ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shashi Tharoor: ಉಗ್ರ ಪೋಷಕ ಪಾಕ್ ಬಗ್ಗೆ ಕೊಲಂಬಿಯಾಕ್ಕೆ ಎಷ್ಟು ಕನಿಕರ! ಶಶಿ ತರೂರ್ ಅಸಮಾಧಾನ

ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಬಲವಾದ ಸಂಕಲ್ಪವನ್ನು ವಿಶ್ವಕ್ಕೆ ತಿಳಿಸಲು ಸರ್ಕಾರದ ಜಾಗತಿಕ ಸಂಪರ್ಕದ ಭಾಗವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor ) ಅವರನ್ನು ಒಳಗೊಂಡ ಸಂಸದರ ನಿಯೋಗವು ಕೊಲಂಬಿಯಾ ಪ್ರವಾಸದಲ್ಲಿದೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶಶಿ ತರೂರ್ , ಭಾರತೀಯ ಸೇನೆ ನಡೆಸಿದ ದಾಳಿಯ ಅನಂತರ ಪಾಕಿಸ್ತಾನದಲ್ಲಿ ಆಗಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿರುವ ಕೊಲಂಬಿಯಾ ಸರ್ಕಾರದ ಪ್ರತಿಕ್ರಿಯೆಯಿಂದ ನಾವು ಸ್ವಲ್ಪ ನಿರಾಶೆಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಉಗ್ರ ಪೋಷಕ ಪಾಕ್ ಬಗ್ಗೆ ಕೊಲಂಬಿಯಾಕ್ಕೆ ಎಷ್ಟು ಕನಿಕರ!

ನವದೆಹಲಿ: ಆಪರೇಷನ್ ಸಿಂದೂರ್ ( Operation Sindoor) ವೇಳೆ ಪಾಕಿಸ್ತಾನದಲ್ಲಿ (pakistan) ಉಂಟಾದ ಜೀವ ಹಾನಿಗೆ ಸಂತಾಪ ಸೂಚಿಸಿರುವ ಕೊಲಂಬಿಯಾ (Colombia) ಬಗ್ಗೆ ನಿರಾಶೆಗೊಂಡಿರುವುದಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ (Congress MP Shashi Tharoor) ಹೇಳಿದ್ದಾರೆ. ಭಯೋತ್ಪಾದಕರನ್ನು ಕಳುಹಿಸುವವರು ಮತ್ತು ತಮ್ಮನ್ನು ತಾವು ರಕ್ಷಿಸಿಕೊಳ್ಳುವವರ ನಡುವೆ ಸಮಾನತೆಯಾಗಲು ಸಾಧ್ಯವಿಲ್ಲ ಎಂದಿರುವ ತರೂರ್, ಭಾರತೀಯ ದಾಳಿಯ ಅನಂತರ ಪಾಕಿಸ್ತಾನದಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿರುವ ಕೊಲಂಬಿಯಾ ಸರ್ಕಾರದ ಪ್ರತಿಕ್ರಿಯೆಯಿಂದ ನಾವು ಸ್ವಲ್ಪ ನಿರಾಶೆಗೊಂಡಿದ್ದೇವೆ. ಇದರ ಬದಲು ಭಯೋತ್ಪಾದನೆಗೆ ಬಲಿಯಾದವರ ಬಗ್ಗೆ ಸಹಾನುಭೂತಿ ತೋರಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಬಲವಾದ ಸಂಕಲ್ಪವನ್ನು ವಿಶ್ವಕ್ಕೆ ತಿಳಿಸಲು ಸರ್ಕಾರದ ಜಾಗತಿಕ ಸಂಪರ್ಕದ ಭಾಗವಾಗಿ ತರೂರ್ ಅವರನ್ನು ಒಳಗೊಂಡ ಸಂಸದರ ನಿಯೋಗವು ಕೊಲಂಬಿಯಾ ಪ್ರವಾಸದಲ್ಲಿದೆ.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆ ನಡೆಸಿದ ದಾಳಿಯ ಅನಂತರ ಪಾಕಿಸ್ತಾನದಲ್ಲಿ ಆಗಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿರುವ ಕೊಲಂಬಿಯಾ ಸರ್ಕಾರದ ಪ್ರತಿಕ್ರಿಯೆಯಿಂದ ನಾವು ಸ್ವಲ್ಪ ನಿರಾಶೆಗೊಂಡಿದ್ದೇವೆ. ಇದರ ಬದಲು ಭಯೋತ್ಪಾದನೆಯ ಬಲಿಪಶುಗಳ ಬಗ್ಗೆ ಸಹಾನುಭೂತಿ ತೋರಿಸಬೇಕಿತ್ತು ಎಂದು ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 6 ನಾಗರಿಕರನ್ನು ಹತ್ಯೆಯ ಹಿಂದೆ ಪಾಕಿಸ್ತಾನ ಪೋಷಿಸುತ್ತಿರುವ ಭಯೋತ್ಪಾದಕರ ಕೈವಾಡವಿದೆ ಎಂಬುದಕ್ಕೆ ದೃಢವಾದ ಪುರಾವೆಗಳಿವೆ. ನಾವು ನಮ್ಮ ಆತ್ಮರಕ್ಷಣೆಯ ಹಕ್ಕನ್ನು ಮಾತ್ರ ಚಲಾಯಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಕೊಲಂಬಿಯಾದೊಂದಿಗೆ ವಿವರವಾಗಿ ಮಾತನಾಡಲು ನಮಗೆ ತುಂಬಾ ಸಂತೋಷವಾಗಿದೆ. ಕೊಲಂಬಿಯಾ ಅನೇಕ ಭಯೋತ್ಪಾದಕ ದಾಳಿಗಳನ್ನು ಸಹಿಸಿಕೊಂಡಿರುವಂತೆಯೇ ಭಾರತದಲ್ಲೂ ಸಹ ನಾವು ಸಹಿಸಿಕೊಂಡಿದ್ದೇವೆ. ಸುಮಾರು ನಾಲ್ಕು ದಶಕಗಳಿಂದ ಬಹಳ ದೊಡ್ಡ ಸಂಖ್ಯೆಯ ದಾಳಿಗಳನ್ನು ನಾವು ಸಹಿಸಿಕೊಂಡಿದ್ದೇವೆ ಎಂದು ಅವರು ಹೇಳಿದರು.



ಪಾಕಿಸ್ತಾನಕ್ಕೆ ಚೀನಾವು ಶೇ. 81 ರಷ್ಟು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತದೆ ಎಂದು ತರೂರ್, ಚೀನಾ ಮತ್ತು ಪಾಕಿಸ್ತಾನದ ಆರ್ಥಿಕ ಕಾರಿಡಾರ್ ಬಗ್ಗೆಯೂ ಈ ಸಂದರ್ಭದಲ್ಲಿ ಉಲ್ಲೇಖಿಸಿದರು. ರಕ್ಷಣೆ ಎಂಬುದು ಸಭ್ಯ ಪದ. ಪಾಕಿಸ್ತಾನಿ ಮಿಲಿಟರಿ ಉಪಕರಣಗಳಲ್ಲಿ ಹೆಚ್ಚಿನವು ರಕ್ಷಣೆಗಾಗಿ ಅಲ್ಲ. ನಮ್ಮ ಮೇಲಿನ ದಾಳಿಗಾಗಿ. ಭಯೋತ್ಪಾದನೆಯ ಸಂಚು ನಡೆಸುವುದಕ್ಕಾಗಿ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Viral News: ಹೈ-ಫೈ ಕಂಪನಿಯಲ್ಲಿ ನಾಯಿಗೂ ಒಂದು ಹೈಯರ್‌ ಪೋಸ್ಟ್‌! ಏನಿದು ವೈರಲ್‌ ಸುದ್ದಿ?

ಶಶಿ ತರೂರ್ ನೇತೃತ್ವದ ನಿಯೋಗವು ಪನಾಮ ಮತ್ತು ಗಯಾನಾಗೆ ಭೇಟಿ ನೀಡಿದ ಅನಂತರ ಗುರುವಾರ ಕೊಲಂಬಿಯಾಕ್ಕೆ ಆಗಮಿಸಿತ್ತು. ಬೊಗೋಟಾದಲ್ಲಿ ವಾಸ್ತವ್ಯವಿರುವ ನಿಯೋಗದ ಸದಸ್ಯರು ಕೊಲಂಬಿಯಾದ ಮಂತ್ರಿಗಳು ಮತ್ತು ಚಿಂತಕರೊಂದಿಗೆ ಸಂವಹನ ನಡೆಸಲಿದೆ. ಈ ನಿಯೋಗದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾದ ಸರ್ಫ್ರಾಜ್ ಅಹ್ಮದ್, ತೆಲುಗು ದೇಶಂ ಪಕ್ಷದ ಜಿ ಎಂ ಹರೀಶ್ ಬಾಲಯೋಗಿ, ಬಿಜೆಪಿಯ ಶಶಾಂಕ್ ಮಣಿ ತ್ರಿಪಾಠಿ, ಭುವನೇಶ್ವರ ಕಲಿತಾ, ತೇಜಸ್ವಿ ಸೂರ್ಯ, ಶಿವಸೇನೆಯ ಮಿಲಿಂದ್ ದಿಯೋರಾ ಮತ್ತು ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಇದ್ದಾರೆ.