ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಜಮ್ಮು ಕಾಶ್ಮೀರದ ವೈದ್ಯಕೀಯ ಕಾಲೇಜಿನ 50 ಸೀಟ್‌ಗಳ ಪೈಕಿ 42 ಮುಸ್ಲಿಂ ವಿದ್ಯಾರ್ಥಿಗಳು; ಬಿಜೆಪಿಯಿಂದ ವಿರೋಧ

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಹೊಸದಾಗಿ ಆರಂಭವಾಗಿರುವ ಶ್ರೀ ಮಾತಾ ವೈಷ್ಣೋ ದೇವಿ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಎಕ್ಸಲೆನ್ಸ್‌ ವೈದ್ಯಕೀಯ ಕಾಲೇಜಿನ 2025-26ರ ಶೈಕ್ಷಣಿಕ ವರ್ಷದ 50 ವಿದ್ಯಾರ್ಥಿಗಳ ಬ್ಯಾಚ್‌ನಲ್ಲಿ 42 ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದ್ದು, ವಿವಾದಕ್ಕೆ ಕಾರಣವಾಗಿದೆ. ಪ್ರವೇಶ ಪಡೆದ ಮುಸ್ಲಿಂ ವಿದ್ಯಾರ್ಥಿಗಳ ಸೀಟನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ ಮನೋಜ್‌ ಸಿನ್ಹಾ ಅವರನ್ನು ಭೇಟಿಯಾದ ಬಿಜೆಪಿ ನಿಯೋಗ.

ಶ್ರೀನಗರ, ನ. 23: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕತ್ರಾದಲ್ಲಿರುವ ಶ್ರೀ ಮಾತಾ ವೈಷ್ಣೋ ದೇವಿ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಎಕ್ಸಲೆನ್ಸ್‌ (Shri Mata Vaishno Devi Institute of Medical Excellence) ವೈದ್ಯಕೀಯ ಕಾಲೇಜಿನ 2025-26ರ ಶೈಕ್ಷಣಿಕ ವರ್ಷದ 50 ವಿದ್ಯಾರ್ಥಿಗಳ ಮೊದಲ ಎಂಬಿಬಿಎಸ್‌ ಬ್ಯಾಚ್‌ನಲ್ಲಿ 42 ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದ್ದು, ವಿವಾದ ಭುಗಿಲೆದ್ದಿದೆ. ಬಲ ಪಂಥೀಯ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೈಗೊಂಡಿದ್ದು, ಇದೀಗ ಬಿಜೆಪಿ ಕೂಡ ಅಖಾಡಕ್ಕೆ ಇಳಿದಿದೆ. ಪ್ರವೇಶ ಪಡೆದ ಮುಸ್ಲಿಂ ವಿದ್ಯಾರ್ಥಿಗಳ ಸೀಟನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ಅಲ್ಲದೆ ವೈದ್ಯಕೀಯ ಕಾಲೇಜಿನ ಮೊದಲ ಬ್ಯಾಚ್‌ನ ಬಹುಪಾಲು ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸುವಂತೆ ಕೋರಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ ಮನೋಜ್‌ ಸಿನ್ಹಾ (Manoj Sinha) ಅವರಿಗೆ ಮನವಿ ಸಲ್ಲಿಸಿದೆ. ಆ ಮೂಲಕ ವಿವಾದ ಮತ್ತೊಂದು ಹಂತಕ್ಕೆ ತಲುಪಿದೆ.

ನೀಟ್ ನಿಯಮದ ಪ್ರಕಾರವೇ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ಕಾಲೇಜ್‌ ಆಡಳಿತ ಮಂಡಳಿ ಕ್ರಮವನ್ನು ಸಮರ್ಥಿಸಿಕೊಂಡಿದೆ. ಅದಾಗ್ಯೂ ಬಲ ಪಂಥೀಯ ಸಂಂಘಟನೆಗಳು ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿವೆ.

ಆರ್.ಎಸ್. ಪಠಾನಿಯಾ ಅವರ ಎಕ್ಸ್‌ ಪೋಸ್ಟ್‌:



ಬಿಜೆಪಿ ಹೇಳಿದ್ದೇನು?

ಬಿಜೆಪಿ ಶಾಸಕ ಆರ್.ಎಸ್. ಪಠಾನಿಯಾ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ʼʼವೈಷ್ಣೋ ದೇವಿ ಭಕ್ತರ ಕೊಡುಗೆಗಳ ಮೂಲಕ ರಚಿಸಲಾದ ಇಂತಹ ಸಂಸ್ಥೆಗಳು ದೇವಾಲಯದ ಆಧ್ಯಾತ್ಮಿಕ ಸ್ವರೂಪವನ್ನು ಪ್ರತಿಬಿಂಬಿಸಬೇಕು. ಇದಕ್ಕಾಗಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರಬೇಕುʼʼ ಎಂದು ಪಟ್ಟು ಹಿಡಿದರು.

"ಒಂದು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂಬ ವಿಚಾರ ದೇಶದ ಜನರಿಗೆ ಸ್ವೀಕಾರಾರ್ಹವಲ್ಲ. ನಮ್ಮ ಭಾವನೆಗಳನ್ನು ಮತ್ತು ಜನರ ನೋವನ್ನು ನಾವು ಲೆಫ್ಟಿನೆಂಟ್ ಗವರ್ನರ್ ಅವರಿಗೆ ತಿಳಿಸಿದ್ದೇವೆ. ಮಾತಾ ವೈಷ್ಣೋದೇವಿಯಲ್ಲಿ ನಂಬಿಕೆ ಇಟ್ಟಿರುವ ವಿದ್ಯಾರ್ಥಿಗಳಿಗೆ ಮಾತ್ರ ವೈದ್ಯಕೀಯ ಕಾಲೇಜಿಗೆ ಪ್ರವೇಶ ನೀಡಬೇಕು ಎಂಬುದು ಬಿಜೆಪಿಯ ನಿಲುವು" ಎಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ ಹೇಳಿದರು.

ʼಇಲ್ಲಿನ ಪ್ರಾಣಿಗಳು ನನಗಿಂತ ಉತ್ತಮವಾಗಿ ಬದುಕುತ್ತಿವೆʼ ವಂತಾರದ ವನ್ಯಸಿರಿಗೆ ಬೆರಗಾದ ಜೂನಿಯರ್‌ ಟ್ರಂಪ್‌

ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮನೋಜ್‌ ಸಿನ್ಹಾ ಭರವಸೆ ನೀಡಿದ್ದಾರೆ ಎಂದು ಶರ್ಮಾ ತಿಳಿಸಿದರು. ಅಧಿಕೃತ ಮೂಲಗಳ ಪ್ರಕಾರ, ವೈಷ್ಣೋ ದೇವಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಎಕ್ಸಲೆನ್ಸ್ ಅನ್ನು ಅಲ್ಪಸಂಖ್ಯಾತ ಸಂಸ್ಥೆ ಎಂದು ವರ್ಗೀಕರಿಸಲಾಗಿಲ್ಲ. ಆದ್ದರಿಂದ ಪ್ರವೇಶ ಪ್ರಕ್ರಿಯೆಯನ್ನು ಮಾರ್ಗಸೂಚಿಗಳ ಪ್ರಕಾರ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್; 26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 13 ವೈದ್ಯಕೀಯ ಕಾಲೇಜುಗಳಿವೆ. ವೈಷ್ಣೋ ದೇವಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಎಕ್ಸಲೆನ್ಸ್ ಅನ್ನು ಈ ವರ್ಷ ಆರಂಭಿಸಲಾಗಿದೆ. ಪ್ರವೇಶಗಳನ್ನು ನೀಟ್‌ನ ಮೆರಿಟ್ ಪಟ್ಟಿಯನ್ನು ಆಧರಿಸಿ ನೀಡಲಾಗುತ್ತದೆ ಎಂದು ಅಧಿಕೃತರು ತಿಳಿಸಿದ್ದಾರೆ. ಶೇ. 85ರಷ್ಟು ಸೀಟ್‌ಗಳನ್ನು ಸ್ಥಳೀಯ ನಿವಾಸಿಗಳಿಗೆ ಮೀಸಲಿಡಲಾಗಿದೆ. ಅದಾಗ್ಯೂ ಜಮ್ಮುವಿನಿಂದ ಕೇವಲ 8 ಹಿಂದೂ ವಿದ್ಯಾರ್ಥಿಗಳು 50 ಸೀಟ್‌ನ ಬ್ಯಾಚ್‌ನಲ್ಲಿ ಪ್ರವೇಶ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಕಾನ್ಫರೆನ್ಸ್‌ ನಾಯಕ ಸಜ್ಜಾದ್‌ ಲೋನ್‌ ಬಿಜೆಪಿ ವೈದ್ಯಕೀಯ ಶಿಕ್ಷಣವನ್ನೂ ಧಾರ್ಮಿಕಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.