ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮೋದಿ ಸರ್ಕಾರವನ್ನು ಕಿತ್ತೊಗೆಯಲು ಬಾಂಗ್ಲಾದೇಶ ಮಾದರಿಯ ಪ್ರತಿಭಟನೆ ಅಗತ್ಯ: ನಾಲಗೆ ಹರಿಯಬಿಟ್ಟ ವಿರೋಧ ಪಕ್ಷದ ನಾಯಕ ಅಭಯ್ ಸಿಂಗ್

Abhay Singh Chautala: ಮೋದಿ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕಲು ಬಾಂಗ್ಲಾದೇಶ ಮಾದರಿಯ ಪ್ರತಿಭಟನೆ ಅಗತ್ಯವೆಂದು ಐಎನ್‌ಎಲ್‌ಡಿ ರಾಷ್ಟ್ರೀಯ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲಾ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ನೇಪಾಳದಂತೆ ಭಾರತದಲ್ಲೂ ನಡೆಯಬೇಕೆಂದು ಅವರು ಹೇಳಿದ್ದಾರೆ.

ಅಭಯ್ ಸಿಂಗ್ ಚೌಟಾಲಾ (ಸಂಗ್ರಹ ಚಿತ್ರ)

ನವದೆಹಲಿ, ಜ. 3: ಮೋದಿ ಸರ್ಕಾರವನ್ನು ತೆಗೆದುಹಾಕಲು ಬಾಂಗ್ಲಾದೇಶ (Bangladesh) ಮಾದರಿಯ ಪ್ರತಿಭಟನೆ ಅಗತ್ಯ ಎಂದ ಐಎನ್‌ಎಲ್‌ಡಿ ರಾಷ್ಟ್ರೀಯ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲಾ (Abhay Singh Chautala) ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ಸರ್ಕಾರ ಬದಲಾವಣೆಗಳಿಗೆ ಕಾರಣವಾದ ಪ್ರತಿಭಟನೆಗಳಂತೆಯೇ ಭಾರತವೂ ಪ್ರತಿಭಟನೆಗಳಿಗೆ ಸಾಕ್ಷಿಯಾಗಬೇಕು ಎಂಬ ಭಾರತೀಯ ರಾಷ್ಟ್ರೀಯ ಲೋಕದಳ (INLD) ರಾಷ್ಟ್ರೀಯ ಅಧ್ಯಕ್ಷ ಅಭಯ್ ಸಿಂಗ್ ಚೌಟಾಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆೆಗೆ ಬಿಜೆಪಿ (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಚೌಟಾಲಾ ಈ ಪ್ರಾದೇಶಿಕ ಘಟನೆಗಳನ್ನು ಉಲ್ಲೇಖಿಸಿ, ಪ್ರಸ್ತುತ ಸರ್ಕಾರವನ್ನು ಅಧಿಕಾರದಿಂದ ಹೊರಹಾಕಲು ಭಾರತದಲ್ಲೂ ಅದೇ ತಂತ್ರಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದರು. ಮೋದಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಿರಿ ಎಂದು ಪ್ರತಿಪಾದಿಸಿದ ಚೌಟಾಲ ಅವರ ಹೇಳಿಕೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಯಿತು.

ಗಣಿಗಾರಿಕೆ ವಿರೋಧಿ ಪ್ರತಿಭಟನೆಯಲ್ಲಿ ಮಹಿಳಾ ಕಾನ್‌ಸ್ಟೇಬಲ್ ವಿವಸ್ತ್ರಗೊಳಿಸಿ ಹಲ್ಲೆ!

ಶ್ರೀಲಂಕಾ, ಬ್ಲಾಂಗ್ಲಾದೇಶ, ನೇಪಾಳದಲ್ಲಿ ಸರ್ಕಾರವನ್ನು ಯುವಕರು ಕಿತ್ತೊಗೆದಂತೆಯೇ ಭಾರತದಲ್ಲಿಯೂ ಅದೇ ತಂತ್ರಗಳನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದರು. ಚೌಟಾಲಾ ಅವರ ಈ ಹೇಳಿಕೆಗಳು ಭಾರತದ ಸಂವಿಧಾನಾತ್ಮಕ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಬೆದರಿಕೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಹೇಳಿದರು.

ವಿಡಿಯೊದಲ್ಲಿ ಶೆಹಜಾದ್ ಪೂನಾವಾಲಾ ವಿರೋಧ ಪಕ್ಷದ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಟೀಕಿಸಿದ ಅವರು, ಸಂವಿಧಾನ ವಿರೋಧಿ, ಭಾರತ ವಿರೋಧಿ ಮನೋಭಾವವನ್ನು ಅಳವಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಹೋಗುವ ಇಚ್ಛಾಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಹಾಳು ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿದೆ ವಿಡಿಯೊ:



ರಾಜಕೀಯ ಲಾಭ ಪಡೆಯಲು ಅವರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಅವರು ಹೇಳಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಗಿಂತ ತಮ್ಮ ಸ್ವಾರ್ಥಗಳನ್ನೇ ಮುಂದಿಡುತ್ತಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಬಿಜೆಪಿಯ ಮತ್ತೊಬ್ಬ ವಕ್ತಾರ ಪ್ರದೀಪ್ ಭಂಡಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. ಇದನ್ನು ಭಾರತೀಯ ವಿರೋಧ ಮನಸ್ಥಿತಿ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಹಿರಿಯ ನಾಯಕರು ಭಾರತದ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನಿಸುತ್ತಾರೆ ಎಂದು ಅವರು ಆರೋಪಿಸಿದರು. ಇಂತಹ ಹೇಳಿಕೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ ಎಂದೂ ಆಕ್ಷೇಪ ವ್ಯಕ್ತಪಡಿಸಿದರು.

ಹರಿಯಾಣ ಕ್ಯಾಬಿನೆಟ್ ಸಚಿವ ಕೃಷ್ಣನ್ ಬೇಡಿ ಕೂಡ ಚೌಟಾಲ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪಕ್ಷಗಳ ಸೈದ್ಧಾಂತಿಕ ಸ್ಥಿರತೆಯ ಬಗ್ಗೆ ಅವರು ಪ್ರಶ್ನಿಸಿದರು.