ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೋಲಲಿಲ್ಲ, ಮೌನವಾಗಿದ್ದೇನೆ: ಆಪ್‌ಗೆ ಸಂಸದ ರಾಘವ್ ಚಡ್ಡಾ ನೀಡಿದ ಸಂದೇಶವೇನು?

Silenced, not defeated: ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಕ್ಕಾಗಲೆಲ್ಲಾ ನಾನು ಸಾರ್ವಜನಿಕ ಸಮಸ್ಯೆಗಳನ್ನು ಎತ್ತುತ್ತಿದ್ದೆ. ಯಾರೂ ಎತ್ತಲು ಧೈರ್ಯ ಮಾಡದ ವಿಷಯಗಳು, ಆದರೆ ಸಾರ್ವಜನಿಕ ಸಮಸ್ಯೆಗಳನ್ನು ಎತ್ತುವುದು ಅಪರಾಧವೇ? ನಾನು ಅಪರಾಧ ಮಾಡಿದ್ದೇನೆಯೇ? ನಾನು ತಪ್ಪು ಮಾಡಿದ್ದೇನೆಯೇ? ಎಂದು ರಾಘವ್ ಚಡ್ಡಾ ಪ್ರಶ್ನಿಸಿದ್ದಾರೆ.

ಆಪ್‌ಗೆ ಸಂಸದ ರಾಘವ್ ಚಡ್ಡಾ ನೀಡಿದ ಸಂದೇಶವೇನು?

ಸಂಸದ ರಾಘವ್ ಚಡ್ಡಾ (ಸಂಗ್ರಹ ಚಿತ್ರ) -

Priyanka P
Priyanka P Apr 3, 2026 11:41 AM

ನವದೆಹಲಿ, ಏ.3: ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕನ ಸ್ಥಾನದಿಂದ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ಬದಲಾಯಿಸಲು ಆಮ್ ಆದ್ಮಿ ಪಕ್ಷ (AAP) ಮುಂದಾದ ಬೆನ್ನಲ್ಲೇ ಆಮ್ ಆದ್ಮಿ ನಾಯಕ, ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ (Social Media) ಪೋಸ್ಟ್ ಮಾಡಿದ ಅವರು ನಾನು ಮೌನವಾಗಿರಬೇಕು, ಆದರೆ ಸೋಲುವುದಿಲ್ಲ ಎಂದು ಹೇಳಿದರು.

ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಕ್ಕಾಗಲೆಲ್ಲಾ ಸಾಮಾನ್ಯ ಜನರ ಸಮಸ್ಯೆಗಳನ್ನು ಎತ್ತಲು ಅವಕಾಶವನ್ನು ಬಳಸಿಕೊಂಡೆ ಎಂದು ಚಡ್ಡಾ 'ಆಮ್ ಆದ್ಮಿ'ಗೆ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ. ಎಎಪಿಯನ್ನು ಗುರಿಯಾಗಿಸಿ ಮಾತನಾಡಿದ ಅವರು, ಜನರ ಧ್ವನಿ ಎತ್ತುವುದು ಅಪರಾಧವೇ ಎಂದು ಪಕ್ಷವನ್ನು ಪ್ರಶ್ನಿಸಿದರು.

ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಕ್ಕಾಗಲೆಲ್ಲಾ ನಾನು ಸಾರ್ವಜನಿಕ ಸಮಸ್ಯೆಗಳನ್ನು ಎತ್ತುತ್ತಿದ್ದೆ. ಯಾರೂ ಎತ್ತಲು ಧೈರ್ಯ ಮಾಡದ ವಿಷಯಗಳು, ಆದರೆ ಸಾರ್ವಜನಿಕ ಸಮಸ್ಯೆಗಳನ್ನು ಎತ್ತುವುದು ಅಪರಾಧವೇ? ನಾನು ಅಪರಾಧ ಮಾಡಿದ್ದೇನೆಯೇ? ನಾನು ತಪ್ಪು ಮಾಡಿದ್ದೇನೆಯೇ? ನಾನು ಏನಾದರೂ ತಪ್ಪು ಮಾಡಿದ್ದೇನೆಯೇ? ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊ ಸಂದೇಶದಲ್ಲಿ ಚಡ್ಡಾ ಕೇಳಿದ್ದಾರೆ.

ಇಲ್ಲಿದೆ ಪೋಸ್ಟ್:



ಸಂಸತ್ತಿನಲ್ಲಿ ಮಾತನಾಡದಂತೆ ತಡೆಯಲು ಎಎಪಿ ಸಚಿವಾಲಯಕ್ಕೆ ತಿಳಿಸಿದ್ದರಿಂದ ನಾನು ಈ ಪ್ರಶ್ನೆಯನ್ನು ಕೇಳುತ್ತಿದ್ದೇನೆ ಎಂದು ಅವರು ಹೇಳಿದರು. ಗುರುವಾರ (ಏ.2) ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ರಾಜ್ಯಸಭೆಯಲ್ಲಿನ ಉಪ ನಾಯಕನ ಸ್ಥಾನದಿಂದ ಚಡ್ಡಾ ಅವರನ್ನು ಕೈಬಿಟ್ಟು, ಅವರಿಗೆ ಸದನದ ಸಮಯವನ್ನು ರದ್ದುಗೊಳಿಸುವಂತೆ ಸಚಿವಾಲಯವನ್ನು ವಿನಂತಿಸಿದ ನಂತರ ಚಡ್ಡಾ ಅವರು ಈ ಪ್ರಶ್ನೆ ಎತ್ತಿದ್ದಾರೆ.

ಅಂದಹಾಗೆ, ಎಎಪಿ ಗುರುವಾರ (ಏ.2) ರಾಜ್ಯಸಭಾ ಸಚಿವಾಲಯಕ್ಕೆ ಚಡ್ಡಾ ಅವರನ್ನು ವಜಾಗೊಳಿಸುವಂತೆ ಪತ್ರ ಬರೆದಿದ್ದು, ಅವರ ಬದಲಿಗೆ ಮೇಲ್ಮನೆಯಲ್ಲಿ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರ ಹೆಸರನ್ನು ಪಕ್ಷದ ಉಪ ನಾಯಕರನ್ನಾಗಿ ಪ್ರಸ್ತಾಪಿಸಿದೆ.

ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಉಚ್ಚಾಟನೆ: ಪಕ್ಷದಲ್ಲಿ ಎಲ್ಲವೂ ಸರಿ ಇಲ್ವಾ?

ರಾಘವ್ ಚಡ್ಡಾ ದೇಶದ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾಗಿದ್ದು, ಒಂದು ಕಾಲದಲ್ಲಿ ಕೇಜ್ರಿವಾಲ್ ಅವರ ಆಪ್ತ ಎಂದು ಪರಿಗಣಿಸಲ್ಪಟ್ಟಿದ್ದರು. ಪಕ್ಷದ ವ್ಯವಹಾರಗಳಲ್ಲಿ, ವಿಶೇಷವಾಗಿ ಪಂಜಾಬ್‌ನಲ್ಲಿ ಮತ್ತು ದೆಹಲಿಯಲ್ಲಿ ಎಎಪಿಯ ಅಧಿಕಾರಾವಧಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಆಮ್ ಆದ್ಮಿ ಪಾರ್ಟಿಯು ತನ್ನ ಪ್ರಭಾವಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದೆ. ಈ ಬದಲಾವಣೆಯ ಕುರಿತು ರಾಜ್ಯಸಭಾ ಸಚಿವಾಲಯಕ್ಕೆ ಅಧಿಕೃತ ಪತ್ರವನ್ನು ರವಾನಿಸಲಾಗಿದೆ. ವಿಶೇಷವೆಂದರೆ, ಈ ಪತ್ರದಲ್ಲಿ ಸಂಸತ್ತಿನಲ್ಲಿ ಮಾತನಾಡಲು ಚಡ್ಡಾ ಅವರಿಗೆ ಹೆಚ್ಚಿನ ಸಮಯವನ್ನು ನೀಡಬಾರದು ಎಂಬ ಅಂಶವನ್ನೂ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಠಾತ್ ಬದಲಾವಣೆಯು ಆಪ್ ಪಾಳಯದಲ್ಲಿ ಭಿನ್ನಮತ ಉಂಟಾಗಿದೆಯೇ ಎಂಬ ಚರ್ಚೆಗೆ ನಾಂದಿ ಹಾಡಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ನೂತನ ಉಪನಾಯಕ ಅಶೋಕ್ ಮಿತ್ತಲ್, "ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಇದು ಕೇವಲ ವಾಡಿಕೆಯ ಬದಲಾವಣೆ. ಎಲ್ಲರಿಗೂ ಅವಕಾಶ ನೀಡಬೇಕು ಎಂಬುದು ಪಕ್ಷದ ಆಶಯ" ಎಂದು ಸ್ಪಷ್ಟಪಡಿಸಿದ್ದಾರೆ.