ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ರೈಲು ಹತ್ತಲು ಮುಗಿಬಿದ್ದ ಪ್ರಯಾಣಿಕರು; ಕಾಲ್ತುಳಿತ ಸ್ಥಿತಿ ನಿರ್ಮಾಣ; ಅಷ್ಟಕ್ಕೂ ಆಗಿದ್ದೇನು?

ಪಾಟ್ನಾ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪಾಟ್ನಾ-ದೆಹಲಿ ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್‌ ರೈಲನ್ನು ಹತ್ತಲು ಪ್ರಯಾಣಿಕರು ಮುಗಿಬಿದ್ದ ಘಟನೆಯೊಂದು ನಡೆದಿದೆ. ಇದರಿಂದ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ರೈಲು ಹತ್ತಲು ಸಾಧ್ಯವಾಗಲಿಲ್ಲ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಿಂದಾಗಿ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗಿದೆ.

ರೈಲ್ವೇ ಸ್ಟೇಷನ್‌ನಲ್ಲಿ ಭಾರೀ ನೂಕುನುಗ್ಗಲು; ಅಷ್ಟಕ್ಕೂ ಆಗಿದ್ದೇನು?

Viral video

Profile pavithra Jan 28, 2025 4:50 PM

ಪಾಟ್ನಾ: ಪಾಟ್ನಾ-ದೆಹಲಿ ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್‌ ರೈಲನ್ನು ಹತ್ತಲು ಜನರು ಮುಗಿಬಿದ್ದ ಕಾರಣ ಪಾಟ್ನಾ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕೆಲಹೊತ್ತು ಆತಂಕ ಸೃಷ್ಟಿಯಾಗಿತ್ತು. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಭಾರೀ ಜನಸಂದಣಿಯಿಂದಾಗಿ, ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ಕೂಡ ರೈಲು ಹತ್ತಲು ಸಾಧ್ಯವಾಗಲಿಲ್ಲ. ಉತ್ತರ ಪ್ರದೇಶದ ಪ್ರಯಾಗ್ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಿಂದಾಗಿ, ಆ ದಿಕ್ಕಿನಲ್ಲಿ ಹೋಗುವ ರೈಲುಗಳು ಭರ್ತಿಯಾಗುತ್ತಿವೆ ಎನ್ನಲಾಗಿದೆ.

ವರದಿ ಪ್ರಕಾರ, ಕೆಲವು ಬೋಗಿಗಳ ಬಾಗಿಲುಗಳನ್ನು ಒಳಗಿನಿಂದ ಮುಚ್ಚಲಾಗಿತ್ತು. ಜನರು ತಮ್ಮ ಕೈಗಳಿಂದ ತಳ್ಳಿ ಅವುಗಳನ್ನು ತೆರೆಯಲು ಪ್ರಯತ್ನಿಸಿದ್ದಾರೆ, ಆದರೆ ಸಾಧ್ಯವಾಗಲಿಲ್ಲ. ಈ ನಡುವೆ ಪರಿಸ್ಥಿತಿಯನ್ನು ನಿಯಂತ್ರಿಸಲು ಯಾವುದೇ ಪೊಲೀಸ್ ಸಿಬ್ಬಂದಿ ಬಂದಿಲ್ಲ ಎಂದು ವರದಿಯಾಗಿದೆ. ಈ ಘಟನೆಯ ದೃಶ್ಯವನ್ನು ಪ್ರಯಾಣಿಕರೊಬ್ಬರು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.



ಟಿಕೆಟ್ ಕಾಯ್ದಿರಿಸಿದರೂ ರೈಲನ್ನು ಹತ್ತಲಾಗದ ಪ್ರಯಾಣಿಕರು ಈ ಘಟನೆಯ ಬಗ್ಗೆ ನಿಲ್ದಾಣದ ನಿರ್ದೇಶಕರ ಕಚೇರಿಗೆ ದೂರು ನೀಡಲು ಹೋಗಿದ್ದಾರೆ. ಆದರೆ ಕಚೇರಿಯ ಗೇಟ್‍ಗಳನ್ನು ಲಾಕ್ ಮಾಡಲಾಗಿದೆ ಎಂದು ಮಾಧ್ಯಮ ಸಂಸ್ಥೆ ವರದಿ ಮಾಡಿದೆ. ಮಹಾ ಕುಂಭಮೇಳದಿಂದಾಗಿ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ಪೂರ್ವ ಕರಾವಳಿ ರೈಲ್ವೆಯ ಪ್ರಕಾರ, ಕೆಲವು ಬೋಗಿಗಳ ಬಾಗಿಲುಗಳು ಲಾಕ್ ಆದ ಕಾರಣ 45 ಪ್ರಯಾಣಿಕರು ರೈಲನ್ನು ತಪ್ಪಿಸಿಕೊಂಡಿದ್ದಾರೆ. ನಂತರ, ಸಿಕ್ಕ ಪ್ರಯಾಣಿಕರನ್ನು ಎರಡು ವಿಶೇಷ ರೈಲುಗಳ ಮೂಲಕ ಪ್ರಯಾಗ್‌ರಾಜ್‌ಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಒಂದು ರೈಲು ರಾತ್ರಿ 10 ಗಂಟೆಗೆ ಪಾಟ್ನಾದಿಂದ ಹೊರಟರೆ, ಎರಡನೇ ರೈಲು ರಾತ್ರಿ 10.30 ಕ್ಕೆ ಹೊರಟಿತು. ಹೇಳಿಕೆಯ ಪ್ರಕಾರ, ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿ ದೆಹಲಿಗೆ ಪ್ರಯಾಣಿಸುವ ಪ್ರಯಾಣಿಕರು ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ:Mahakumbh 2025: ಮಹಾಕುಂಭ ಮೇಳದ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ; ವಿಡಿಯೊ ವೈರಲ್‌

ಮಹಾ ಕುಂಭ ಮೇಳ 2025 ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 25 ರವರೆಗೆ ಮುಂದುವರಿಯುತ್ತದೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಭಾರತದಾದ್ಯಂತ ಲಕ್ಷಾಂತರ ಭಕ್ತರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸುತ್ತಿದ್ದಾರೆ. ಈಗಾಗಲೇ ಅನೇಕ ಜನರು ಕುಂಭಮೇಳಕ್ಕೆ ಭೇಟಿ ನೀಡಿ ಅಲ್ಲಿನ ದೃಶ್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.