RCB Fans: ಆರ್ಸಿಬಿ ಫೈನಲ್ಗೇರಿದ ಖುಷಿಯಲ್ಲಿ ನಡು ರಸ್ತೆಯಲ್ಲೇ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ; ಯುವಕರ ಬಂಧನ
ಮೇ 29 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ (PBKS) ನಡುವಿನ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಫೈನಲ್ ಪ್ರವೇಶಿಸಿದೆ. ನೆಚ್ಚಿನ ತಂಡ ಫೈನಲ್ಗೇರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದೆ.


ರಾಯಚೂರು: ಮೇ 29 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ (PBKS) ನಡುವಿನ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಫೈನಲ್ ಪ್ರವೇಶಿಸಿದೆ. ನೆಚ್ಚಿನ ತಂಡ ಫೈನಲ್ಗೇರುತ್ತಿದ್ದಂತೆ ಅಭಿಮಾನಿಗಳು (RCB Fans) ಸಂಭ್ರಮಾಚರಣೆ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಅವರು ಜೈಲು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಹುಚ್ಚು ರೀತಿಯ ಸಂಭ್ರಮಾಚರಣೆಯನ್ನು ಮಾಡಿ ಸಂಕಷ್ಟ ತಂದು ಕೊಂಡಿದ್ದಾರೆ.
8 ಯುವಕರ ಗುಂಪು ಆರ್ಸಿಬಿ ಪರ ಘೋಷಣೆಗಳನ್ನು ಕೂಗಿ ಪ್ಲಾಸ್ಟಿಕ್ ಚೀಲದಲ್ಲಿ ಪೆಟ್ರೋಲ್ ತುಂಬಿದ್ದಾರೆ. ಆ ಚೀಲದ ಮೇಲೆ ಅಡುಗೆಗೆ ಬಳಸುವ ಹಿಟ್ಟನ್ನು ಇಟ್ಟಿದ್ದರು. ರಸ್ತೆಯಲ್ಲಿ ವಾಹನಗಳು ಓಡಾಡುತ್ತಿರುವುದನ್ನು ಕ್ಯಾರೆ ಮಾಡದೆ ಚೀಲವನ್ನು ಸ್ಪೋಟಿಸಿದ್ದರು. ಸ್ಫೋಟದ ಭಯಾನಕ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಈ ಸಂಬಂಧ ಯುವಕರ ಮೇಲೆ ದೂರು ನೀಡಲಾಗಿತ್ತು. ಜೀವಕ್ಕೆ ಅಪಾಯವನ್ನು ಉಂಟುಮಾಡುವ ಆರೋಪದಲ್ಲಿ ಹಾಗೂ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನಗಳಿಗೆ ಅಡೆತಡೆ ಉಂಟುಮಾಡಿದ ಆರೋಪದಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ತಕ್ಷಣವೇ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಯುವಕರು ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿಲ್ಲ ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಸಂಭ್ರಮಾಚರಣೆಯ ವೇಳೆ ಖುಷಿಯಲ್ಲಿ ಯುವಕರು ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಯೂಟ್ಯೂಬ್ ಚಾನೆಲ್ಗಳಲ್ಲಿ ಪೆಟ್ರೋಲ್ ಬಾಂಬ್ ರೀತಿಯ ವಿಡಿಯೋಗಳನ್ನು ನೋಡಿ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ರಾಯಚೂರು ಎಸ್ಪಿ ಪುಟ್ಟ ಮಾದಯ್ಯ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ತಂಡ ಫೈನಲ್ ಪ್ರವೇಶಿಸಿದ ಬೆನ್ನಲ್ಲೇ ಪತ್ನಿ ಅನುಷ್ಕಾಗೆ ಸನ್ನೆ ಮಾಡಿದ ವಿರಾಟ್
ಜೂನ್ 3 ರಂದು ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಫೈನಲ್ ಪ್ರವೇಶಿಸಿರುವ ಆರ್ಸಿಬಿಗೆ ಎದುರಾಳಿ ಯಾರಾಗಲಿದ್ದಾರೆ ಎಂಬುದು ಇಂದು ತಿಳಿದು ಬರಲಿದೆ.