Pawan Kalyan: ಪವನ್ ಕಲ್ಯಾಣ್ ಬೆಂಗಾವಲು ವಾಹನದಿಂದ ಸಂಚಾರ ದಟ್ಟಣೆ; JEE ಪರೀಕ್ಷೆ ಮಿಸ್ಮಾಡ್ಕೊಂಡು ವಿದ್ಯಾರ್ಥಿಗಳು ಕಣ್ಣೀರು
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿಶಾಖಪಟ್ಟಣಕ್ಕೆ ಆಗಮಿಸಿದ್ದರಿಂದ ಅವರ ಬೆಂಗಾವಲು ಪಡೆ ರಸ್ತೆಯನ್ನು ತಡೆದಿದೆ. ಇದರಿಂದಾಗಿ ಸಂಚಾರ ವಿಳಂಬ ಉಂಟಾಗಿದೆ. ಇದರಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ (ಇಂಜಿನಿಯರಿಂಗ್) ಪರೀಕ್ಷೆಗೆ ಸರಿಯಾದ ಸಮಯಕ್ಕೆ ತಲುಪಲಾಗದೆ ಕಣ್ಣೀರು ಹಾಕಿದ್ದಾರೆ.


ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ವಿಶಾಖಪಟ್ಟಣಕ್ಕೆ ಆಗಮಿಸಿದ್ದರಿಂದ ಅವರ ಬೆಂಗಾವಲು ಪಡೆ ರಸ್ತೆಯನ್ನು ತಡೆದಿದೆ. ಇದರಿಂದಾಗಿ ಸಂಚಾರ ವಿಳಂಬ ಉಂಟಾಗಿದೆ. ಇದರಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ (ಇಂಜಿನಿಯರಿಂಗ್) ಪರೀಕ್ಷೆಗೆ ಸರಿಯಾದ ಸಮಯಕ್ಕೆ ತಲುಪಲಾಗದೆ ಕಣ್ಣೀರು ಹಾಕಿದ್ದಾರೆ. ವಿಶಾಖಪಟ್ಟಣದಲ್ಲಿ ಮೂವತ್ತು ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗಲಿಲ್ಲ. ಪವನ್ ಕಲ್ಯಾಣ್ ಅವರ ಮೇಲೆ ವಿದ್ಯಾರ್ಥಿಗಳ ಪೋಷಕರು ಕಿಡಿ ಕಾರಿದ್ದಾರೆ. ಇದು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ದೀರ್ಘಕಾಲೀನ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
30க்கு மேற்பட்ட மாணவர்கள் JEE mains examஐ மிஸ் செய்துள்ளனர்
— Haraappan (@haraappan) April 7, 2025
Reason : Pawan Kalyan fans & his stupid fans causing traffic
நடிகனுக்கு அதிகாரம் கிடைத்தால்😕😕
pic.twitter.com/BIQHLVeGdK
ಸೋಮವಾರ ವಿಶಾಖಪಟ್ಟಣಂನಲ್ಲಿ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಮಿಸುತ್ತಿದ್ದಾರೆ ಎಂದು ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಹಲವು ರಸ್ತೆಗಳನ್ನು ಮುಚ್ಚಿ ಜನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೊಠಡಿ ತಲುಪಬೇಕಿದ್ದ ವಿದ್ಯಾರ್ಥಿಗಳು ರಸ್ತೆಯಲ್ಲೇ ಉಳಿಯಬೇಕಾಯಿತು. ಪರೀಕ್ಷೆ ಇದೆ ನಮ್ಮನ್ನು ಬಿಟ್ಟು ಬಿಡಿ ಎಂದು ವಿದ್ಯಾರ್ಥಿಗಳು ಎಷ್ಟೇ ಮನವಿ ಮಾಡಿದರೂ ಸಹ ಪವನ್ ಕಲ್ಯಾಣ್ ಬೆಂಗಾವಲು ಪಡೆ ಅವರನ್ನು ಬಿಟ್ಟಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನಕ್ಕೆ ವಿಧಿಸಲಾಗಿದ್ದ ಸಂಚಾರ ನಿರ್ಬಂಧಗಳಿಂದಾಗಿ ತನ್ನ ಮಗ ತಡವಾಗಿ ಬಂದಿದ್ದಾನೆ ಎಂದು ವಿದ್ಯಾರ್ಥಿಯ ತಾಯಿ ಬಿ ಕಲಾವತಿ ಹೇಳಿದ್ದಾರೆ. ನಾವು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದೆವು ಎಂದು ಅವರು ಹೇಳಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್ಎಫ್) ಪತ್ರಿಕಾ ಪ್ರಕಟಣೆಯಲ್ಲಿ, ಪರೀಕ್ಷಾ ಸಮಯದಲ್ಲಿ ಸಂಚಾರ ನಿರ್ವಹಣೆಯ ಅಸಮರ್ಥತೆಗೆ ಅಧಿಕಾರಿಗಳನ್ನು ದೂಷಿಸಿದೆ. ವಿದ್ಯಾರ್ಥಿಗಳು ತಮ್ಮದೇ ಆದ ತಪ್ಪಿನಿಂದಾಗಿ ಪರೀಕ್ಷೆ ಬರೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ಅದು ಹೇಳಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ನಗರ ಪೊಲೀಸರು, ವಿದ್ಯಾರ್ಥಿಗಳು ಬೆಳಿಗ್ಗೆ 7 ಗಂಟೆಯೊಳಗೆ ಪರೀಕ್ಷಾ ಕೇಂದ್ರಗಳನ್ನು ತಲುಪುವ ನಿರೀಕ್ಷೆಯಿತ್ತು ಮತ್ತು ಈ 30 ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿದ್ದರೆ, ಅವರು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವ ಪ್ರಶ್ನೆಯೇ ಇರಲಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಅಭ್ಯರ್ಥಿಯೂ ಬೆಳಿಗ್ಗೆ 07:00 ಗಂಟೆಗೆ ವರದಿ ಮಾಡಿಕೊಳ್ಳಬೇಕು ಮತ್ತು ಪರೀಕ್ಷಾ ಕೇಂದ್ರದ ಗೇಟ್ ಅನ್ನು ಬೆಳಿಗ್ಗೆ 8:30 ಕ್ಕೆ ಮುಚ್ಚಲಾಗುತ್ತದೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Pawan Kalyan: ಪವನ್ ಕಲ್ಯಾಣ್ ಟೆಂಪಲ್ ರನ್- ಕೇರಳ,ತಮಿಳುನಾಡು ದೇವಸ್ಥಾನಗಳಿಗೆ ಭೇಟಿ
ವಿರೋಧ ಪಕ್ಷದ ನಾಯಕರು ಪವನ್ ಕಲ್ಯಾಣ್ ವಿರುದ್ಧ ಕಿಡಿ ಕಾರಿದ್ದಾರೆ. ಸಿನಿಮೀಯ್ ಶೈಲಿಯಲ್ಲಿ ಡೈಲಾಗ್ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡರೆ ಸಾಲದು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು ಎಂದು ಹೇಳಿದ್ದಾರೆ. ಪವನ್ ಕಲ್ಯಾಣ್ ಅವರು ಈ ಘಟನೆ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.