Narendra Modi: ಮಾರ್ಚ್ 27 ರಂದು ಸಂಸತ್ತಿನಲ್ಲಿ ಛಾವಾ ಚಿತ್ರ ಪ್ರದರ್ಶನ; ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ
ಬಾಕ್ಸ್ ಆಫೀಸ್ನಲ್ಲಿ ಭಾರಿ ಯಶಸ್ಸು ಕಂಡಿರುವ , ವಿಕ್ಕಿ ಕೌಶಲ್ ಅಭಿನಯದ ಛಾವಾ ಚಿತ್ರವು ಗುರುವಾರ ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಬಾಲಯೋಗಿ ಸಭಾಂಗಣದಲ್ಲಿರುವ ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಪ್ರದರ್ಶನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಸಂಸದರು ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

ವಿಕ್ಕಿ ಕೌಶಲ್ ಜೊತೆ ಮೋದಿ

ನವದೆಹಲಿ: ಬಾಕ್ಸ್ ಆಫೀಸ್ನಲ್ಲಿ ಭಾರಿ ಯಶಸ್ಸು ಕಂಡಿರುವ , ವಿಕ್ಕಿ ಕೌಶಲ್ ಅಭಿನಯದ ಛಾವಾ (Chhaava) ಚಿತ್ರವು ಗುರುವಾರ (ಮಾರ್ಚ್ 27) ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಬಾಲಯೋಗಿ ಸಭಾಂಗಣದಲ್ಲಿರುವ ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಪ್ರದರ್ಶನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, (Narendra Modi) ಕೇಂದ್ರ ಸಚಿವರು ಮತ್ತು ಸಂಸದರು ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ನಟಿಸಿದ ನಟ ವಿಕ್ಕಿ ಕೌಶಲ್ ಸೇರಿದಂತೆ ಚಿತ್ರದ ಸಂಪೂರ್ಣ ಪಾತ್ರವರ್ಗ ಮತ್ತು ಸಿಬ್ಬಂದಿ ಪ್ರದರ್ಶನಕ್ಕೆ ಹಾಜರಾಗುವ ನಿರೀಕ್ಷೆಯಿದೆ.
ಕಳೆದ ತಿಂಗಳ ಆರಂಭದಲ್ಲಿ, ಪ್ರಧಾನಿ ಮೋದಿ ಮರಾಠಾ ಆಡಳಿತಗಾರನ ಜೀವನವನ್ನು ಚಿತ್ರಿಸುವ ಚಿತ್ರವನ್ನು ಶ್ಲಾಘಿಸಿದ್ದರು. "ಮರಾಠಿ ಮತ್ತು ಹಿಂದಿ ಚಿತ್ರರಂಗಕ್ಕೆ ಹೊಸ ಆಯಾಮವನ್ನು ನೀಡಿದ್ದು, ಮಹಾರಾಷ್ಟ್ರ ಹಾಗೂ ಮುಂಬೈ ತ್ತೀಚಿನ ದಿನಗಳಲ್ಲಿ, ಛಾವಾ ದೇಶಾದ್ಯಂತ ಅಲೆಗಳನ್ನು ಸೃಷ್ಟಿಸುತ್ತಿದೆ (ಛಾವಾ ಕಿ ಧೂಮ್ ಮಚಿ ಹುಯಿ ಹೈ ಎಂದು ದಿನೋ). ಶಿವಾಜಿ ಸಾವಂತ್ ಅವರ ಮರಾಠಿ ಕಾದಂಬರಿಯು ಸಂಭಾಜಿ ಮಹಾರಾಜರ ಶೌರ್ಯವನ್ನು ಈ ರೂಪದಲ್ಲಿ ಪರಿಚಯಿಸಿದೆ" ಎಂದು ಪ್ರಧಾನಿ ಮೋದಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ್ದರು.
ಫೆ.14 ರಂದು ಛಾವಾ ಸಿನಿಮಾ ದೇಶ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಸಿನಿಮಾ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಅವರ ಧೈರ್ಯ ಮತ್ತು ಔರಂಗಜೇಬನಿಂದಾಗಿ ಅನುಭವಿಸಿದ ಹಿಂಸೆಯನ್ನು ವಿವರಿಸುತ್ತದೆ. ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ವಿಶ್ವ ಬಾಕ್ಸ್ ಆಫೀಸ್ನಲ್ಲಿ 718.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಮಾತ್ರ ಈ ಸಿನಿಮಾ 633 ಕೋಟಿಗೂ ಹೆಚ್ಚು ಹಣ ಗಳಿಕೆ ಮಾಡಿದೆ. ಭಾರತದಲ್ಲಿ ಮಾತ್ರವೇ ಸಿನಿಮಾದ ಕಲೆಕ್ಷನ್ 800 ಕೋಟಿ ದಾಟುವ ನಿರೀಕ್ಷೆ ಇದೆ.
ಈ ಸುದ್ದಿಯನ್ನೂ ಓದಿ: Chhaava OTT Release: ಒಟಿಟಿಗೆ ಬಂತಾ ಛಾವಾ? ಯಾವ ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ರಿಲೀಸ್?
ಕಳೆದ ವಾರದ ಆರಂಭದಲ್ಲಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜ್ಯ ವಿಧಾನಸಭೆಯಲ್ಲಿ ನಾಗ್ಪುರ ಹಿಂಸಾಚಾರದ ಕುರಿತು ಮಾತನಾಡುತ್ತಾ, "ನಾನು ಯಾವುದೇ ಚಿತ್ರವನ್ನು ದೂಷಿಸುತ್ತಿಲ್ಲ, ಆದರೆ ಛಾವಾ ಛತ್ರಪತಿ ಸಂಭಾಜಿ ಮಹಾರಾಜರ ನಿಜವಾದ ಇತಿಹಾಸವನ್ನು ಪ್ರಸ್ತುತಪಡಿಸಿದ್ದಾರೆ. ಛಾವಾ ಬಿಡುಗಡೆಯಾದ ಬಳಿಕ ಜನರಿಗೆ ಸತ್ಯ ತಿಳಿಯುತ್ತಿದೆ. ಔರಂಗಜೇಬನ ಮೇಲಿನ ಕೋಪವು ಮುನ್ನೆಲೆಗೆ ಬರುತ್ತಿದೆ" ಎಂದು ಹೇಳಿದ್ದಾರೆ.