ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭಯೋತ್ಪಾದನೆ, ಕಾಶ್ಮೀರ, ಸಿಂಧೂ ನದಿ ನೀರು ಒಪ್ಪಂದ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ

India Slams Pakistan: ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ ಬಳಸುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿತು. ಪಾಕಿಸ್ತಾನವು ತನ್ನ ಸುಳ್ಳು ಹೇಳಿಕೆಗಳನ್ನು ಹರಡಲು ಉನ್ನತ ಮಟ್ಟದ ಚರ್ಚೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಅಮೆರಿಕದ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು ತರಾಟೆಗೆ ತೆಗೆದುಕೊಂಡರು.

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ

ನವದೆಹಲಿ, ಜು.23: ಪಾಕಿಸ್ತಾನವು (Pakistan) ಗಡಿಯಾಚೆಗಿನ ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ ಬಳಸುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕಾಶ್ಮೀರವು (Kashmir) ಸದಾಕಾಲವೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿರಲಿದೆ ಎಂದು ಪುನರುಚ್ಚರಿಸಿತು. “ನೈಸರ್ಗಿಕ ಸಂಪನ್ಮೂಲಗಳ ಆಡಳಿತ: ಶಾಂತಿ, ಭದ್ರತೆ ಮತ್ತು ಸಮೃದ್ಧಿಯ ಅಡಿಪಾಯ” ಎಂಬ ವಿಷಯದ ಕುರಿತು ನಡೆದ ವಿಶ್ವಸಂಸ್ಥೆಯ (UN) ಭದ್ರತಾ ಮಂಡಳಿಯ ಉನ್ನತ ಮಟ್ಟದ ಮುಕ್ತ ಚರ್ಚೆಯಲ್ಲಿ, ಅಮೆರಿಕದ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ಹೇಳಿಕೆ ನೀಡಿದರು.

ಪಾಕಿಸ್ತಾನವು ತನ್ನ ಸುಳ್ಳು ಹೇಳಿಕೆಗಳನ್ನು ಹರಡಲು ಉನ್ನತ ಮಟ್ಟದ ಚರ್ಚೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು. ಈ ವೇದಿಕೆಯಲ್ಲಿ ಇತರ ವಿಷಯಗಳನ್ನು ಪ್ರಸ್ತಾಪಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಆದರೆ, ಪಾಕಿಸ್ತಾನವು ಇಂದಿನ ಚರ್ಚೆಯನ್ನು ದುರುಪಯೋಗಪಡಿಸಿಕೊಂಡು ತನ್ನ ಸುಳ್ಳು ಹೇಳಿಕೆಯನ್ನು ಪ್ರಚಾರ ಮಾಡಲು ಮುಂದಾಗಿರುವುದರಿಂದ, ಅದಕ್ಕೆ ಪ್ರತಿಕ್ರಿಯಿಸುವುದು ಅನಿವಾರ್ಯವಾಗಿದೆ ಎಂದು ಭಾರತೀಯ ರಾಯಭಾರಿ ಹೇಳಿದರು.

ಆಪರೇಷನ್ ಸಿಂದೂರ್ ಭಾರತದ ದೊಡ್ಡ ಯಶಸ್ಸು ಎಂದ ಇಮ್ರಾನ್ ಖಾನ್ ಸಹೋದರಿಗೆ ಸಮನ್ಸ್ ಜಾರಿ

“ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿತ್ತು, ಈಗಲೂ ಇದೆ ಮತ್ತು ಮುಂದೆಯೂ ಹಾಗೆಯೇ ಉಳಿಯಲಿದೆ. ಇದು ಪಾಕಿಸ್ತಾನ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲು ಆಯ್ಕೆ ಮಾಡಿಕೊಂಡಿರುವ ಸಾಂವಿಧಾನಿಕ ಮತ್ತು ಕಾನೂನುಬದ್ಧ ವಾಸ್ತವವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಏಕೈಕ ವಿಷಯವೆಂದರೆ, ಪಾಕಿಸ್ತಾನವು ಭಾರತದ ಸಾರ್ವಭೌಮ ಭೂಪ್ರದೇಶದ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಅಕ್ರಮ ವಶಪಡಿಸಿಕೊಳ್ಳುವಿಕೆ” ಎಂದು ಅವರು ಹೇಳಿದರು.

ಸಿಂಧೂ ಜಲ ಒಪ್ಪಂದದ ಕುರಿತಾದ ನಮ್ಮ ನಿಲುವು ಸ್ಪಷ್ಟ ಮತ್ತು ಸ್ಥಿರವಾಗಿದೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಯಮಿತವಾಗಿ ರಾಜ್ಯ ನೀತಿಯ ಸಾಧನವಾಗಿ ಬಳಸುತ್ತಿರುವ ಸಂದರ್ಭದಲ್ಲಿ, ಪರಸ್ಪರ ನಂಬಿಕೆ ಮತ್ತು ಸೌಹಾರ್ದದ ಆಧಾರದ ಮೇಲೆ ಸಹಕಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ತಮ್ಮ ಸಮಾರೋಪದ ಮಾತುಗಳಲ್ಲಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ಇತರರನ್ನು ನಿರ್ಣಯಿಸುವ ಮೊದಲು ಪಾಕಿಸ್ತಾನವು ತನ್ನದೇ ಆದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಭಾರತದ ಕಡೆಗೆ ಬೆರಳು ತೋರಿಸುವ ಬದಲು, ಪಾಕಿಸ್ತಾನವು ತನ್ನ ಮನೆಯನ್ನು ಕ್ರಮಬದ್ಧಗೊಳಿಸುವ ಮೂಲಕ ತನಗೂ ಮತ್ತು ತನ್ನ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತದೆ ಎಂದು ಅವರು ಹೇಳಿದರು.