ರಾಂಚಿ: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಭದ್ರತಾ (Naxal Encounter) ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಕ್ಸಲರ ಹಿರಿಯ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 209 ಕೋಬ್ರಾ ಘಟಕ ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಗೋರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂತಿತ್ರಿ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಎನ್ಕೌಂಟರ್ನಲ್ಲಿ ಸಾವನ್ನಪ್ಪಿದವರ ಪೈಕಿ ತಲಾ 1 ಕೋಟಿ ರೂ. ಬಹುಮಾನ ಹೊಂದಿದ್ದ ಕೇಂದ್ರ ಸಮಿತಿ ಸದಸ್ಯ ಸಹದೇವ್ ಸೊರೆನ್, 25 ಲಕ್ಷ ರೂ. ಬಹುಮಾನ ಹೊಂದಿದ್ದ ವಿಶೇಷ ಪ್ರದೇಶ ಸಮಿತಿ ಸದಸ್ಯ ರಘುನಾಥ್ ಹೆಂಬ್ರಾಮ್ ಮತ್ತು 10 ಲಕ್ಷ ರೂ. ಬಹುಮಾನ ಹೊಂದಿದ್ದ ವಲಯ ಸಮಿತಿ ಸದಸ್ಯ ವಿರ್ಸೆನ್ ಗಂಜು ಸೇರಿದ್ದಾರೆ.
ಎನ್ಕೌಂಟರ್ ಸ್ಥಳದಿಂದ ಮೂರು ಎಕೆ -47 ರೈಫಲ್ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದಿರುವ ಮಾವೋವಾದಿಗಳನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ. ಭಾನುವಾರ 209 ಕೋಬ್ರಾ ಬೆಟಾಲಿಯನ್ ಮತ್ತು ಹಜಾರಿಬಾಗ್ ಪೊಲೀಸರ ಸಿಬ್ಬಂದಿ ಗೋರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪತಿ ಪಿರಿ ಅರಣ್ಯದಲ್ಲಿ ಜಂಟಿ ಶೋಧ ನಡೆಸಿದಾಗ ಎನ್ಕೌಂಟರ್ ಪ್ರಾರಂಭವಾಯಿತು. ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೊಕಾರೊ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ 209 ಬೆಟಾಲಿಯನ್ನ ಜವಾನ್ಗೆ ಗುಂಡು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 7 ರಂದು ಚೈಬಾಸಾದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಅಮಿತ್ ಹನ್ಸ್ದಾ ಎಂದು ಗುರುತಿಸಲಾಗಿತ್ತು. ಆತನ ವಿರುದ್ಧ 95 ಕ್ಕೂ ಹೆಚ್ಚು ಪ್ರಕರಣಗಳು ಇದ್ದವು. ಮಾವೋವಾದಿ ನಾಯಕರು ಪ್ರಮುಖ ದಾಳಿಗಳನ್ನು ಯೋಜಿಸುತ್ತಿದ್ದಾರೆ ಮತ್ತು ಹೊಸ ಕಾರ್ಯಕರ್ತರನ್ನು ಸಕ್ರಿಯವಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಚೈಬಾಸಾ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Anti Naxal Operation: ತಲೆಗೆ 45ಲಕ್ಷ ರೂ. ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಎನ್ಕೌಂಟರ್
ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹಿರಿಯ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ್ ಮತ್ತು ಇತರ 9 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್ಕೌಂಟರ್ ಬಗ್ಗೆ ವಿವರ ನೀಡಿದ ರಾಯ್ಪುರ ರೇಂಜ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮರೇಶ್ ಮಿಶ್ರಾ, ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಮೈನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.