ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರು (SL Bhairappa) ಇಂದು (ಬುಧವಾರ) ನಿಧನರಾಗಿದ್ದಾರೆ. ಬೆಂಗಳೂರಿನ ರಾಷ್ಟ್ರೋಸ್ಥಾನ ಆಸ್ಪತ್ರೆಗೆ ದಾಖಲಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಸಾಹಿತ್ಯ ಕ್ಷೇತ್ರದ ಧೀಮಂತ ವ್ಯಕ್ತಿಯೊಬ್ಬ ಇಂದು ನಮ್ಮನ್ನು ಅಗಲಿದ್ದಾರೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದ್ದಾರೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂಬರುವ ವರ್ಷಗಳಲ್ಲಿ ಯುವ ಪೀಳಿಗೆಗೆ ಮಾದರಿಯಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.