ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೋಲಾರ ನಗರದ ಎ.ಎಪ್ ಕಲ್ಯಾಣ ಮಂಟಪದಲ್ಲಿ ಸಭೆ ಮಾಡಿ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕರೋನಾ ನಿಯಮ ಉಲ್ಲಂಘನೆ ಮಾಡಿ ಊಟ ಹಾಕಿಸಿದ್ದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ನಮ್ಮ ಕಾಂಗ್ರೆಸ್’ನ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸೂಲೂರು ಅಂಜಿನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್, ಎ.ಎಫ್. ಕನ್ವೆಂಕ್ಷನ್ ಹಾಲ್ ಮಾಲೀಕ ಸೇರಿ 105 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕರೋನಾ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ರೆವಿನ್ಯೂ ಇನ್ಸ್ಪೆಕ್ಟರ್ ವಿಜಯ ದೇವ್ ಮಾಹಿತಿ ನೀಡಿದ್ದಾರೆ.