ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಮೋದಿ ಟಿಎಂಸಿಯನ್ನು ಟೀಕಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸರ್ಕಾರ ಆರೋಪಿಗಳನ್ನು ಪಕ್ಷವು ರಕ್ಷಿಸುತ್ತಿದೆ ಮತ್ತು ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ಆರೋಪಿಸಿದ್ದಾರೆ. 5,400 ಕೋಟಿ ರೂ.ಗಳ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮೋದಿ ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ.
ದುರ್ಗಾಪುರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಇಲ್ಲಿ ಯುವ ವೈದ್ಯೆಯ ಮೇಲೆ ದೌರ್ಜನ್ಯ ನಡೆದಾಗ, ಟಿಎಂಸಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವಲ್ಲಿ ಹೇಗೆ ತೊಡಗಿಸಿಕೊಂಡಿತು ಎಂಬುದನ್ನು ನೀವೆಲ್ಲರೂ ನೋಡಿದ್ದೀರಿ. ಈಗ ಕಾನೂನು ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದೆ. ಇಲ್ಲಿಯೂ ಬಂಗಾಳ ಸರ್ಕಾರ ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದ ಆರೋಪಿಗಳು ಟಿಎಂಸಿ ಜೊತೆಗೆ ನೇರ ಸಂಪರ್ಕ ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಆಡಳಿತ ಪಕ್ಷದ ಕಾನೂನು ಮತ್ತು ಸುವ್ಯವಸ್ಥೆಯ ದಾಖಲೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ, ಟಿಎಂಸಿ ರಾಜ್ಯದಲ್ಲಿ ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದರು. "ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್ನಂತಹ ಗಲಭೆಗಳು ನಡೆಯುತ್ತವೆ ಮತ್ತು ಪೊಲೀಸರು ಏಕಪಕ್ಷೀಯ ಕ್ರಮ ಕೈಗೊಳ್ಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ನ್ಯಾಯವಿಲ್ಲ. ರಾಜ್ಯ ಸರ್ಕಾರವು ರಾಜ್ಯದ ಜನರ ಜೀವಗಳನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Assault: ಕೊಲ್ಕತ್ತಾ ಅತ್ಯಾಚಾರ ಕೇಸ್ನಲ್ಲಿ ಭಾರೀ ಟ್ವಿಸ್ಟ್! ಸಂತ್ರಸ್ತೆ ತಂದೆಯಿಂದ ಅಚ್ಚರಿ ಹೇಳಿಕೆ!
ಟಿಎಂಸಿ ವ್ಯವಹಾರಗಳಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ, ಉದ್ಯಮಿಗಳಿಂದ ಹಣವನ್ನು ಕೇಳಲಾಗುತ್ತಿದೆ, ಟಿಎಂಸಿಯ ಜನರು ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಟಿಎಂಸಿಯ 'ಗುಂಡಾ ತೆರಿಗೆ' ರಾಜ್ಯದಲ್ಲಿ ಹೂಡಿಕೆಗೆ ಅಡ್ಡಿಯಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಈ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಆರನೇ ಬಾರಿ ಪ್ರಧಾನಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ.