ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Telangana Government: SC ಒಳ ಮೀಸಲಾತಿ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ತೆಲಂಗಾಣ; ಸರ್ಕಾರ

ಪರಿಶಿಷ್ಟ ಜಾತಿ(ಎಸ್‌ಸಿ) ಉಪ-ವರ್ಗೀಕರಣ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಿ ತೆಲಂಗಾಣ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಮೂಲಕ SC ಒಳ ಮೀಸಲಾತಿಯನ್ನು ಅಧಿಕೃತವಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ ಎಂದು ತೆಲಂಗಾಣ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಹೈದರಾಬಾದ್‌: ಪರಿಶಿಷ್ಟ ಜಾತಿ(ಎಸ್‌ಸಿ) ಉಪ-ವರ್ಗೀಕರಣ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಿ ತೆಲಂಗಾಣ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಈ ಮೂಲಕ SC ಒಳ ಮೀಸಲಾತಿಯನ್ನು (Telangana Government) ಅಧಿಕೃತವಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ ಎಂದು ತೆಲಂಗಾಣ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ. ತೆಲಂಗಾಣ ಸರ್ಕಾರವು ಈ ಹಿಂದೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಶಮೀಮ್ ಅಕ್ತರ್ ನೇತೃತ್ವದಲ್ಲಿ ಎಸ್‌ಸಿ ವರ್ಗೀಕರಣದ ಕುರಿತು ಆಯೋಗವನ್ನು ನೇಮಿಸಿತ್ತು, ಇದು 59 ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಗಳನ್ನು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಒಟ್ಟು ಶೇ 15 ರಷ್ಟು ಮೀಸಲಾತಿಗಾಗಿ I, II ಮತ್ತು III ಎಂಬ ಮೂರು ಗುಂಪುಗಳಾಗಿ ವಿಂಗಡಿಸಲು ಶಿಫಾರಸುಗಳನ್ನು ಮಾಡಿತು.

ಈ ಸಂಬಂಧ ತೆಲಂಗಾಣ ಸರ್ಕಾರ, ತೆಲಂಗಾಣ ಪರಿಶಿಷ್ಟ ಜಾತಿಗಳ ಮೀಸಲಾತಿ ಮಸೂದೆಯ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಿದ್ದು, ಇದಕ್ಕೆ ಏಪ್ರಿಲ್ 8, 2025 ರಂದು ತೆಲಂಗಾಣ ರಾಜ್ಯಪಾಲರು ಅಂಕಿತ ಸಹ ಹಾಕಿದ್ದಾರೆ. ಇಂದು ಈ ಸಂಬಂಧ ಗೆಜೆಟ್‌ ಅಧಿಸೂಚನೆ ಪ್ರಕಟಿಸಲಾಗಿದೆ" ಎಂದು ಉತ್ತಮ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಆಯೋಗದ ವರದಿಯ ಪ್ರಕಾರ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ SC ಸಮುದಾಯಗಳನ್ನು ಒಳಗೊಂಡಿರುವ ಗುಂಪು-I ಒಂದಕ್ಕೆ ಶೇಕಡಾ ಒಂದು ಮೀಸಲಾತಿ ನೀಡಲಾಗುತ್ತದೆ.

ಮಧ್ಯಮ ಪ್ರಯೋಜನ ಪಡೆದ 18 ಉಪಜಾತಿಗಳ ಗುಂಪು -IIಗೆ ಶೇಕಡಾ 9 ರಷ್ಟು ಮೀಸಲಾತಿ ನೀಡಲಾಗುತ್ತದೆ ಮತ್ತು ಗಮನಾರ್ಹವಾಗಿ ಪ್ರಯೋಜನ ಪಡೆದ 26 ಉಪಜಾತಿಗಳನ್ನು ಒಳಗೊಂಡಿರುವ ಗುಂಪು III ಶೇ. 5 ರಷ್ಟು ಮೀಸಲಾತಿ ಪಡೆಯುತ್ತದೆ. ಭಾರತೀಯ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಎಸ್‌ಸಿ ಉಪ-ಜಾತಿಗಳ ವರ್ಗೀಕರಣದ ದೀರ್ಘ ಕಾಲದ ಬೇಡಿಕೆಯನ್ನು ಪರಿಹರಿಸುವ ಮೂಲಕ ರಾಜ್ಯ ಸರ್ಕಾರವು ಒಂದು ದೊಡ್ಡ "ಸಾಮಾಜಿಕ ನ್ಯಾಯ ಕಾಯ್ದೆ"ಯನ್ನು ಜಾರಿಗೆ ತರುವ ಮೂಲಕ ಅತ್ಯುತ್ತಮ ಗೌರವವನ್ನು ಸಲ್ಲಿಸಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Murder Case: ಪಾಕಿಸ್ತಾನಿ ಪ್ರಜೆಯಿಂದ ದಾಳಿ: ದುಬೈನಲ್ಲಿ ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳ ಹತ್ಯೆ

ಫೆಬ್ರವರಿಯಲ್ಲಿ ತೆಲಂಗಾಣ ಶಾಸಕಾಂಗವು ಎಸ್‌ಸಿ ವರ್ಗೀಕರಣದ ಕುರಿತು ನ್ಯಾಯಮೂರ್ತಿ ಅಕ್ತರ್ ಅವರ ಶಿಫಾರಸುಗಳನ್ನು ಅಂಗೀಕರಿಸಿತು, ಕೆನೆ ಪದರವನ್ನು ಮೀಸಲಾತಿಯಿಂದ ವಿನಾಯಿತಿ ನೀಡಬೇಕು ಎಂಬ ಸಲಹೆಯನ್ನು ತಿರಸ್ಕರಿಸಿತು. ಪರಿಶಿಷ್ಟ ಜಾತಿ (ಮೀಸಲಾತಿ ತರ್ಕಬದ್ಧಗೊಳಿಸುವಿಕೆ) ಮಸೂದೆ, 2025 ಅನ್ನು ಕಳೆದ ತಿಂಗಳು ಅಂಗೀಕರಿಸಲಾಯಿತು. ಸುಪ್ರೀಂ ಕೋರ್ಟ್ ಕಳೆದ ವರ್ಷ ವರ್ಗೀಕರಣದ ಪರವಾಗಿ ತೀರ್ಪು ನೀಡಿತು

Vishakha Bhat Heggar

View all posts by this author