ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Priyanka Gandhi: ವಯನಾಡಿನಲ್ಲಿ ಜನಪದ ಗೀತೆ ಹಾಡಿದ ಪ್ರಿಯಾಂಕಾ ಗಾಂಧಿ; ಪದ್ಮಶ್ರೀ ಪುರಸ್ಕೃತ ರೈತನ ಜೊತೆ ಸಂವಾದ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಕಳೆದಿದ್ದಾರೆ.

ವಯನಾಡಿನ ಹೊಲಗಳಿಗೆ ಭೇಟಿ ನೀಡಿ, ಜನಪದ ಗೀತೆ ಹಾಡಿದ ಪ್ರಿಯಾಂಕಾ ಗಾಂಧಿ

-

Vishakha Bhat Vishakha Bhat Sep 16, 2025 2:09 PM

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಕಳೆದಿದ್ದಾರೆ. ಸುಮಾರು ಅರವತ್ತು ಬಗೆಯ ಬೀಜಗಳನ್ನು ಸಂರಕ್ಷಿಸಲಾಗಿರುವ ರೈತನ ಭತ್ತದ ಗದ್ದೆಗಳ ಮೂಲಕ ನಡೆದು ಅವರ ವಿಶಿಷ್ಟ ಕೃಷಿ ವಿಧಾನಗಳ ಬಗ್ಗೆ ತಿಳಿದುಕೊಂಡರು. ರಾಮನ್ ಪ್ರಿಯಾಂಕಾಗೆ ಜನಪದ ಗೀತೆಗಳನ್ನು ಹೇಳಿಕೊಟ್ಟಿದ್ದಾರೆ. ಭೇಟಿಯಿಂದ ಹಿಂತಿರುಗುವ ಮೊದಲು ಪ್ರಿಯಾಂಕಾ ರಾಮನ್ ಅವರ ಮಾರ್ಗದರ್ಶನದಲ್ಲಿ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಬಿಲ್ಲು ಮತ್ತು ಬಾಣವನ್ನು ಹೊಡೆಯುವುದನ್ನು ಸಹ ಪ್ರತ್ನಿಸಿದ್ದಾರೆ.

ಸಾವಯವ ಮತ್ತು ಸುಸ್ಥಿರ ಕೃಷಿ ವಿಧಾನಗಳ ಮೂಲಕ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸಿ ಬೆಳೆಸಿದ್ದಕ್ಕಾಗಿ ರಾಮನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರವಾಸದ ಆರಂಭದಲ್ಲಿ, ಪ್ರಿಯಾಂಕಾ ಗಾಂಧಿ ಮೈಲುಕುನ್ನು ಮತ್ತು ಪನಮರಂ ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿದರು, ಇದು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ನಿಧಿಯನ್ನು ಪಡೆಯಲಾಗಿದ್ದು, ಸ್ಥಳೀಯ ಯೋಜನೆಗಳಿಗೆ ಸಂಸದರಿಗೆ ವಾರ್ಷಿಕವಾಗಿ 5 ಕೋಟಿ ರೂ.ಗಳನ್ನು ಹಂಚಿಕೆ ಮಾಡಿರುವ ಅನುದಾನದಿಂದ ನಿರ್ಮಿಸಲಾಗಿದೆ.



ಪ್ರಿಯಾಂಕಾ ಕೋಝಿಕ್ಕೋಡ್‌ನಲ್ಲಿ ಬರಹಗಾರ ಮತ್ತು ಭಾಷಾಶಾಸ್ತ್ರಜ್ಞ ಎಂ.ಎನ್. ಕರಸ್ಸೇರಿ ಅವರನ್ನು ಭೇಟಿ ಮಾಡಿದರು, ಮರ್ಕಜ್ ನಾಲೆಡ್ಜ್ ಸಿಟಿಯಲ್ಲಿ ವಿದ್ವಾಂಸ ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಅವರನ್ನು ಭೇಟಿಯಾದರು. ಮಾನವ-ಪ್ರಾಣಿ ಸಂಘರ್ಷ, ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಅಡಿವರಂನಿಂದ ವಯನಾಡಿಗೆ ಬೈಪಾಸ್‌ನ ಅಗತ್ಯತೆಯ ಸಮಸ್ಯೆಗಳನ್ನು ಎತ್ತಿದ್ದ ತಮರಸ್ಸೇರಿ ಬಿಷಪ್ ರೆಮಿಜಿಯೋಸ್ ಇಂಚನಾನಿಯಿಲ್ ಅವರ ಜೊತೆ ಸಂಸದೆ ಮಾತುಕತೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: Rahul Gandhi: ಬಿಹಾರದ ರ‍್ಯಾಲಿಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಮೇಲೆ ಹರಿದ ರಾಹುಲ್‌ ಗಾಂಧಿ ಕಾರು; ವಿಡಿಯೋ ವೈರಲ್‌

10 ದಿನಗಳ ಪ್ರವಾಸದ ಸಮಯದಲ್ಲಿ ಕ್ಷೇತ್ರದ ಜನರೊಡನೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸುತ್ತೇನೆ. ಆದಷ್ಟು ಬೇಗ ಅದಕ್ಕೆ ಪರಿಹಾರ ಕಂಡುಕೊಳ್ಳು ಪಯತ್ನಿಸುತ್ತೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ.