ನವದೆಹಲಿ: 2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ (2020 Delhi Riots) ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಇತರರಿಗೆ ಜಾಮೀನು ನೀಡುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲು ದೆಹಲಿ ಪೊಲೀಸರು ಅಫಿಡವಿಟ್ ಸಿದ್ಧಪಡಿಸಿದ್ದಾರೆ. ಹಿಂಸಾಚಾರವು ಯೋಜಿತ "ಆಡಳಿತ ಬದಲಾವಣೆ ಕಾರ್ಯಾಚರಣೆಯ" ಭಾಗವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಪ್ರಕಾರ, ಗಲಭೆಗಳು ಸ್ವಯಂಪ್ರೇರಿತವಾಗಿಲ್ಲ. ದೇಶದಲ್ಲಿ ಶಾಂತಿಯನ್ನು ಕದಡಲು ಮತ್ತು ಜಾಗತಿಕವಾಗಿ ಭಾರತದ ವರ್ಚಸ್ಸಿಗೆ ಹಾನಿ ಮಾಡಲು ಎಚ್ಚರಿಕೆಯಿಂದ ಯೋಜಿಸಲಾದ ಪ್ರಯತ್ನ ಇದಾಗಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಭಿನ್ನಾಭಿಪ್ರಾಯವನ್ನು ಅಸ್ತ್ರವಾಗಿ ಬಳಸಿಕೊಂಡು "ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಹೊಡೆತ ನೀಡುವ ಉದ್ದೇಶದಿಂದ ಈ ಅಶಾಂತಿಯನ್ನು ಕದಡುವ ಪ್ರಯತ್ನವಾಗಿತ್ತೆಂದು ಪೊಲೀಸರು ಹೇಳಿದ್ದಾರೆ. ಅಂತರರಾಷ್ಟ್ರೀಯ ಗಮನ ಸೆಳೆಯಲು ಮತ್ತು ದೇಶವನ್ನು ನಕಾರಾತ್ಮಕವಾಗಿ ಬಿಂಬಿಸುವ ಉದ್ದೇಶದಿಂದ, ಹಿಂಸಾಚಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡುವ ಸಮಯಕ್ಕೆ ಹೊಂದಿಕೆಯಾಗುವಂತೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಗಲಭೆಗಳು ಪೂರ್ವಯೋಜಿತ ಮತ್ತು ಅವರ ಭೇಟಿಗೆ ಹೊಂದಿಕೆಯಾಗುವ ಸಮಯಕ್ಕೆ ಸರಿಯಾಗಿದ್ದವು ಎಂದು ವಾದಿಸಲು ಪೊಲೀಸರು ಡೊನಾಲ್ಡ್ ಟ್ರಂಪ್ ಅವರನ್ನು ಉಲ್ಲೇಖಿಸುವ ಚಾಟ್ ಸಂದೇಶಗಳು ಸೇರಿದಂತೆ ಪುರಾವೆಗಳನ್ನು ಉಲ್ಲೇಖಿಸಿದ್ದಾರೆ. ಪೊಲೀಸರು ಹೇಳುವಂತೆ, ಇದು ಅಂತರರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆಯಲು ಮತ್ತು ಸಿಎಎ ಸಮಸ್ಯೆಯನ್ನು ಮುಸ್ಲಿಮರ ವಿರುದ್ಧದ ಗುರಿಯಿಟ್ಟ ಕೃತ್ಯವೆಂದು ಬಿಂಬಿಸುವ ಮೂಲಕ "ಜಾಗತಿಕೀಕರಣ" ಮಾಡಲು ಉದ್ದೇಶಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ: Delhi Riots Case: ದೆಹಲಿ ಗಲಭೆ ಪ್ರಕರಣ; ಅಕ್ಟೋಬರ್ 7ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
ಏನಿದು ಪ್ರಕರಣ?
2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ವೇಳೆ 53 ಜನ ಮೃತಪಟ್ಟಿದ್ದು, 700 ಹೆಚ್ಚು ಜನರಿಗೆ ಗಾಯಗಳಾಗಿತ್ತು. ಇದರ ಹಿಂದೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸೇರಿ ಆತನ ಒಂಬತ್ತು ಸ್ನೆಹಿತರ ಬಂಧನವಾಗಿತ್ತು. ಇದಾದ ನಂತ್ರ ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು.