ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Satyapal Malik: ಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲಿಕ್‌ ವಿಧಿವಶ

Satyapal Malik Passed away: ಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲಿಕ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 79ವರ್ಷ ವಯಸ್ಸಾಗಿತ್ತು. ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿಯಲ್ಲಿ ಏಕಾಏಕಿ ಏರುಪೇರಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲಿಕ್‌ ವಿಧಿವಶ

Rakshita Karkera Rakshita Karkera Aug 5, 2025 1:48 PM

ಶ್ರೀನಗರ: ಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲಿಕ್‌(Satyapal Malik) ಅವರು ವಿಧಿವಶರಾಗಿದ್ದಾರೆ. ಅವರಿಗೆ 79ವರ್ಷ ವಯಸ್ಸಾಗಿತ್ತು. ಸತ್ಯಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿಯಲ್ಲಿ ಏಕಾಏಕಿ ಏರುಪೇರಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿಯೇ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಆಗಸ್ಟ್ 5, 2019 ರಂದು ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು. ಕಾಕತಾಳೀಯ ಎಂಬಂತೆ ಇದೇ ದಿನ ಆರ್ಟಿಕಲ್‌ 370 ರದ್ದುಗೊಳಿಸಲಾಗಿತ್ತು.

ನಂತರ ಅವರನ್ನು ಗೋವಾದ ರಾಜ್ಯಪಾಲರಾಗಿ ನೇಮಿಸಲಾಯಿತು. ನಂತರ ಅಕ್ಟೋಬರ್ 2022 ರವರೆಗೆ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಇದಕ್ಕೂ ಮೊದಲು, 2017ರಲ್ಲಿ, ಅವರು ಬಿಹಾರದ ರಾಜ್ಯಪಾಲ ಹುದ್ದೆಯನ್ನೂ ನಿರ್ವಹಿಸಿದ್ದರು. ಮಲಿಕ್ ಅವರ ರಾಜಕೀಯ ಜೀವನವು 1970 ರ ದಶಕದಲ್ಲಿ ಪ್ರಾರಂಭವಾಯಿತು. ಅವರ ವೃತ್ತಿಜೀವನವು ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳ, ಕಾಂಗ್ರೆಸ್ ಮತ್ತು ವಿಪಿ ಸಿಂಗ್ ನೇತೃತ್ವದ ಜನತಾ ದಳ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು ಅಂತಿಮವಾಗಿ 2004 ರಲ್ಲಿ ಬಿಜೆಪಿಗೆ ಸೇರಿದರು.

ಈ ಸುದ್ದಿಯನ್ನೂ ಓದಿ: Pahalgam Terror Attack: ಇಂದು ಜಮ್ಮು-ಕಾಶ್ಮೀರಕ್ಕೆ ರಾಹುಲ್‌ ಗಾಂಧಿ ಭೇಟಿ

ಅವರು 1974 ರಲ್ಲಿ ಮೊದಲ ಬಾರಿಗೆ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು. ನಂತರ ಅವರು ಲೋಕದಳದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು ಮತ್ತು 1980 ಮತ್ತು 1989 ರಲ್ಲಿ ರಾಜ್ಯಸಭೆಯಲ್ಲಿ ಉತ್ತರ ಪ್ರದೇಶದಿಂದ ಸಂಸದರಾದರು. ಆ ಸಂದರ್ಭದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು. 1987 ರಲ್ಲಿ, ಬೋಫೋರ್ಸ್ ಹಗರಣದಿಂದ ಆಕ್ರೋಶಗೊಂಡ ಅವರು ರಾಜ್ಯಸಭೆ ಮತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು, ತರುವಾಯ ತಮ್ಮದೇ ಆದ ರಾಜಕೀಯ ಪಕ್ಷವಾದ ಜನ ಮೋರ್ಚಾವನ್ನು ಸ್ಥಾಪಿಸಿದರು, ನಂತರ ಅದನ್ನು 1988 ರಲ್ಲಿ ಜನತಾದಳದೊಂದಿಗೆ ವಿಲೀನಗೊಳಿಸಲಾಯಿತು.