Monday, 16th September 2024

ರೈತರು, ಶೋಷಿತ ವರ್ಗದವರ ಧ್ವನಿಯಾಗಿದ್ದವರು ದೊರೆಸ್ವಾಮಿ: ಡಿ.ಕೆ.ಶಿವಕುಮಾರ್

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ

ಬೆಂಗಳೂರು: ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ರೈತರು, ಶೋಷಿತ ವರ್ಗದವರ ಧ್ವನಿಯಾಗಿದ್ದವರು ದೊರೆಸ್ವಾಮಿ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸ್ಮರಿಸಿದ್ದಾರೆ.

‘ನೇರ ನಡೆ, ನುಡಿಯ ದೊರೆಸ್ವಾಮಿ ಅವರು ಹುಟ್ಟು ಹೋರಾಟಗಾರರು. ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ಇವರ ಹೋರಾಟಕ್ಕೆ ಗಾಂಧಿ ಸೇವಾ ಪ್ರಶಸ್ತಿ, ಬಸವ ಪುರಸ್ಕಾರ ಸೇರಿ ಅನೇಕ ಪ್ರಶಸ್ತಿಗಳು ಸಂದಿದ್ದವು.

ಇವರ ಅಗಲಿಕೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧು ಬಳಗದವರು, ಅಭಿಮಾನಿಗಳಿಗೆ ದುಃಖ ಭರುಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *