Rahul Gandhi: ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ತಡೆಯಾಜ್ಞೆ!

2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಸುಪ್ರೀಂ ಕೋರ್ಟ್‌ ರಾಹುಲ್ ವಿಚಾರಣೆಗೆ ಇಂದು(ಜ.20) ತಡೆಯಾಜ್ಞೆ ನೀಡಿದೆ

Rahul Gandhi (3)
Profile Deekshith Nair Jan 20, 2025 12:51 PM

ನವದೆಹಲಿ: ಕೇಂದ್ರ ಗೃಹ ಸಚಿವ, ಬಿಜೆಪಿಯ ಮಾಜಿ ಅಧ್ಯಕ್ಷ ಅಮಿತ್ ಶಾ(Amit Shah) ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್(Supreme Court) ಸೋಮವಾರ(ಜ.20) ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರರ ಪ್ರತಿಕ್ರಿಯೆಯನ್ನು ಕೇಳಿತು.



ಇಂದಿನ ವಿಚಾರಣೆಯ ಸಂದರ್ಭದಲ್ಲಿ, ರಾಹುಲ್‌ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಪ್ರಕರಣದಲ್ಲಿ ಮೂರನೇ ವ್ಯಕ್ತಿಯಿಂದ ದೂರು ದಾಖಲಿಸಲಾಗಿದೆ. ಮಾನನಷ್ಟ ಅಪರಾಧದ ವಿಷಯದಲ್ಲಿ ಈ ರೀತಿ ಮೂರನೇ ವ್ಯಕ್ತಿ ದೂರು ದಾಖಲಿಸುವುದನ್ನು ಅನುಮತಿಸಲಾಗದು ಎಂದು ವಾದ ಮಂಡಿಸಿದರು. "ನೀವು ಬಾಧಿತ ವ್ಯಕ್ತಿಯಲ್ಲದಿದ್ದರೆ, ನೀವು ಹೇಗೆ ಪ್ರಾಕ್ಸಿ ದೂರು ಸಲ್ಲಿಸಬಹುದು?" ಎಂದು ಸಿಂಘ್ವಿ ಪ್ರಶ್ನಿಸಿದರು.



ಅಂತಿಮವಾಗಿ ನ್ಯಾಯಾಲಯವು, "ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ನೀಡಿ. ಮುಂದಿನ ಆದೇಶದವರೆಗೆ ವಿಚಾರಣೆಯಲ್ಲಿನ ಎಲ್ಲಾ ಪ್ರಕ್ರಿಯೆಗಳು ತಡೆಹಿಡಿಯಲ್ಪಡುತ್ತವೆ" ಎಂದು ಆದೇಶಿಸಿತು.

ಏನಿದು ಘಟನೆ?

ಜಾರ್ಖಂಡ್‌ನಲ್ಲಿ ನಡೆದಿದ್ದ ಸಭೆಯೊಂದರಲ್ಲಿ ಮಾರ್ಚ್ 18, 2018 ರಂದು ಬಿಜೆಪಿಯನ್ನು ಟೀಕಿಸುವ ಭಾಷಣವನ್ನು ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಭಾಷಣದ ವೇಳೆ ಅಂದಿನ ಗೃಹ ಸಚಿವ ಅಮಿತ್‌ ಶಾ ಅವರು ಕೊಲೆಯಲ್ಲಿ ಭಾಗಿಯಾಗಿದ್ದಾರೆ ರಾಹುಲ್‌ ಹೇಳಿದ್ದರು ಎಂದು ಬಿಜೆಪಿ ಮುಖಂಡ ನವೀನ್ ಝಾ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನೂ ಓದಿ:Vachanananda swamiji: ಪ್ರಯಾಗರಾಜ್‌ ಮಹಾ ಕುಂಭಮೇಳ: ಮಹಾ ಧಾರ್ಮಿಕ ಸಮ್ಮೇಳನ

ಆರಂಭದಲ್ಲಿ, ರಾಂಚಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಝಾ ಅವರ ದೂರನ್ನು ವಜಾಗೊಳಿಸಿತ್ತು. ಆದರೆ ಮುಂದೆ, ರಾಂಚಿಯ ನ್ಯಾಯಾಂಗ ಆಯುಕ್ತರು ಸೆಪ್ಟೆಂಬರ್ 15, 2018 ರಂದು ದೂರಿನ ಅರ್ಜಿಯನ್ನು ವಜಾಗೊಳಿಸಿದ ಆದೇಶವನ್ನು ರದ್ದುಗೊಳಿಸಿ ಹೊಸದಾಗಿ ಪರಿಶೀಲಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಿಂತಿರುಗಿಸಿತ್ತು.

ಮ್ಯಾಜಿಸ್ಟ್ರೇಟ್ ನವೆಂಬರ್ 28, 2018 ರಂದು ಹೊಸದಾಗಿ ಆದೇಶ ನೀಡಿ ರಾಹುಲ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 500 ರ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಸಾಕಷ್ಟು ಪುರಾವೆಗಳಿವೆ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಜಾರ್ಖಂಡ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣವನ್ನು ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಅಂಬುಜ್ ನಾಥ್ ಅವರು, ಬಿಜೆಪಿ ನಾಯಕರು ಅಧಿಕಾರದ ಅಮಲಿನಲ್ಲಿರುವ ಸುಳ್ಳುಕೋರರು. ಬಿಜೆಪಿ ಕಾರ್ಯಕರ್ತರು ಕೊಲೆ ಆರೋಪಿಯನ್ನು ಸಹ ಅಧ್ಯಕ್ಷರನ್ನಾಗಿ ಸ್ವೀಕರಿಸುತ್ತಾರೆ ಎನ್ನುವ ಅರ್ಥ ರಾಹುಲ್‌ ಗಾಂಧಿಯವರ ಮಾತಿನಲ್ಲಿ ಧ್ವನಿಸುತ್ತದೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499ರ ಅಡಿಯಲ್ಲಿ ಗಾಂಧಿಯವರ ಈ ಹೇಳಿಕೆಗಳು ಮೇಲ್ನೋಟಕ್ಕೆ ಮಾನಹಾನಿಕರವಾಗಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್‌ನ ಈ ಆದೇಶವನ್ನು ರಾಹುಲ್‌ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?