ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತ್ವಿಶಾ ಶರ್ಮಾ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್: ಮೇ 25 ರಂದು ವಿಚಾರಣೆ

Twisha Sharma Case: ದೇಶಾದ್ಯಂತ ಬಹಳ ಚರ್ಚೆಗೆ ಕಾರಣವಾಗಿರುವ ಹೈಪ್ರೊಫೈಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸ್ವತಃ ಕೈಗೆತ್ತಿಕೊಂಡು ಮೇ 25 ರಂದು ವಿಚಾರಣೆಗೆ ನಿಗದಿಪಡಿಸಿದೆ.

ತ್ವಿಶಾ ಶರ್ಮಾ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ನವದೆಹಲಿ, ಮೇ 24: ದೇಶಾದ್ಯಂತ ಬಹಳ ಚರ್ಚೆಗೆ ಕಾರಣವಾಗಿರುವ ಹೈಪ್ರೊಫೈಲ್ ತ್ವಿಶಾ ಶರ್ಮಾ (Twisha Sharma Case) ಸಾವಿನ ಪ್ರಕರಣವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ (Supreme Court) ಈ ಪ್ರಕರಣವನ್ನು ಸ್ವತಃ ಕೈಗೆತ್ತಿಕೊಂಡು ಮೇ 25 ರಂದು ವಿಚಾರಣೆಗೆ ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮಾತ್ರವಲ್ಲದೆ, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ ಪಾಂಚೋಲಿ ಅವರು ಪೀಠದಲ್ಲಿ ಇರಲಿದ್ದಾರೆ.

ಭೋಪಾಲ್‌ನ ಪತಿ ಮನೆಯಲ್ಲಿ ತ್ವಿಶಾ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶರ್ಮಾ ಸಾವಿಗೆ ಆಕೆಯ ಗಂಡ, ಅತ್ತೆ-ಮಾವ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆಕೆಯ ಮೇಲೆ ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ ನಡೆಸಲಾಗುತ್ತಿತ್ತು ಎಂದು ದೂರಿದ್ದಾರೆ. ತ್ವಿಶಾ ಶರ್ಮಾ ಸಾವಿನ ಪ್ರಕರಣದ ತನಿಖೆಯಲ್ಲಿ ಸರಿಯಾದ ಕ್ರಮಗಳನ್ನು ಪಾಲಿಸಲಾಗಿದೆಯೇ, ಇಲ್ಲವೇ ಹಾಗೂ ಅಧಿಕಾರಿಗಳು ಯಾರಾದರೂ ಪಕ್ಷಪಾತದಿಂದ ವರ್ತಿಸಿದ್ದಾರೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಲಿದೆ.

ತ್ವಿಶಾ ಶರ್ಮಾ ಅವರ ಕುಟುಂಬವು ಅವರ ಪತಿ ಮತ್ತು ಅವರ ತಾಯಿ ಸೇರಿದಂತೆ ಅತ್ತೆ ಮತ್ತು ಮಾವ ತನಿಖೆಯನ್ನು ದಾರಿ ತಪ್ಪಿಸಲು ಮತ್ತು ಪ್ರಕರಣದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಪತಿ ಸಮರ್ಥ್ ಸಿಂಗ್ ವಕೀಲರಾಗಿದ್ದು, ಅವರ ಅತ್ತೆ ಗಿರಿಬಾಲಾ ಸಿಂಗ್ ನಿವೃತ್ತ ನ್ಯಾಯಾಧೀಶರಾಗಿದ್ದಾರೆ.

ಸಾಯುವ ಕೆಲವೇ ಗಂಟೆಗಳ ಮುನ್ನ ಸಲೂನ್‌ಗೆ ಭೇಟಿ: ಮಾಲೀಕರಿಂದ ಬಯಲಾಯ್ತು ತ್ವಿಶಾ ಶರ್ಮಾ ಕುರಿತು ಸ್ಪೋಟಕ ಮಾಹಿತಿ

ಪತಿ ಹಾಗೂ ಅತ್ತೆ ಸೇರಿ ಮನೆಯವರು ತನಿಖೆಯನ್ನು ತಪ್ಪು ದಾರಿಗೆ ಒಯ್ಯಲು ಮತ್ತು ಪ್ರಕರಣದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಿದ್ದಾರೆ ಎಂದು ತ್ವಿಶಾ ಕುಟುಂಬಸ್ಥರು ಆರೋಪಿಸಿದ್ದಾರೆ. ತ್ವಿಶಾ ಅವರ ಪತಿ ಸಮರ್ಥ್ ಸಿಂಗ್ ವಕೀಲರಾಗಿದ್ದು, ಅತ್ತೆ ಗಿರಿಬಾಲಾ ಸಿಂಗ್ ನಿವೃತ್ತ ನ್ಯಾಯಾಧೀಶೆಯಾಗಿದ್ದಾರೆ.

ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಪ್ರಕರಣವನ್ನು ಪ್ರಭಾವಿತಗೊಳಿಸುವ ಪ್ರಯತ್ನ ನಡೆದಿದೆ ಎಂಬ ಆತಂಕವನ್ನು ತ್ವಿಶಾ ಕುಟುಂಬ ವ್ಯಕ್ತಪಡಿಸಿದೆ. ಪತ್ನಿಯ ಶವ ಪತ್ತೆಯಾದ 10 ದಿನಗಳ ನಂತರ ಸಮರ್ಥ್ ಸಿಂಗ್ ಅವರನ್ನು ಬಂಧಿಸಲಾಯಿತು. ಆದರೆ ಅವರು ತಲೆಮರೆಸಿಕೊಂಡಿರಲಿಲ್ಲ ಎಂದು ವಕೀಲ ಮೃಗೇಂದ್ರ ಸಿಂಗ್ ತಿಳಿಸಿದ್ದಾರೆ.

ರಾಜ್ಯದಲ್ಲಿನ ನ್ಯಾಯಾಂಗದ ಹಸ್ತಕ್ಷೇಪದಿಂದ ತನಿಖೆ ಸರಿಯಾದ ರೀತಿಯಲ್ಲಿ ಮುಂದುವರಿಯಲಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಈ ವಿಚಾರವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಮ್ಸ್ ಭೋಪಾಲ್ ಶವಾಗಾರದಲ್ಲಿ ಸಂರಕ್ಷಿಸಲಾಗಿರುವ 33 ವರ್ಷದ ತ್ವಿಶಾ ಶರ್ಮಾಳ ಮೃತದೇಹದ ಎರಡನೇ ಮರಣೋತ್ತರ ಪರೀಕ್ಷೆಯನ್ನು ದೆಹಲಿಯ ಏಮ್ಸ್‌ನ ವಿಧಿವಿಜ್ಞಾನ ವಿಭಾಗದ ನಾಲ್ವರು ಹಿರಿಯ ವೈದ್ಯರ ತಂಡ ನಡೆಸಲಿದೆ. ಆಧುನಿಕ ವಿಧಿವಿಜ್ಞಾನ ಉಪಕರಣಗಳನ್ನು ಹೊಂದಿರುವ ವೈದ್ಯಕೀಯ ಮಂಡಳಿಯು ವಿವರವಾದ ಪರೀಕ್ಷೆಯನ್ನು ನಡೆಸಿ ತನ್ನ ಸಂಶೋಧನೆಗಳನ್ನು ದೆಹಲಿಯ ಏಮ್ಸ್‌ನ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸುಧೀರ್ ಗುಪ್ತಾ ಅವರಿಗೆ ಸಲ್ಲಿಸಲಿದೆ. ಅವರು ಅಂತಿಮ ವರದಿಯನ್ನು ಸಿದ್ಧಪಡಿಸಲಿದ್ದಾರೆ.