'ದೇವಾಲಯದಲ್ಲಿ ದೀಪ ಹಚ್ಚಲೇಬೇಕು': ಮಧುರೈ ಬೆಟ್ಟದ ದೀಪ ವಿವಾದ ಆದೇಶ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್
Karthigai Deepam: ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ಪರಿಗಣಿಸಬೇಕಿತ್ತು ಎಂದು ನ್ಯಾಯಾಲಯ ಗಮನಿಸಿದೆ. ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ, ಅದರ ಮೇಲೆ ನಡೆಸುವ ಯಾವುದೇ ಚಟುವಟಿಕೆಯು ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅದು ಹೇಳಿದೆ.
Thiruparankundram temple -
ಚೆನ್ನೈ, ಜ.6: ತಮಿಳುನಾಡಿನ ತಿರುಪರಕುಂದ್ರಂ ಬೆಟ್ಟಗಳ ಮೇಲಿರುವ ಕಲ್ಲಿನ ಕಂಬದಲ್ಲಿ (ದೀಪಥೂನ್) ಕಾರ್ತಿಗೈ ದೀಪವನ್ನು ಬೆಳಗಿಸುವಂತೆ ನಿರ್ದೇಶಿಸಿದ ಆದೇಶವನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಮಂಗಳವಾರ ಎತ್ತಿಹಿಡಿದಿದೆ. ಈ ಆಚರಣೆಯು ಸಾರ್ವಜನಿಕ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಿಸಬಹುದು ಎಂಬ ರಾಜ್ಯದ ಆತಂಕಗಳನ್ನು ಬಲವಾಗಿ ತಿರಸ್ಕರಿಸಿದೆ. ಇದರಿಂದಾಗಿ ದೀರ್ಘಕಾಲದ ಮತ್ತು ವಿವಾದಾತ್ಮಕ ಸಮಸ್ಯೆ ಅಂತ್ಯ ಕಂಡಿದೆ.
ತಿರುಪರಣ್ಕುಂದ್ರಂ ಮುರುಗನ್ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ, ಮಧುರೈ ಜಿಲ್ಲಾಧಿಕಾರಿ ಮತ್ತು ಮಧುರೈ ನಗರ ಪೊಲೀಸ್ ಆಯುಕ್ತರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿ ನ್ಯಾಯಮೂರ್ತಿಗಳಾದ ಜಿ ಜಯಚಂದ್ರನ್ ಮತ್ತು ಕೆ ಕೆ ರಾಮಕೃಷ್ಣನ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. 'ದೀಪ' ಬೆಳಗುವ ವಿಷಯವನ್ನು "ಅನಗತ್ಯವಾಗಿ ರಾಜಕೀಯಗೊಳಿಸಲಾಗಿದೆ" ಎಂದು ವಿಭಾಗೀಯ ಪೀಠ ತಿಳಿಸಿದೆ.
ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ಪರಿಗಣಿಸಬೇಕಿತ್ತು ಎಂದು ನ್ಯಾಯಾಲಯ ಗಮನಿಸಿದೆ. ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ, ಅದರ ಮೇಲೆ ನಡೆಸುವ ಯಾವುದೇ ಚಟುವಟಿಕೆಯು ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅದು ಹೇಳಿದೆ.
ಇದನ್ನೂ ಓದಿ ದೆಹಲಿ ಗಲಭೆ ಮಾಸ್ಟರ್ ಮೈಂಡ್ ಉಮರ್ ಖಾಲಿದ್ ಜಾಮೀನು ತಿರಸ್ಕಾರ; ಸುಪ್ರೀಂ ಮಹತ್ವದ ಆದೇಶ
ದೀಪವನ್ನು ಬೆಳಗಿಸಬಹುದು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಸಮಾರಂಭಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗುವುದು ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಯೊಂದಿಗೆ ಸಮಾಲೋಚನೆಗೆ ಒಳಪಟ್ಟಿರುತ್ತದೆ ಎಂದು ಹೇಳಿತು.
ಬಿಜೆಪಿ ಪ್ರತಿಕ್ರಿಯೆ
ಮಧುರೈ ಹೈಕೋರ್ಟ್ನ ತೀರ್ಪನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶ್ಲಾಘಿಸಿದ್ದು, ತಮಿಳುನಾಡಿನಲ್ಲಿ "ಹಿಂದೂ ನಂಬಿಕೆ"ಗೆ "ದೊಡ್ಡ ಗೆಲುವು" ಎಂದು ಬಣ್ಣಿಸಿದೆ. ಆಡಳಿತಾರೂಢ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ, ಇದು "ಡಿಎಂಕೆಗೆ ದೊಡ್ಡ ಮುಜುಗರ" ಎಂದು ಹೇಳಿದ್ದಾರೆ.
"ದೋಷಾರೋಪಣೆ ಗೊತ್ತುವಳಿ,ಸಂವಿಧಾನ ವಿರೋಧಿ, ಹಿಂದೂ ವಿರೋಧಿ ಗ್ಯಾಂಗ್ ಸೋತಿತು. ಇದನ್ನು ಬೆಂಬಲಿಸಿದ್ದಕ್ಕಾಗಿ ಉದ್ಧವ್ ಸೇನಾ ಕ್ಷಮೆಯಾಚಿಸುತ್ತದೆಯೇ?" ಎಂದು ಶೆಹಜಾದ್ ಪೂನವಾಲ್ಲಾ X ನಲ್ಲಿ ಪ್ರಶ್ನೆ ಮಾಡಿದ್ದಾರೆ.