ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೋದಿ ‘ಹಗ್’ ರಾಜತಾಂತ್ರಿಕತೆಗೆ ರಾಹುಲ್ ಗಾಂಧಿ ವ್ಯಂಗ್ಯ: ಇಂದಿರಾ ಗಾಂಧಿ ಫೋಟೋ ಶೇರ್‌ ಮಾಡಿ ಬಿಜೆಪಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ‘ಹಗ್ ಡಿಪ್ಲೊಮಸಿ’ ಕುರಿತು ರಾಹುಲ್ ಗಾಂಧಿ ವ್ಯಂಗ್ಯವಾಡಿದ ಬೆನ್ನಲ್ಲೇ ಬಿಜೆಪಿ ಸಂಸದ ನಿಶಿಕಾಂತ್ ದುಬೆ ತಿರುಗೇಟು ನೀಡಿದ್ದಾರೆ. ಇಂದಿರಾ ಗಾಂಧಿ ಅವರ ವಿದೇಶಿ ನಾಯಕರೊಂದಿಗಿನ ಹಳೆಯ ಫೋಟೋಗಳು ಹಾಗೂ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮೋದಿ ಅವರನ್ನು ಅಪ್ಪಿಕೊಂಡಿದ್ದ ಚಿತ್ರವನ್ನು ಹಂಚಿಕೊಂಡು ದುಬೆ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಹೇಳಿಕೆ ವಿರುದ್ಧ ಹಲವು ಬಿಜೆಪಿ ನಾಯಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ನಿಶಿಕಾಂತ್ ದುಬೆ ಕೌಂಟರ್..!

ರಾಹುಲ್ ಗಾಂಧಿ ಹೇಳಿಕೆಗೆ ನಿಶಿಕಾಂತ್ ದುಬೆ ಕೌಂಟರ್ -

Profile
Sushmitha Jain Aug 14, 2026 8:33 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವ ಶೈಲಿಯನ್ನು (hugging style) ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಅವರಿಗೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ತಿರುಗೇಟು ನೀಡಿದ್ದಾರೆ. ಗುರುವಾರ ನಡೆದ ಕಾಂಗ್ರೆಸ್‌ನ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಅಪ್ಪಿಕೊಳ್ಳುವುದರ ಸುತ್ತಮುತ್ತಲೇ ಇದೆ ಎಂಬಂತೆ ವ್ಯಂಗ್ಯವಾಡಿದ್ದರು. ತಮ್ಮ ಮಾತನ್ನು ವಿವರಿಸಲು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರನ್ನು ವೇದಿಕೆಯಲ್ಲೇ ಅಪ್ಪಿಕೊಂಡಿದ್ದರು.
ಈ ವೇಳೆ ದೀಕ್ಷಿತ್, “ಮೆಲೋನಿ ಎಂದು ಭಾವಿಸಿ ಹಿಡಿದಿರಲಿಲ್ಲವೇ?” ಎಂದು ಪ್ರಶ್ನಿಸಿದರು. ಇದಕ್ಕೆ ರಾಹುಲ್ ಗಾಂಧಿ, “ನಾನು ಇನ್ನೂ ಅಲ್ಲಿಗೆ ತಲುಪಿಲ್ಲ” ಎಂದು ಪ್ರತಿಕ್ರಿಯಿಸಿದ್ದರು. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಉಲ್ಲೇಖಿಸಿದ ಈ ಮಾತುಗಳು ಬಿಜೆಪಿ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.
ಇದಕ್ಕೆ ಪ್ರತಿಕ್ರಿಯಿಸಿದ ನಿಶಿಕಾಂತ್ ದುಬೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕ್ಯೂಬಾದ ಕ್ರಾಂತಿಕಾರಿ ನಾಯಕ ಫಿಡೆಲ್ ಕ್ಯಾಸ್ಟ್ರೋ ಹಾಗೂ ಪ್ಯಾಲೆಸ್ಟೈನ್ ನಾಯಕ ಯಾಸರ್ ಅರಾಫತ್ ಅವರನ್ನು ಭೇಟಿಯಾದ ಸಂದರ್ಭದ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ, ಲೋಕಸಭೆಯಲ್ಲಿ ಸುಮಾರು ಎಂಟು ವರ್ಷಗಳ ಹಿಂದೆ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಅಪ್ಪಿಕೊಂಡಿದ್ದ ವೈರಲ್ ಚಿತ್ರವನ್ನೂ ಪೋಸ್ಟ್ ಮಾಡಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವಕ್ಕೆ ದೆಹಲಿ ಸಜ್ಜು: ಕೆಂಪುಕೋಟೆಯಲ್ಲಿ ಅದ್ಧೂರಿ ಸಮಾರಂಭ


ಈ ಮೂಲಕ ರಾಹುಲ್ ಗಾಂಧಿ ಅವರ ಟೀಕೆಗೆ ಅವರ ಕುಟುಂಬದ ರಾಜತಾಂತ್ರಿಕ ಇತಿಹಾಸ ಹಾಗೂ ಸ್ವಂತ ನಡೆಗಳನ್ನೇ ಮುಂದಿಟ್ಟು ದುಬೆ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಸೇರಿದಂತೆ ಹಲವು ಬಿಜೆಪಿ ನಾಯಕರು ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ.


“ರಾಹುಲ್ ಗಾಂಧಿ, ನೀವು ಯಾವಾಗ ಪ್ರಬುದ್ಧರಾಗುತ್ತೀರಿ?” ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದು, ಪ್ರಧಾನಿ ಅವರನ್ನು ಅವಮಾನಿಸುವ ಮೂಲಕ ಮೋದಿ ಅವರನ್ನು ಆಯ್ಕೆ ಮಾಡಿದ ಕೋಟ್ಯಂತರ ಮತದಾರರನ್ನು ಅವಮಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬಾನ್ಸುರಿ ಸ್ವರಾಜ್ ಅವರು ರಾಹುಲ್ ಗಾಂಧಿ ಬಳಸಿದ ಭಾಷೆ ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ತಕ್ಕುದಲ್ಲ ಎಂದು ಟೀಕಿಸಿದ್ದಾರೆ. ಮತ್ತೊಂದೆಡೆ, ವನತಿ ಶ್ರೀನಿವಾಸನ್ ರಾಜಕೀಯ ಟೀಕೆಗೆ ಅವಕಾಶವಿದ್ದರೂ ಮಹಿಳೆಯರನ್ನು ಅವಮಾನಿಸುವ ಅಥವಾ ಸಾರ್ವಜನಿಕ ಜೀವನವನ್ನು ಅಸಭ್ಯ ಹಾಸ್ಯಕ್ಕೆ ಇಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.