಿದರು.

ನಾವು ಹೊಸ ಆದಾಯ ತೆರಿಗೆ ಕಾಯ್ದೆಯನ್ನು ತಯಾರಿಸಲು ಆರು ತಿಂಗಳು ತೆಗೆದುಕೊಂಡಿದ್ದೇವೆ. ನಾನು ಎಲ್ಲಿಯೇ ಪ್ರಯಾಣಿಸಿದರೂ ನನಗೆ ಜನರು ಕೇಳುವುದು ಒಂದೇ ಪ್ರಶ್ನೆ ಆಗಿತ್ತು. ನಾವು ಪ್ರಾಮಾಣಿಕ ತೆರಿಗೆದಾರರು, ಆದರೆ ನೀವು ನಮಗಾಗಿ ಏನು ಮಾಡಬಹುದು ಎಂಬುದರ ಕುರಿತು ಯೋಚಿಸಬಹುದೇ ಎಂದು ಕೇಳುತ್ತಿದ್ದರು. ಅದಕ್ಕಾಗಿಯೇ ನಾನು ಈ ವಿಷಯದ ಕುರಿತು ಪ್ರಧಾನ ಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೆ ಎಂದು ಅವರು ಹೇಳಿದ್ದಾರೆ.



ತೆರಿಗೆ ದರಗಳ ಕಡಿತದ ಕುರಿತು ಮಾತನಾಡಿದ ಅವರು, . ಈ ಬಾರಿ, ನಾವು ತೆರಿಗೆ ಸ್ಲ್ಯಾಬ್‌ಗಳ ನಡುವಿನ ಪರಿವರ್ತನೆಯನ್ನು ಸುಗಮಗೊಳಿಸಿದ್ದೇವೆ ಎಂದರು. 2025-26 ರ ಕೇಂದ್ರ ಬಜೆಟ್‌ನಲ್ಲಿನ ಪ್ರಮುಖ ತೆರಿಗೆ ಸುಧಾರಣೆಗಳ ಕುರಿತು ಮಾತನಾಡುತ್ತಾ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಯಾವಾಗಲೂ ಉದ್ಯಮದ ನಾಯಕರು ಮತ್ತು ಬುಡಕಟ್ಟು ಜನಾಂಗದಂತಹ ದುರ್ಬಲ ಗುಂಪುಗಳು ಸೇರಿದಂತೆ ವಿವಿಧ ವಲಯಗಳ ಜನರ ಮಾತನ್ನು ಆಲಿಸಿದೆ.

ಈ ಸುದ್ದಿಯನ್ನೂ ಓದಿ: Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮುತ್ತಿಗೆ ಯತ್ನ

ಪ್ರಧಾನಿ ಮೋದಿ ಅವರು ಎಲ್ಲಾ ವರ್ಗದವರ ಮಾತುಗಳನ್ನು ಆಲಿಸುತ್ತಾರೆ. ಜನರ ಧ್ವನಿಯನ್ನು ನಿಜವಾಗಿಯೂ ಕೇಳುವ ಮತ್ತು ಪ್ರತಿಕ್ರಿಯಿಸುವ ಸರ್ಕಾರದ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್