ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corona Case: ಕೊರೋನಾ ಕೇಸ್‌ ಹೆಚ್ಚಳ; ಪ್ರಧಾನಿ ಭೇಟಿಗೂ ಮುನ್ನ ಸಚಿವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಕೊರೋನಾ ಕೇಸ್‌ಗಳು (Corona Case) ದಿನೇ ದನೇ ಹೆಚ್ಚಾಗುತ್ತಲೇ ಇವೆ. ಆರೋಗ್ಯ ಇಲಾಖೆ ಈ ಕುರಿತು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತದಲ್ಲಿ ಇದೀಗ 7000 ಕ್ಕೂ ಅಧಿಕ ಸಕ್ರಿಯ ಪ್ರಕರಣಳಿವೆ. ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗುವ ಸಚಿವರಿಗೆ ಆರ್‌ಟಿ-ಪಿಸಿಆರ್ (RTPCR) ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಪ್ರಧಾನಿ ಭೇಟಿಗೂ ಮುನ್ನ ಸಚಿವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

Profile Vishakha Bhat Jun 11, 2025 12:48 PM

ನವದೆಹಲಿ: ಭಾರತದಲ್ಲಿ ಕೊರೋನಾ ಕೇಸ್‌ಗಳು (Corona Case) ದಿನೇ ದನೇ ಹೆಚ್ಚಾಗುತ್ತಲೇ ಇವೆ. ಆರೋಗ್ಯ ಇಲಾಖೆ ಈ ಕುರಿತು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತದಲ್ಲಿ ಇದೀಗ 7000 ಕ್ಕೂ ಅಧಿಕ ಸಕ್ರಿಯ ಪ್ರಕರಣಳಿವೆ. ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗುವ ಸಚಿವರಿಗೆ ಆರ್‌ಟಿ-ಪಿಸಿಆರ್ (RTPCR) ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ, ಎಲ್ಲಾ ಏಳು ಸಂಸದರು ಮತ್ತು ಶಾಸಕರು ಸೇರಿದಂತೆ ದೆಹಲಿಯ ಸುಮಾರು 70 ಬಿಜೆಪಿ ಕಾರ್ಯಕರ್ತರು ಇಂದು ಸಂಜೆ ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದು, ಅವರು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ, ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯ ಪಕ್ಷದ ನಾಯಕರನ್ನು ಸಂಜೆ 7:30 ಕ್ಕೆ ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 306 ಹೊಸ ಪ್ರಕರಣಗಳು ಮತ್ತು ಆರು ಸಾವುಗಳು ಸಂಭವಿಸಿವೆ. ಕೇರಳದಲ್ಲಿ ಮೂರು ಸಾವುಗಳು ದಾಖಲಾಗಿದ್ದರೆ, ಮಹಾರಾಷ್ಟ್ರ (1) ಮತ್ತು ಕರ್ನಾಟಕದಲ್ಲಿ ಎರಡು ಸಾವು ವರದಿಯಾಗಿದೆ.

ಕೇರಳದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, 170 ಹೊಸ ಪ್ರಕರಣಗಳು ವರದಿಯಾಗಿವೆ. ಏತನ್ಮಧ್ಯೆ, ಗುಜರಾತ್‌ನಲ್ಲಿ 114 ಹೊಸ ಸೋಂಕುಗಳು ಮತ್ತು 1,223 ಸಕ್ರಿಯ ಪ್ರಕರಣಗಳು ದಾಖಲಾಗಿವೆ, ನಂತರದ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಅಂಕಿಅಂಶಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 66 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರದ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Corona Virus: ರಾಜ್ಯದಲ್ಲಿ ಕೊರೊನಾ ವೈರಸ್‌ಗೆ 3ನೇ ಬಲಿ, ಕೋವಿಡ್‌ ಟೆಸ್ಟ್‌ ಕಡ್ಡಾಯ

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಆಸ್ಪತ್ರೆಗಳ ಸನ್ನದ್ಧತೆಯನ್ನು ನಿರ್ಣಯಿಸಲು ಕೇಂದ್ರವು ದೇಶಾದ್ಯಂತ ಅಣಕು ಕವಾಯತುಗಳನ್ನು ಪ್ರಾರಂಭಿಸಿದೆ. ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.