ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪರೀಕ್ಷಾ ಸುಧಾರಣೆ ತಜ್ಞರ ಸಮಿತಿಗೆ ಆಯ್ಕೆಯಾದ ವಿ. ಕಾಮಕೋಟಿ ಯಾರು? ಪ್ರಿಯಾಂಕಾ ಗಾಂಧಿ ಇವರನ್ನು ಗೋಮೂತ್ರ ತಜ್ಞ ಎಂದು ಕರೆದಿರುವುದು ಏಕೆ?

ಕಂಪ್ಯೂಟರ್ ವಾಸ್ತುಶಿಲ್ಪ ಸಂಶೋಧನೆ ಮತ್ತು ರಾಷ್ಟ್ರೀಯ ಭದ್ರತೆಯಲ್ಲಿನ ಕೆಲಸಕ್ಕಾಗಿ ಅವರಿಗೆ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರನ್ನು ಪರೀಕ್ಷಾ ಸುಧಾರಣೆ ಕಾರ್ಯಪಡೆ ಸಮಿತಿಗೆ ಆಯ್ಕೆ ಮಾಡಲಾಗಿದೆ. ಇವರನ್ನು ವಿಪಕ್ಷ ನಾಯಕಿ ಪ್ರಿಯಾಂಕಾ ಗಾಂಧಿ ಅವರು 'ಗೋಮೂತ್ರ ತಜ್ಞ' ಎಂದು ಕರೆದಿದ್ದರು.

ಪರೀಕ್ಷಾ ಸುಧಾರಣೆ ತಜ್ಞರ ಸಮಿತಿಗೆ ಆಯ್ಕೆಯಾದ ವಿ. ಕಾಮಕೋಟಿ

ಸಂಗ್ರಹ ಚಿತ್ರ -

ನವದೆಹಲಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಕಾಕ್ರೋಚ್ ಜನತಾ ಪಕ್ಷದ (Cockroach Janata Party) ಹೋರಾಟದ ಭಾಗವಾಗಿ ಕೇಂದ್ರ ಸರ್ಕಾರ ರಚಿಸಿರುವ ಪರೀಕ್ಷಾ ಸುಧಾರಣಾ ಸಮಿತಿಗೆ ಐಐಟಿ ಮದ್ರಾಸ್ ನಿರ್ದೇಶಕ (IIT-Madras director) ವಿ. ಕಾಮಕೋಟಿ (V Kamakoti) ಅವರನ್ನು ಆಯ್ಕೆ ಮಾಡಿರುವುದು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಂಪ್ಯೂಟರ್ ವಾಸ್ತುಶಿಲ್ಪ ಸಂಶೋಧನೆ ಮತ್ತು ರಾಷ್ಟ್ರೀಯ ಭದ್ರತೆಯಲ್ಲಿನ ಕೆಲಸಕ್ಕಾಗಿ ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ವಿ. ಕಾಮಕೋಟಿ ಅವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (congress leader priyanka gandhi) "ಗೋಮೂತ್ರ ತಜ್ಞ" ಎಂದು ಕರೆದಿದ್ದಾರೆ. ಅಲ್ಲದೇ ಅವರನ್ನು ಪರೀಕ್ಷಾ ಸುಧಾರಣಾ ಸಮಿತಿಗೆ ಸೇರ್ಪಡೆಗೊಳಿಸಿರುವುದನ್ನು ಪ್ರಶ್ನಿಸಿದ್ದಾರೆ.

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಸುಮಾರು ಎರಡು ತಿಂಗಳ ಕಾಲ ನಡೆದ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಪರೀಕ್ಷಾ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಉನ್ನತ ಶಕ್ತಿಯ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದರು.

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಕ್ಸ್ ಅಕೌಂಟ್‌ಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ಇದರ ಬಳಿಕ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆ ಸಮಿತಿಯ ಉನ್ನತ ನಾಯಕ ಸ್ಥಾನಕ್ಕೆ ಐಐಟಿ ಮದ್ರಾಸ್ ನಿರ್ದೇಶಕ ವಿ ಕಾಮಕೋಟಿ ಅವರನ್ನು ನೇಮಕಗೊಳಿಸಿರುವುದು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ನಂದನ್ ನಿಲೇಕಣಿ ನೇತೃತ್ವದ ಸಮಿತಿಯಲ್ಲಿ ಇಸ್ರೋದ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಐಬಿ ಮಾಜಿ ನಿರ್ದೇಶಕ ತಪನ್ ದೇಕಾ, ಐಐಟಿ-ಮದ್ರಾಸ್ ನಿರ್ದೇಶಕ ವಿ ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಲಾಜಿಸ್ಟಿಕ್ಸ್ ತಜ್ಞ ಅಮೃತ್ ಲಾಲ್ ಮೀನಾ ಕೂಡ ಇದ್ದಾರೆ.

ವಿ. ಕಾಮಕೋಟಿ ಯಾರು?

ಐಐಟಿ ಮದ್ರಾಸ್‌ನಿಂದ ಮಾಸ್ಟರ್ ಆಫ್ ಸೈನ್ಸ್ (ಎಂಎಸ್) ಮತ್ತು ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ವೀಝಿನಾಥನ್ ಕಾಮಕೋಟಿ ಅವರು 2001ರಲ್ಲಿ ಅದೇ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇರ್ಪಡೆಗೊಂಡರು. 2022ರ ಜನವರಿಯಲ್ಲಿ ಐಐಟಿ ಮದ್ರಾಸ್‌ನ ನಿರ್ದೇಶಕರಾಗಿ ಆಯ್ಕೆಯಾದರು.

ಕಂಪ್ಯೂಟರ್ ಆರ್ಕಿಟೆಕ್ಚರ್, ಮಾಹಿತಿ ಭದ್ರತೆ ಮತ್ತು ವಿಎಲ್‌ಎಸ್‌ಐ ವಿನ್ಯಾಸದಲ್ಲಿ ಪರಿಣತಿ ಹೊಂದಿರುವ ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ ಮೈಕ್ರೋಪ್ರೊಸೆಸರ್ ಅಭಿವೃದ್ಧಿ ಕಾರ್ಯಕ್ರಮ ಮತ್ತು ಸಂಸ್ಥೆಯಲ್ಲಿ ಮಾಹಿತಿ ಭದ್ರತಾ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮದ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಇವರ ನೇತೃತ್ವದ ಸಂಶೋಧನಾ ತಂಡವು ಭಾರತದ ಮೊದಲ ಸ್ಥಳೀಯ ಮೈಕ್ರೋಪ್ರೊಸೆಸರ್ ಅನ್ನು ಅಭಿವೃದ್ಧಿಪಡಿಸಿದೆ.

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಸದಸ್ಯರಾಗಿರುವ ಕಾಮಕೋಟಿ ಅವರು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ರಚಿಸಿದ ಕೃತಕ ಬುದ್ಧಿಮತ್ತೆ ಕಾರ್ಯಪಡೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದರೊಂದಿಗೆ ಐಐಟಿ ಮದ್ರಾಸ್‌ನಲ್ಲಿ ಅವರು ಜೆಇಇ ಅಧ್ಯಕ್ಷರು ಮತ್ತು ಅಸೋಸಿಯೇಟ್ ಡೀನ್, ಕೈಗಾರಿಕಾ ಸಲಹಾ ಮತ್ತು ಪ್ರಾಯೋಜಿತ ಸಂಶೋಧನೆಯ ಹುದ್ದೆಗಳನ್ನು ಕೂಡ ನಿರ್ವಹಿಸಿದ್ದರು.

ಎಸಿಸಿಎಸ್ ಜೀವಮಾನ ಸಾಧನೆ, ಐಬಿಎಂ ಫ್ಯಾಕಲ್ಟಿ, ವಾಸ್ವಿಕ್ ಕೈಗಾರಿಕಾ ಸಂಶೋಧನಾ ಪ್ರಶಸ್ತಿ, ಡಿಆರ್‌ಡಿಒ ಅಕಾಡೆಮಿಕ್ ಎಕ್ಸಲೆನ್ಸ್, ಇಂಡಿಯನ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ ​​ಟೆಕ್ನೋ ವಿಷನರಿ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಪಾತ್ರವಾಗಿರುವ ವಿ. ಕಾಮಕೋಟಿ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅಬ್ದುಲ್ ಕಲಾಂ ತಂತ್ರಜ್ಞಾನ ನಾವೀನ್ಯತೆ ರಾಷ್ಟ್ರೀಯ ಫೆಲೋಶಿಪ್ ಅನ್ನು ಪಡೆದಿರುವ ಕಾಮಕೋಟಿ ಅವರನ್ನು ಪ್ರಿಯಾಂಕಾ ಗಾಂಧಿ 'ಗೋಮೂತ್ರ ತಜ್ಞ' ಎಂದು ಕರೆದಿದ್ದಾರೆ. ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಚರ್ಚೆಯ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಪರೀಕ್ಷಾ ಸುಧಾರಣೆ ಕಾರ್ಯಪಡೆಗೆ ವಿ. ಕಾಮಕೋಟಿ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿದರು.

ಪರೀಕ್ಷಾ ಸುಧಾರಣೆ ಹೊಸ ಸಮಿತಿಯಲ್ಲಿ ಒಬ್ಬ ಮಾಜಿ ಐಬಿ ಮುಖ್ಯಸ್ಥ, ಒಬ್ಬ ಐಟಿ ಕಂಪನಿ ಮಾಲೀಕ, ಮತ್ತೊಬ್ಬ ಗೋಮೂತ್ರ ತಜ್ಞರು ಇದ್ದಾರೆ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಅನುರಾಗ್ ಠಾಕೂರ್, ಭಾರತದ ಅಗ್ರಗಣ್ಯ ವಿಜ್ಞಾನಿಗಳು ಮತ್ತು ಪ್ರಾಧ್ಯಾಪಕರಲ್ಲಿ ಒಬ್ಬರನ್ನು ಗುರಿಯಾಗಿಸಿಕೊಂಡು ಅವರು ನೀಡಿರುವ ಹೇಳಿಕೆಯಿಂದ ತಮಗೆ ದುಃಖವಾಗಿದೆ. ಪ್ರಿಯಾಂಕಾ ಗಾಂಧಿ ಜನರ ದಾರಿ ತಪ್ಪಿಸುತ್ತಾರೆ. ಕಾಂಗ್ರೆಸ್ ನೇತೃತ್ವದ ಹಿಂದಿನ ಸರ್ಕಾರಗಳ ತಪ್ಪುಗಳು ಮತ್ತು ವೈಫಲ್ಯಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಾರೆ ಎಂದು ದೂರಿದರು.

ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರಿಗಿಂತ ಉತ್ತಮರು ಎಂದು ಭಾವಿಸಿದ್ದೆ. ಆದರೆ ಅವರು ಐಐಟಿ ಮದ್ರಾಸ್ ನಿರ್ದೇಶಕರ ಬಗ್ಗೆ ನೀಡಿದ ಹೇಳಿಕೆಯಿಂದ ಸಹೋದರ ಮತ್ತು ಸಹೋದರಿ ಒಂದೇ ಎಂದು ನನಗೆ ಅನಿಸುತ್ತದೆ. ಅವರು ತಮ್ಮ ಮೆದುಳು ಸರಿಯಾಗಿ ಕಾರ್ಯನಿರ್ವಹಿಸಲು ಬಹುಶಃ ಗೋಮೂತ್ರ ಸೇವಿಸುತ್ತಿರಬೇಕು ಎಂದು ಠಾಕೂರ್ ಹೇಳಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ವಿ. ಕಾಮಕೋಟಿ ಹೇಳಿದ್ದೇನು?

ಪರೀಕ್ಷಾ ಸುಧಾರಣೆ ಕಾರ್ಯಪಡೆಗೆ ಆಯ್ಕೆಯಾದ ಮೇಲೆ ಮಾತನಾಡಿದ ವಿ. ಕಾಮಕೋಟಿ, ಕಳೆದ ನಾಲ್ಕು ದಶಕಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. ಇದರಿಂದ ತಾಂತ್ರಿಕ ಹಸ್ತಕ್ಷೇಪ ಅಗತ್ಯವಾಗಿದೆ. ಯಾವುದೇ ಪರೀಕ್ಷಾ ವ್ಯವಸ್ಥೆಯಲ್ಲಿ ಎರಡು ಗುಂಪುಗಳ ಜನರು ವಿಶ್ವಾಸಾರ್ಹರಾಗಿರಬೇಕು. ಮೊದಲನೆಯದಾಗಿ ಪ್ರಶ್ನೆ ಪತ್ರಿಕೆ ಬರೆಯುವವರು ಮತ್ತು ಎರಡನೆಯವರು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು. ನಾವು ಹೇಗೆ ವಿಶ್ವಾಸವನ್ನು ಬೆಳೆಸುತ್ತೇವೆ ಮತ್ತು ಉಳಿಸಿಕೊಳ್ಳುತ್ತೇವೆ ಎಂಬುದು ದೊಡ್ಡ ಸವಾಲಾಗಿದೆ ಎಂದರು.

ಜಮ್ಮು-ಕಾಶ್ಮೀರದಲ್ಲಿ ನೆಲ ಬಾಂಬ್‌ ಸ್ಫೋಟ; ಇಬ್ಬರು ಯೋಧರಿಗೆ ಗಾಯ

2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಳಿಕ ನಮಗೆ ನಂಬಬಹುದಾದ ಶಿಕ್ಷಕರು ಬೇಕು, ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವ, ಸಂಪೂರ್ಣ ಗೌಪ್ಯತೆಯನ್ನು ಕಾಪಾಡುವ ಮತ್ತು ಅದರ ವಿಷಯಗಳನ್ನು ಬಹಿರಂಗಪಡಿಸದೆ ಜವಾಬ್ದಾರಿಯುತರಾಗಿ ಕಾರ್ಯನಿರ್ವಹಿಸುವ ನಿಷ್ಠಾವಂತರು ಬೇಕಾಗಿದೆ. ಆದರೆ ಇದು ದೊಡ್ಡ ಸವಾಲು ಎಂದು ಅವರು ತಿಳಿಸಿದರು.