ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೇವರ ನಾಡನ್ನು ನಡುಗಿಸಿದ ಮತ್ತೊಂದು ಭೂಕುಸಿತ; ಟ್ಯಾಂಕರನ್ನು 10 ಅಡಿ ತಳ್ಳಿದ ಭೀಕರ ಪ್ರವಾಹ: ಎದೆ ಝಲ್ಲೆನ್ನಿಸುವ ವಿಡಿಯೊ ಇಲ್ಲಿದೆ

Wayanad Landslide: ಕೇರಳಂನ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಎದೆ ಝಲ್ಲೆನ್ನಿಸುವ ಭೂಕುಸಿತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಹಿಳೆಯರು ಸೇರಿ ಹಲವರು ತಮ್ಮ ಜೀವ ಉಳಿಸಿಕೊಳ್ಳಲು ಓಡುತ್ತಿರುವುದನ್ನು ವಿಡಿಯೊದಲ್ಲಿ ಕಂಡು ಬಂದಿದೆ.

ವಯನಾಡಿನ ಭೂಕುಸಿತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಭಯಾನಕ ದೃಶ್ಯ -

Priyanka P
Priyanka P Jul 7, 2026 6:54 PM

ತಿರುವನಂತಪುರಂ, ಜು. 7: ಕೇರಳಂನ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ (ಜುಲೈ 7) ಸಂಭವಿಸಿದ ಭಾರಿ ಭೂಕುಸಿತದಲ್ಲಿ (Landslide in Wayanad) ಕನಿಷ್ಠ ಐವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕಿತರನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಯಾನಕ ಘಟನೆಯ ಸಿಸಿಟಿವಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ದೃಶ್ಯ ನೋಡುತ್ತಿದ್ದರೆ ಎದೆ ಝಲ್ಲೆನ್ನಿಸುತ್ತಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಭಾಗವಾಗಿ ಕಲ್ಲಡಿಯ ಮೀನಾಕ್ಷಿ ಸೇತುವೆಯ ಬಳಿ ಸಂಗ್ರಹವಾದ ದೊಡ್ಡ ಮಣ್ಣಿನ ದಿಬ್ಬವು ಮಳೆಯಿಂದಾಗಿ ಇದ್ದಕ್ಕಿದ್ದಂತೆ ಕೆಳಗೆ ಜಾರಿ, ಮರಗಳು ಉರುಳಿ ಬಿದ್ದವು. ನಿರ್ಮಾಣ ಸ್ಥಳದಲ್ಲಿರಿಸಲಾದ ಬ್ಯಾರಿಕೇಡ್‌ಗಳು ಕೊಚ್ಚಿ ಹೋಗುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಭೂಕುಸಿತದ ಜಾರಿ ಬಂದ ರಭಸಕ್ಕೆ ಟ್ಯಾಂಕರ್‌ ಸುಮಾರು 10 ಅಡಿಗಳನ್ನು ದೂರಕ್ಕೆ ಜಾರಿದೆ. 2 ಬಸ್‌ಗಳು ಕಂದಕಕ್ಕೆ ಉರಳಿ ಬಿದ್ದಿವೆ. ಅದೃಷ್ಟವಶಾತ್‌ ಬಸ್‌ನಲ್ಲಿ ಯಾರೂ ಇರಲಿಲ್ಲವಾದ್ದರಿಂದ ಭಾರಿ ದುರಂತವೊಂದು ತಪ್ಪಿದೆ.

ದುರಂತದ ಸುಳಿವು ಸಿಕ್ಕ ಕೂಡಲೇ ಮಹಿಳೆಯರು ಸೇರಿ ಹಲವರು ಜೀವ ಉಳಿಸಿಕೊಳ್ಳಲು ಓಡುತ್ತಿದ್ದಂತೆ ಮಣ್ಣು ಕುಸಿದು ರಸ್ತೆಗೆ ಬಿದ್ದಿದೆ. ಬಳಿಕ ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಅವಶೇಷಗಳಡಿ ಸಿಕ್ಕಿಹಾಕಿಕೊಂಡಿರುವವರ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆರಂಭಿಕ ವರದಿಯಲ್ಲಿ ಕನಿಷ್ಠ ಆರು ಮಂದಿಯನ್ನು ರಕ್ಷಿಸಲಾಗಿದೆ.

ಇಲ್ಲಿದೆ ವಿಡಿಯೊ:

ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ಮಣ್ಣು ಕುಸಿದು ರಸ್ತೆಗೆ ಅಪ್ಪಳಿಸುತ್ತಿದ್ದಂತೆ ಜನರು ಓಡುತ್ತಿರುವುದು ಸ್ಥಳದ ಬಳಿಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಜನರು ಪ್ರಾಣಭಯದಿಂದ ಓಡಿದ್ದಾರೆ. ತಕ್ಷಣವೇ ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಧಿಕಾರಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರದ ಪ್ರವಾಹದ ನಡುವೆಯೂ ಮರೆಯಾಗದ ಮಾನವೀಯತೆ; ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಪೊಲೀಸ್‌

ಭಾರಿ ಮಳೆ, ಪ್ರವಾಹದಿಂದ ನಾಪತ್ತೆಯಾದ ಕನಿಷ್ಠ ಏಳು ಮಂದಿಯನ್ನು ರಕ್ಷಿಸಲಾಗಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಇಬ್ಬರು ಸಾವು ಖಚಿತವಾಗಿದೆ. ರಸ್ತೆ ತೆರವು ಮಾಡಿದ ನಂತರ ರಕ್ಷಣಾ ಕಾರ್ಯ ಪೂರ್ಣಗೊಳ್ಳಲಿದೆ. ಹೊರ ರಾಜ್ಯಗಳ ಕಾರ್ಮಿಕರ ಚಿಕಿತ್ಸೆಗಾಗಿ ವಯನಾಡಿನ ಎಲ್ಲ ಆಸ್ಪತ್ರೆಗಳಿಗೆ ನಾವು ನಿರ್ದೇಶನ ನೀಡಿದ್ದೇವೆ. ಘಟನೆಯು ಯಾವುದೇ ಸ್ಥಳೀಯ ಜನರ ಮೇಲೆ ಪರಿಣಾಮ ಬೀರಿಲ್ಲ ಎಂದು ಪ್ರಾಥಮಿಕ ವರದಿ ಸೂಚಿಸುತ್ತದೆ” ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ಹೇಳಿದರು.