ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇರಾನ್‌ಗೆ ಬೆಂಬಲ: ಶ್ರೀನಗರದಲ್ಲಿ ನೆತನ್ಯಾಹು, ಟ್ರಂಪ್ ಪೋಸ್ಟರ್‌ಗೆ ಬೆಂಕಿ ಹಚ್ಚಿದ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಮೆರಿಕ, ಇಸ್ರೇಲ್ ವಿರೋಧಿ ಪ್ರತಿಭಟನೆಗಳು ತೀವ್ರವಾಗಿದ್ದು, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಚಿತ್ರಗಳನ್ನು ದಹಿಸಿ ಘೋಷಣೆಗಳನ್ನು ಕೂಗಿದರು.

ಸಂಗ್ರಹ ಚಿತ್ರ

ಶ್ರೀನಗರ: ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಇರಾನ್ ಮೇಲೆ ನಡೆಸುತ್ತಿರುವ ದಾಳಿ ಮತ್ತು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಹತ್ಯೆಗೆ ಖಂಡನೆಯನ್ನು ವ್ಯಕ್ತಪಡಿಸಿ ಜಮ್ಮು ಮತ್ತು ಕಾಶ್ಮೀರದ (Jammu and kashmir) ಶ್ರೀನಗರದಲ್ಲಿ(Srinagar) ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Peoples Democratic Party chief Mehbooba Mufti) ನೇತೃತ್ವದಲ್ಲಿ ಬುಧವಾರ ಪ್ರತಿಭಟನೆಯನ್ನು ನಡೆಸಿದವು. ಈ ಸಂದರ್ಭದಲ್ಲಿ ಮೆಹಬೂಬಾ ಮುಫ್ತಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Israeli Prime Minister Benjamin Netanyahu) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ( US President Donald Trump ) ಅವರ ಪೋಸ್ಟರ್‌ಗಳನ್ನು ಸುಟ್ಟುಹಾಕಿದರು.

ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ನಿರ್ಬಂಧಗಳಿದ್ದರೂ ಅಲ್ಲಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಶ್ರೀನಗರದಲ್ಲಿ ಬುಧವಾರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕ್ರಮ ಮತ್ತು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯನ್ನು ಖಂಡಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟರ್‌ಗಳನ್ನು ಸುಟ್ಟು ಹಾಕಲಾಯಿತು. ಪಕ್ಷದ ಬೆಂಬಲಿಗರು ಖಮೇನಿ ಅವರ ಪೋಸ್ಟರ್‌ಗಳನ್ನು ಹಿಡಿದು ಅಮೆರಿಕ ಮತ್ತು ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದರು.

US-Israel-Iran War: ಶ್ರೀಲಂಕಾದಲ್ಲಿ ಇರಾನ್ ಯುದ್ಧನೌಕೆ ಮೇಲೆ ದಾಳಿ; 101 ಮಂದಿ ನಾಪತ್ತೆ

ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಮೆಹಬೂಬಾ ಮುಫ್ತಿ ಅವರು, ನಿಮ್ಮೊಂದಿಗೆ ಶಾಂತಿಯಿಂದ ನಿಲ್ಲುವವರೊಂದಿಗೆ ಮತ್ತು ನಿಮ್ಮನ್ನು ವಿರೋಧಿಸುವವರ ವಿರುದ್ಧ, ತೀರ್ಪಿನ ದಿನದವರೆಗೆ ನಾನು ಶಾಂತಿಯಿಂದ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಖಮೇನಿಯ ಹತ್ಯೆಯನ್ನು ಇತಿಹಾಸದ ದುರಂತ ಎಂದು ಕರೆದಿರುವ ಅವರು, ಕೆಲವು ಮುಸ್ಲಿಂ ದೇಶಗಳಿಂದ ಸ್ಪಷ್ಟ ಮತ್ತು ಸೂಚ್ಯ ಬೆಂಬಲ ಎಂದು ಅವರು ಕರೆದಿರುವುದನ್ನು ಟೀಕಿಸಿದ್ದಾರೆ. ನ್ಯಾಯಕ್ಕಾಗಿ ಹೋರಾಡಿದವರು ಮತ್ತು ದಬ್ಬಾಳಿಕೆಗಾರರಿಗೆ ಸಹಾಯ ಮಾಡಿದವರು ಯಾರು ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಗಲ್ಫ್ ಬಿಕ್ಕಟ್ಟಿನ ನಡುವೆ ಭಾರತಕ್ಕೆ ರಷ್ಯಾದ ನೆರವಿನ ಹಸ್ತ: ಇಂಧನ ಭದ್ರತೆಗೆ ಕ್ರಮ

ಇರಾನ್ ಮೇಲೆ ಯುಎಸ್ ಮತ್ತು ಇಸ್ರೇಲ್ ನಡೆಸಿದ ದಾಳಿಯನ್ನು ಯುದ್ಧದ ಮೊದಲ ದಿನದಿಂದಲೂ ಮುಫ್ತಿ ಅವರು ಟೀಕಿಸುತ್ತಿದ್ದರು. ಇರಾನ್, ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಐದನೇ ದಿನಕ್ಕೆ ಕಾಲಿಟ್ಟಾಗಲೇ ಅವರು ಪ್ರತಿಭಟನೆಗೆ ಇಳಿದಿದ್ದರು.

ವಿದ್ಯಾ ಇರ್ವತ್ತೂರು

View all posts by this author