ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Operation Sindoor: ನಿಮ್ಮ ಶೌರ್ಯಕ್ಕೆ ನನ್ನ ಸಲಾಂ: ಆಪರೇಷನ್‌ ಸಿಂದೂರ್‌ ಯಶಸ್ಸಿಗೆ ಯೋಧರನ್ನು ಶ್ಲಾಘಿಸಿದ ಪ್ರಧಾನಿ

ಆಪರೇಷನ್‌ ಸಿಂದೂರದ ಬಳಿಕ ಪ್ರಧಾನಿ ಮೋದಿ ಅವರು ಪಂಜಾಬ್‌ನ ಆದಂಪುರ ವಾಯು ನೆಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಅವರು ಸೈನಿಕರ ಜೊತೆ ಮಾತುಕತೆ ನಡೆಸಿದರು. ಇದೀಗ ಯೋಧರನ್ನುದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ. ವಾಯು, ಭೂ, ನೌಕಾ ಹಾಗೂ ಗಡಿ ಭದ್ರತಾ ಪಡೆಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಆಪರೇಷನ್‌ ಸಿಂದೂರ್‌ ಯಶಸ್ಸಿಗೆ ಯೋಧರನ್ನು ಶ್ಲಾಘಿಸಿದ ಪ್ರಧಾನಿ

-

Vishakha Bhat Heggar
Vishakha Bhat Heggar May 13, 2025 4:11 PM

ಚಂಡೀಗಢ: ಆಪರೇಷನ್‌ ಸಿಂದೂರದ (Operation Sindoor) ಬಳಿಕ ಪ್ರಧಾನಿ ಮೋದಿ (Narendra Modi) ಅವರು ಪಂಜಾಬ್‌ನ ಆದಂಪುರ ವಾಯು ನೆಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಅವರು ಸೈನಿಕರ ಜೊತೆ ಮಾತುಕತೆ ನಡೆಸಿದರು. ಇದೀಗ ಯೋಧರನ್ನುದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ. ವಾಯು, ಭೂ, ನೌಕಾ ಹಾಗೂ ಗಡಿ ಭದ್ರತಾ ಪಡೆಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಆಪರೇಷನ್‌ ಸಿಂದೂರದ ಮೂಲಕ ಕೋಟ್ಯಾಂತರ ಭಾರತೀಯರ ಗೌರವವನ್ನು ನೀವು ಹೆಚ್ಚಿಸಿದ್ದೀರಿ ಎಂದು ಮೋದಿ ಹೇಳಿದರು. ಇಡೀ ದೇಶ ಸೈನಿಕರಿಗೆ ಕೃತ್ಞರಾಗಿದ್ದಾರೆ. ಆಪರೇಷನ್‌ ಸಿಂದೂರದ ಪ್ರತಿಧ್ವನಿ ಇಡೀ ಜಗತ್ತನಲ್ಲಿ ಮೊಳಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಭಾರತ್ ಮಾತಾ ಕಿ ಜೈ ಎಂಬುದು ಬರೀ ಘೋಷಣೆ ಅಲ್ಲ. ಅದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿರುವ ಪ್ರತಿಯೊಬ್ಬ ಸೈನಿಕನ ಶಪಥ ಎಂದು ಮೋದಿ ಹೇಳಿದರು. ನೀವೆಲ್ಲರೂ ನಿಮ್ಮ ಗುರಿಯನ್ನು ಪರಿಪೂರ್ಣತೆಯಿಂದ ತಲುಪಿದ್ದೀರಿ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ. ಪಾಕಿಸ್ತಾನದಲ್ಲಿ, ಭಯೋತ್ಪಾದಕ ಶಿಬಿರಗಳು ಮತ್ತು ಅವರ ವಾಯುನೆಲೆಗಳು ಮಾತ್ರ ನಾಶವಾಗಲಿಲ್ಲ, ಬದಲಿಗೆ ಅವರ ದುಷ್ಟತನ ಕೂಡ ನಾಶವಾಗಿದೆ. ಉಗ್ರ ಪೋಷಕರಿಗೆ ನಾವು ಸರಿಯಾದ ಪಾಠವನ್ನು ಕಲಿಸಿದ್ದೇವೆ. ಭೇಟಿ ಮಾಡುವ ಅವಕಾಶ ಸಿಕ್ಕಿದ್ದು ನನಗೆ ಸೌಭಾಗ್ಯ ಎಂದು ಭಾವಿಸುತ್ತೇನೆ. ಅದಕ್ಕಾಗಿಯೇ ನಾನು ಇಂದು ಬೆಳಿಗ್ಗೆ ನನ್ನ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.



ಭಾರತವು ಗೌತಮ ಬುದ್ಧ ಹಾಗೂ ಗುರು ಗೋವಿಂದ ಸಿಂಗ್ ಅವರ ನಾಡು. ನಮ್ಮ ಹೆಣ್ಣು ಮಕ್ಕಳ ಸಿಂದೂರ ಅಳಿಸಿದವರಿಗೆ ಆಪರೇಷನ್‌ ಸಿಂದೂರ್‌ ಮೂಲಕ ಉತ್ತರ ನೀಡಿದ್ದೇವೆ. ಆಪರೇಷನ್ ಸಿಂದೂರ್ ಭಾರತದ ನೀತಿ, ಅದರ ಉದ್ದೇಶಗಳು ಮತ್ತು ಅದರ ನಿರ್ಣಾಯಕ ಸಾಮರ್ಥ್ಯಗಳನ್ನು ಪ್ರತಿಬಿಂಬಿಸುತ್ತದೆ. "ಪ್ರಮುಖ ಭಯೋತ್ಪಾದಕ ಕೇಂದ್ರಗಳು ನಾಶವಾಗಿವೆ. ಒಂಬತ್ತಕ್ಕೂ ಹೆಚ್ಚು ಕೇಂದ್ರಗಳು ನಾಶವಾಗಿವೆ ಮತ್ತು 100 ಕ್ಕೂ ಹೆಚ್ಚು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಈಗ ಭಯೋತ್ಪಾದಕರು ಭಾರತವನ್ನು ನೋಡಲು ಧೈರ್ಯ ಮಾಡಿದರೆ ಅವರು ಸಂಪೂರ್ಣವಾಗಿ ನಾಶವಾಗುತ್ತಾರೆ ಎಂದು ಅರ್ಥಮಾಡಿಕೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: ಭಾರತ - ಪಾಕಿಸ್ತಾನ ಸಂಘರ್ಷ; ಪಾಕ್‌ನ 11 ಸೈನಿಕರು ಸಾವು; 78 ಜನರಿಗೆ ಗಾಯ, ಅಧಿಕೃತ ಮಾಹಿತಿ ಬಿಡುಗಡೆ

ಭಾರತದ ನೆಲದಲ್ಲಿ ಭಯೋತ್ಪಾದನೆ ನಡೆಸುವವರಿಗೆ ನಮ್ಮ ಸೇನೆ ಪ್ರತ್ಯುತ್ತರವನ್ನು ನೀಡಿದೆ. ನಮ್ಮ ಬಳಿ ಅತ್ಯಾಧುನಿಕ ಆಯುಧಗಳಿವೆ. ಭಾರತ ಯಾವುದೇ ಪರಮಾಣು ಬ್ಲ್ಯಾಕ್‌ಮೇಲ್ ಅನ್ನು ಸಹಿಸುವುದಿಲ್ಲ ಎಂದು ಮೋದಿ ಹೇಳಿದ್ದಾರೆ.