ತಮಿಳುನಾಡು ವಿಧಾನಸಭಾ ಚುನಾವಣೆ: ಒಂದೇ ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆ: ಶೀಘ್ರದಲ್ಲೇ ದಿನಾಂಕ ನಿಗದಿ
ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುಳಿವು ನೀಡಿದ್ದಾರೆ. ಚೆನ್ನೈನಲ್ಲಿ ಚುನಾವಣಾ ಸಿದ್ಧತೆಗಳ ಪರಿಶೀಲನೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ಬಹುತೇಕ ರಾಜಕೀಯ ಪಕ್ಷಗಳು ಒಂದೇ ಹಂತದ ಮತದಾನಕ್ಕೆ ಮನವಿ ಮಾಡಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ -
ಚೆನ್ನೈ, ಫೆ. 27: ತಮಿಳುನಾಡಿನ (Tamil Nadu) ಮುಂಬರುವ ವಿಧಾನಸಭಾ ಚುನಾವಣೆಯನ್ನು (Assembly Election) ಒಂದೇ ಹಂತದಲ್ಲಿ ನಡೆಸುವ ಕುರಿತು ಕೇಂದ್ರ ಚುನಾವಣಾ ಆಯೋಗವು ಗಂಭೀರ ಚಿಂತನೆ ನಡೆಸಿದೆ. ಶುಕ್ರವಾರ ಚೆನ್ನೈನಲ್ಲಿ (Chennai) ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (Chief Election Commissioner) ಜ್ಞಾನೇಶ್ ಕುಮಾರ್ (Gyanesh Kumar) ಈ ಸುಳಿವು ನೀಡಿದ್ದಾರೆ.
ರಾಜ್ಯದ ಬಹುತೇಕ ರಾಜಕೀಯ ಪಕ್ಷಗಳು (political Parties) ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮನವಿ ಮಾಡಿವೆ. ಈ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಆಯೋಗವು, ರಾಜ್ಯದ ಭದ್ರತೆ ಮತ್ತು ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದೆ.
ಜ್ಞಾನೇಶ್ ಕುಮಾರ್ ಅವರ ಸುದ್ದಿಗೋಷ್ಠಿ:
#WATCH | Chennai, Tamil Nadu | On the upcoming Tamil Nadu Assembly elections, Chief Election Commissioner (CEC) Gyanesh Kumar says, "... Recently, the Commission had held an international conference with 72 countries participating from the world over, Chief Election… pic.twitter.com/Hmdu0yBRlT
— ANI (@ANI) February 27, 2026
ಯುವ ಮತದಾರರಿಗೆ ಕರೆ
ಇದೇ ವೇಳೆ ಮೊದಲ ಬಾರಿಗೆ ಮತದಾನದ ಹಕ್ಕು ಪಡೆದ ಯುವಕರನ್ನು ಸನ್ಮಾನಿಸಿದ ಜ್ಞಾನೇಶ್ ಕುಮಾರ್, 18ರಿಂದ 30 ವರ್ಷದೊಳಗಿನ ಯುವಕರು 'ಪ್ರಜಾಪ್ರಭುತ್ವದ ಹಬ್ಬ'ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಬಿಹಾರ ಚುನಾವಣೆಯಲ್ಲಿ ಕಂಡುಬಂದಂತೆ ತಮಿಳುನಾಡಿನಲ್ಲೂ ದಾಖಲೆ ಪ್ರಮಾಣದ ಮತದಾನವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಅಭ್ಯರ್ಥಿಗಳು ಇಸಿಐ (ECI) ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ನಾಮಪತ್ರ ಸಲ್ಲಿಸಬಹುದು. ಆದರೆ ಕಾನೂನಿನ ಪ್ರಕಾರ ರಿಟರ್ನಿಂಗ್ ಅಧಿಕಾರಿಗೆ ಭೌತಿಕವಾಗಿ ಫಾರ್ಮ್ ಸಲ್ಲಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.
ಅಪಾಯದ ಎಚ್ಚರಿಕೆ ನೀಡಿದರೂ ಬುದ್ಧಿ ಕಲಿಯುತ್ತಿಲ್ಲ; ರೈಲಿನಲ್ಲಿ ಎಲೆಕ್ಟ್ರಿಕ್ ಕೆಟಲ್ ಬಳಸಿ ಚಹಾ ತಯಾರಿಸಿದ ಮಹಿಳೆ
ಗುರುತಿನ ಚೀಟಿ ಬಗ್ಗೆ ಸ್ಪಷ್ಟನೆ
ಆಧಾರ್ ಕಾರ್ಡ್ ಕುರಿತು ಮಾತನಾಡಿದ ಅವರು, "ಆಧಾರ್ ಕಾಯ್ದೆ ಸೆಕ್ಷನ್ 9ರ ಪ್ರಕಾರ, ಇದು ಕೇವಲ ಗುರುತಿನ ಪುರಾವೆಯಾಗಿದೆಯೇ ಹೊರತು ಪೌರತ್ವ ಅಥವಾ ವಾಸಸ್ಥಳದ ಪುರಾವೆಯಲ್ಲ. ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ 18 ವರ್ಷ ಮೇಲ್ಪಟ್ಟ ಭಾರತೀಯ ನಾಗರಿಕರು ಮಾತ್ರ ಮತದಾನಕ್ಕೆ ಅರ್ಹರು" ಎಂದು ವಿವರಿಸಿದರು. ಚುನಾವಣೆಯಲ್ಲಿ ಹಣದ ದುರುಪಯೋಗ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಮಿತಿಗಿಂತ ಹೆಚ್ಚಿನ ನಗದು ಸಾಗಿಸದಂತೆ ಎಚ್ಚರಿಕೆ ನೀಡಿದ್ದಾರೆ. ಕಳೆದ ದಶಕದಲ್ಲಿ ಬಿಹಾರ ಚುನಾವಣೆ ಅತ್ಯಂತ ದೋಷರಹಿತವಾಗಿ ನಡೆದಿತ್ತು, ತಮಿಳುನಾಡು ಅದಕ್ಕಿಂತಲೂ ಉತ್ತಮವಾಗಿ ದಾಖಲೆ ನಿರ್ಮಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.