Monday, 16th September 2024

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ.

ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ದೇಶದಲ್ಲಿ ಕರೋನಾ ವೈರಸ್​ ಇರುವಾಗಲೇ ಚುನಾವಣಾ ರ್ಯಾಲಿ ಗಳಿಗೆ ಅನುಮತಿ ನೀಡಿದ್ದ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್​ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ದೇಶದಲ್ಲಿ ಕರೋನಾ ಎರಡನೇ ಅಲೆಗೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್​ ಹಾಕಬಹುದು ಎಂತಲೂ ಆಕ್ರೋಶ ಹೊರ ಹಾಕಿತ್ತು.

Leave a Reply

Your email address will not be published. Required fields are marked *