Readers Colony: ಸಂವಿಧಾನಕ್ಕೆ ಅಪಚಾರ
ಭಾರತ ಸಂವಿಧಾನದ 164(1) ನೇ ವಿಧಿ ಅತ್ಯಂತ ಸ್ಪಷ್ಟವಾಗಿದೆ. ರಾಜ್ಯಪಾಲರು ಮುಖ್ಯಮಂತ್ರಿ ಯನ್ನು ನೇಮಿಸುತ್ತಾರೆ ಮತ್ತು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಸಚಿವರನ್ನು ನೇಮಿಸಲಾಗು ತ್ತದೆ. ಅಂದರೆ ಸಂಪುಟ ರಚನೆ, ಸಚಿವರ ಆಯ್ಕೆ, ಖಾತೆ ಹಂಚಿಕೆ ಸಂಪೂರ್ಣವಾಗಿ ಮುಖ್ಯಮಂತ್ರಿಯ ಸಂವಿಧಾನಾತ್ಮಕ ಹಕ್ಕು ಮತ್ತು ಹೊಣೆಗಾರಿಕೆ. ಆದರೆ ಕರ್ನಾಟಕದಲ್ಲಿ ನಡೆದಿರುವುದು ಇದಕ್ಕೆ ತದ್ವಿರುದ್ಧ, ಸಂವಿಧಾನ ವಿರೋಧಿ ಬೆಳವಣಿಗೆ.